ಕಲಬುರಗಿ: ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ದಿಗೆ ಬದ್ಧವಾಗಿದ್ದು ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ ಎಂ ಸಿ ಸುಧಾಕರ ಹೇಳಿದರು. ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ನಡೆದ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡ ಅಂದಾಜು ಮೊತ್ತ ರೂ 800 ಲಕ್ಷ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಂದಾಜು ಮೊತ್ತ ರೂ 625.95 ಲಕ್ಷ ಕಟ್ಟಡದ ಅಡಿಗಲ್ಲು ಸಮಾರಂಭ ನೆರವೇರಿಸಿ ಅವರು ಮಾತನಾಡುತ್ತಿದ್ದರು.
![Demo](https://ainlivenews.com/wp-content/uploads/2023/12/spoorthi-1.jpg)
ಸಿಎಂ ಸಿದ್ದರಾಮಯ್ಯ ನವರು 25 ನೂತನ ಪಾಲಿಟೆಕ್ನಿಕ್ ಕಾಲೇಜುಗಳನ್ನು ಘೋಷಿಸಿದ್ದರು.. ಪರಿಣಾಮ ಆಳಂದ ಪಟ್ಟಣದಲ್ಲಿ ಅಂದಾಜು 8 ಕೋಟಿ ವೆಚ್ಚದಲ್ಲಿ ನೂತನ ಕಾಲೇಜು ಮಂಜೂರಾಗಿದೆ. ಅಂತ ಹೇಳಿದ್ರು..ಇಂತಹ ಅಭಿವೃದ್ಧಿ ಕಾರ್ಯಗಳ ಹಿಂದೆ ಕ್ಷೇತ್ರದ ಶಾಸಕ ಬಿಆರ್ ಪಾಟೀಲರ ಅವಿರತ ಶ್ರಮವಿದೆ ಅಂದ್ರು..ಸಚಿವ ಪ್ರಿಯಾಂಕ್ ಖರ್ಗೆ MLC ತಿಪ್ಪಣ್ಣಪ್ಪ ಕಮಕನೂರ್ ಸೇರಿದಂತೆ ಇತರರಿದ್ರು..
![](https://ainlivenews.com/wp-content/uploads/2024/01/Ad-Banner-copy-scaled.jpg)