ಮಂಡ್ಯ: ಮಂಡ್ಯ ಲೋಕಸಭಾ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಪ್ರಚಾರದಲ್ಲಿ ಭಾಗಿಯಾಗಿದ್ದ ದರ್ಶನ್, ತಾನು ಚಂದ್ರು ಅವರ ಪರವಾಗಿ ಯಾಕೆ ಮತ ಪ್ರಚಾರ ಮಾಡುತ್ತಿದ್ದೇನೆ ಎನ್ನುವುದನ್ನು ಸ್ಪಷ್ಟ ಪಡಿಸಿದರು. ಈ ಹಿಂದೆ ಸುಮಲತಾ ಅಂಬರೀಶ್ ಅವರು ಪಕ್ಷೇತರರಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಸಚಿವ ಚೆಲುವರಾಯ ಸ್ವಾಮಿ ಅವರು ಸಾಕಷ್ಟು ಸಹಾಯ ಮಾಡಿದ್ದರಂತೆ.
ಅದರ ಋಣ ತೀರಿಸಲು ಬಂದಿರುವುದಾಗಿ ಇಂದು ದರ್ಶನ್ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ತಾವು ಬಿಜೆಪಿಗೆ ಬಂದರೂ, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ದರ್ಶನ್ ಪ್ರಚಾರ ಮಾಡುತ್ತಿರುವುದರ ಬಗ್ಗೆ ಸ್ವತಃ ಸುಮಲತಾ ಅಂಬರೀಶ್ ಅವರೇ ಸ್ಪಷ್ಟನೆ ನೀಡಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ‘ದರ್ಶನ್ ಯಾರ ಪರ ಪ್ರಚಾರ ಮಾಡಬೇಕು,
DRUMSTICK LEAVES: ನುಗ್ಗೆಕಾಯಿ ಮಾತ್ರ ಅಲ್ಲ, ನುಗ್ಗೆ ಸೊಪ್ಪಲ್ಲೂ ಅಡಗಿದೆ ಆರೋಗ್ಯದ ಗುಟ್ಟು!
ಮಾಡಬಾರದು ಎನ್ನುವುದನ್ನು ನಾನು ನಿರ್ಧರಿಸೋಕೆ ಆಗಲ್ಲ. ಅದು ಅವರ ವೈಯಕ್ತಿಕ’ ಎಂದು ಹೇಳುವ ಮೂಲಕ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದರು. ಸದ್ಯ ದರ್ಶನ್ ಮಂಡ್ಯ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚರಿಸಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಕೈಗೆ ಸರ್ಜರಿ ಆಗಿದ್ದರೂ, ಅದನ್ನು ಲೆಕ್ಕಿಸದೇ ಮತಯಾಚನೆ ಮಾಡುತ್ತಿದ್ದಾರೆ. ಜೊತೆಗೆ ಡಿ.ಕೆ ಸುರೇಶ್ ಪರವೂ ಪ್ರಚಾರಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ.