ಬಳ್ಳಾರಿ: ನಾಸೀರ್ ಹುಸೇನ್ ಬೆಂಬಲಿಗರು ಗೆಲುವಿನ ಸಂಭ್ರಮದ ನಡುವೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರೋ ಆರೋಪಗಳು ಕೇಳಿ ಬಂದಿದೆ. ವಿಧಾನಸೌಧದ ಆವರಣದಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಈ ಘಟನೆ ಸದ್ಯ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಘಟನೆ ಸಂಬಂಧ ಬಳ್ಳಾರಿಯ ಮೋತಿ ವೃತ್ತದಲ್ಲಿ ಮಾನವ ಸರಪಳಿ ಮಾಡಿ ಬಿಜೆಪಿ ಕಾರ್ಯಕರ್ತ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೋತಿ ವೃತ್ತದಿಂದ ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ಕಚೇರಿವರೆಗೆ ಪ್ರತಿಭಟನೆ ನಡೆಸಿ ಜೈಶ್ರೀರಾಮ ಘೋಷಣೆ ಮೂಲಕ ಕಚೇರಿ ಮುತ್ತಿಗೆ ಹಾಕಲು ಯತ್ನ ಮಾಡಿದ್ದಾರೆ. ಈ ವೇಳೆ ಪೊಲೀಸರು ಕಚೇರಿ ಮುಂಭಾಗದಲ್ಲಿ ತಡೆದಿದ್ದಾರೆ. ರಾಜ್ಯಸಭೆ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಇಲ್ಲಾದ್ರೇ ವಜಾಗೊಳಿಸುವಂತೆ ದೇಶವಿರೋಧಿ ನಾಸೀರ್ ಹುಸೇನ್ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಭಾರತದ ಧ್ವಜ ಹಿಡಿದುಕೊಂಡು ಬಂದು ಪ್ರತಿಭಟನೆ ಮಾಡ್ತಿರೋ ಬಿಜೆಪಿ ಕಾರ್ಯಕರ್ತರು, ಕಚೇರಿ ಮುಂದೆ ರೋಷಾವೇಷ ಪೊಲೀಸರ ನಿಯಂತ್ರಣಕ್ಕೆ ಬಾರದ ಪ್ರತಿಭಟನೆ.. ಕಚೇರಿಯೊಳಗೆ ನುಗ್ಗುಲು ಯತ್ನಸಿದ್ದಾರೆ. ಕಚೇರಿ ಮುಂದೆ ಇರೋ ಬೋರ್ಡ್ ಗೆ ಕಟ್ಟಿಗೆಯಿಂದ ಹೊಡೆದ ಕಾರ್ಯಕರ್ತರು, ಬೋರ್ಡ್ ಕಿತ್ತಲು ಯತ್ನ ಪ್ರತಿಭಟನಾಕಾರರ ನಿಯಂತ್ರಣ ಮಾಡಲು ಹೈರಾಣದ ಪೊಲೀಸರು, ಪೊಲೀಸರ ವಿರುದ್ಧವೂ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು
![](https://ainlivenews.com/wp-content/uploads/2024/01/Ad-Banner-copy-scaled.jpg)