ಶಿಡ್ಲಘಟ್ಟ: ಪರ ಪುರುಷ ನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪತಿ ಪೋಲೀಸರಿಗೆ ಶರಣಾಗಿದ್ದಾನೆ.
Bagalakote: ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ… ವಿದ್ಯುತ್ ಸ್ಪರ್ಶದಿಂದ ಇಬ್ಬರು ಸಾವು…!
ತಾಲ್ಲೂಕಿನ ಸೊಣ್ಣೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮುಂಜಾನೆ 6 ಗಂಟೆ ಸಮಯದಲ್ಲಿ ಮುನಿರೆಡ್ಡಿ ತನ್ನ ಮೊದಲನೆಯ ಪತ್ನಿ ಪದ್ಮಮ್ಮ(50) ಮನೆ ಬಳಿ ತೆರಳಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಶಿಡ್ಲಘಟ್ಟ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಶರಣಾಗಿದ್ದಾನೆ.
ಕೆಲ ವರ್ಷಗಳಿಂದ ಪತ್ನಿಯಿಂದ ದೂರವಿದ್ದ ಮುನೇಗೌಡ ಮತ್ತೊಂದು ಮದುವೆ ಆಗಿದ್ದರು. ಮೊದಲನೆಯ ಪತ್ನಿ ಪದ್ಮಮ್ಮ ತನ್ನ ಗಂಡನಿಂದ ಜೀವನ ಭತ್ಯೆಗಾಗಿ ಆಸ್ತಿಯಲ್ಲಿ ಪಾಲು ಕೇಳಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಹಾಗು ಅನೈತಿಕ ಸಂಬಂಧ ಶಂಕೆ ಸೇರಿದಂತೆ ಹಲವು ಕಾರಣಗಳಿಂದ ಕೊಲೆ ನಡೆದಿರಬಹುದು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಿಎಲ್ ನಾಗೇಶ್ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಡಿವೈಎಸ್ ಪಿ ಮುರಳಿಧರ್, ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಐಪಿಎಸ್ ಕೆ. ಸತೀಶ್, ವೇಣುಗೋಪಾಲ್ ಇತರ ಸಿಬ್ಬಂದಿ ಸ್ಥಳ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.