ಬೆಂಗಳೂರು: ಹೆಣ್ಣೂರು ಮುಖ್ಯರಸ್ತೆಯಲ್ಲಿರುವ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಎರಡು ದಿನಗಳಾಯಿತು. ಕುಸಿದ ಕಟ್ಟಡದ ಅವಶೇಷಗಳನ್ನು ಇಲ್ಲಿ ನೋಡಬಹುದು. ಈ ದುರಂತದಲ್ಲಿ 8 ಜನ ಸಾವಿಗೀಡಾಗಿದ್ದಾರೆ. ಈ ದುರಂತದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ವಾಲಿದ್ದು, ಬಲಿ ಪಡೆಯಲು ಸಿದ್ಧವಾಗಿದೆಯಾ ಎಂಬ ಅನುಮಾನಗಳು ಕಾಡುತ್ತಿದೆ.
ಹೌದು ನಗರದ ಹೊರಮಾವು ಪ್ರದೇಶದ ನಂಜಪ್ಪ ಗಾರ್ಡನ್ನಲ್ಲಿರುವ ಪುಟ್ಟಪ್ಪ ಮಾಲೀಕತ್ವದ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಬಲಭಾಗಕ್ಕೆ ವಾಲಿದೆ. 12*30 ಜಾಗದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಸದ್ಯ ವಾಲಿರುವುದರಿಂದ ಸುತ್ತಮುತ್ತಲಿನ ಪ್ರದೇಶದ ಜನರಲ್ಲಿ ಆತಂಕ ಶುರುವಾಗಿದೆ. ಗ್ರೌಂಡ್ ಫ್ಲೋರ್ ಸೇರಿದಂತೆ ನಾಲು ಅಂತಸ್ತಿನ ಕಟ್ಟಡಕ್ಕೆ ಮಾಲೀಕ ಪುಟ್ಟಪ್ಪ ಅನುಮತಿ ಪಡೆದಿದ್ದ.
ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್! 2027 ರೊಳಗೆ ದೇಶದ 11 ಕೋಟಿ ರೈತರಿಗೆ ‘ಡಿಜಿಟಲ್ ಐಡಿ’ ಕಾರ್ಡ್
ಆದರೆ ನಿಯಮ ಮೀರಿ ಆರಂತಸ್ತಿನ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ನೋಟಿಸ್ಗೆ ಉತ್ತರ ನೀಡಿರುವ ಮಾಲೀಕ ಕಟ್ಟಡ ಸ್ವಂತ ಖರ್ಚಿನಲ್ಲಿ ತೆರವು ಮಾಡೋದಾಗಿ ಪತ್ರ ಬರೆದಿದ್ದಾರೆ. ಸದ್ಯ ವಾಲಿದ ಕಟ್ಟಡ ತೆರವಿಗೆ ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಬಾಣಸವಾಡಿ ಉಪ ವಿಭಾಗದ ಎಸಿಪಿ ಉಮಾಶಂಕರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.