ಬೆಂಗಳೂರು:- ಬೆತ್ತಲೆ ಮಾಡಿ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.
Tea Side Effects: `ಚಹಾ’ ಪ್ರಿಯರಿಗೆ ಬಿಗ್ ಶಾಕ್: ಟೀ ಜಾಸ್ತಿ ಕುಡಿದರೆ ʼʼಕ್ಯಾನ್ಸರ್ʼʼ ಬರುತ್ತಂತೆ..!
ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ಮೇಲೆ ಎಸಿಪಿ ಚಂದನ್ ಕುಮಾರ್ರಿಂದ ಹಲ್ಲೆ ಕೇಸ್ ದಾಖಲಿಸಿದ್ದೇವೆ. ಪೊಲೀಸರೇ ಲೋಪ ಎಸಗಿದಾಗ ಅದನ್ನು ಪ್ರಶ್ನೆ ಮಾಡುವ ಹಕ್ಕು ಕೂಡ ಸಾರ್ವಜನಿಕರಿಗೆ ಇದೆ. ಇನ್ನು ಕೆಲವು ಪೊಲೀಸರು ಹೀರೋಗಳಾಗುವುದಕ್ಕೆ ಇತರ ಮಾಡುತ್ತಾರೆ. ಇಂತಹ ಘಟನೆ ಆಗಬಾರದು ಎಂದು ಮನವರಿಕೆ ಮಾಡಲು ಬಂದಿದ್ದೇವೆ. ಎಸಿಪಿ ಚಂದನ್ ಅವರ ಮೇಲೆ ನನಗೆ ಯಾವುದೇ ದ್ವೇಷ ಇಲ್ಲ ಎಂದರು.
ಘಟನೆ ವೇಳೆ ಬಂದಂತಹ ಅಬ್ದುಲ್ ರಜಾಕ್ ಮೇಲೆ ಯಾವುದೇ ಕೇಸ್ ದಾಖಲಿಸಲ್ಲ. ಆದರೆ, ಸಾರ್ವಜನಿಕರ ಹಿತದೃಷ್ಟಿಯಿಂದ ಅಲ್ಲಿಗೆ ಹೋದವರನ್ನ ಠಾಣೆಗೆ ಕರೆದುಕೊಂಡು ಬಂದು ಹಲ್ಲೆ ಮಾಡ್ತೀರಾ?, ಅವರ ಬಟ್ಟೆ ಬಿಚ್ಚಿಸುತ್ತಿರಾ ಅಥವಾ ಇಲ್ಲಿ ಸಲಿಂಗ ಕಾಮಿಗಳು ಇದ್ದಾರಾ ಎಂದು ಪೊಲೀಸರ ವಿರುದ್ದ ಕಿಡಿಕಾರಿದರು.