ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಇತ್ತೀಚೆಗಷ್ಟೇ ಉಡುಪಿಯಲ್ಲಿ ಪರ್ಯಾಯ ಅದಮಾರು ಮಠದ ವಿಶ್ವರೂಪಂ ಕಾರ್ಯಕ್ರಮದಲ್ಲಿ ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು. ಮುಸ್ಲಿಮರು, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಅಂತ ಹೇಳುವ ಮೂಲಕ ವಿವಾದ ಸೃಷ್ಟಿಸಿದ್ರು.
ಈ ವಿವಾದಾತ್ಮಕ ಹೇಳಿಕೆ ನೀಡಿ, ನಂತರ ಕ್ಷಮೆಯಾಚಿಸಿದ್ರು.ಈ ಬಗ್ಗೆ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಸ್ಟೋರಿಯನ್ನ ಹಾಕಿದ್ದು, ಈ ಮನುಷ್ಯನ ಬುರುಡೆಯಲ್ಲಿ ಮೆದುಳು ಇಲ್ಲ ಅಂತ ಸೂರ್ಯ ಫೋಟೋವನ್ನ ಹಂಚಿಕೊಂಡು ಕ್ಯಾಪ್ಷನ್ ಹಾಕಿದ್ದಾರೆ. ಸಂಸದ ತೇಜಸ್ವಿ ಸೂರ್ಯನ ಬುರುಡೆಯಲ್ಲಿ ಮೆದುಳೇ ಇಲ್ಲ ಎಂದು ನಟಿ ರಮ್ಯಾ ವಾಗ್ದಾಳಿ ಮಾಡಿದ್ದಾರೆ.
