ಕಲಬುರ್ಗಿ:- ಸ್ವಿಮ್ಮಿಂಗ್ ವೇಳೆ ಅವಘಡ ಸಂಭವಿಸಿ, ವಿದೇಶ ಪ್ರವಾಸಕ್ಕೆ ತೆರಳಿದ್ದ ಕಲ್ಬುರ್ಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಜರುಗಿದೆ.
ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಬಿಗ್ ರಿಲೀಫ್: 3 ವರ್ಷ ಜೈಲು ಶಿಕ್ಷೆ ಅಮಾನತು!
ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕಲ್ಲೂರ್ಕೆ ಗ್ರಾಮದ ಸಂತೋಷ್ ಮಲ್ಲೆದ್ (34) ಮೃತ ಟೆಕ್ಕಿ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಸಂತೋಷ್, ಫೆ.15 ರಂದು ಸ್ನೇಹಿತರೊಂದಿಗೆ ಶ್ರೀಲಂಕಾದ ಕ್ಯಾಂಡಿಗೆ ಪ್ರವಾಸ ಕೈಗೊಂಡಿದ್ದರು. ಹೋಟೆಲ್ನ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುತ್ತಿದ್ದಾಗ ತಲೆಗೆ ಪೆಟ್ಟು ಬಿದ್ದು ಸಂತೋಷ್ ಮೃತಪಟ್ಟಿದ್ದಾರೆ.