ಬೆಂಗಳೂರು:– ಅಡ್ಡಮತದಾನ ಹಿನ್ನೆಲೆ ಸೋಮಶೇಖರ್ ಭಾವಚಿತ್ರಕ್ಕೆ ಮಸಿ ಬಳಿದು ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ.
ಯಶವಂತಪುರದಲ್ಲಿರುವ ಸೋಮಶೇಖರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಭಾವಚಿತ್ರಕ್ಕೆ ಮಸಿ ಬಳಿದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಡುರಸ್ತೆಯಲ್ಲೇ ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದು, ಜೆಡಿಎಸ್ ಕಾರ್ಯಕರ್ತರೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಕೆಂಗೇರಿ ಹೊಯ್ಸಳ ಸರ್ಕಲ್ನಲ್ಲಿ ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡ ಮತ್ತು ಯಶವಂತಪುರ ಕ್ಷೇತ್ರದಲ್ಲಿ ಸೋತ ಅಭ್ಯರ್ಥಿ ಜವರಾಯೀಗೌಡ ಭಾಗಿಯಾಗಿದ್ದರು
![](https://ainlivenews.com/wp-content/uploads/2024/01/Ad-Banner-copy-scaled.jpg)