ಹಾವೇರಿ- ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಇಂದು ಹಾವೇರಿ ಜಿಲ್ಲಾಧಿಕಾರಿ ಕಚೇರಿ ಬಳಿ ಆಶಾ ಕಾರ್ಯಕರ್ತೆರು ಪ್ರತಿಭಟನೆ ಮಾಡಿದರು.ಆರ್ ಸಿ ಎಚ್ ಪೋರ್ಟಲ್ ನಲ್ಲಿ ತಾಂತ್ರಿಕ ದೋಷ ಇದೆ.ಇಲ್ಲಿ ನಮಗೆ ಸರಿಯಾಗಿ ಸಂಬಳ ಹಾಗೂ ಸೌಲಭ್ಯಗಳು ದೊರೆಯುತ್ತಿಲ್ಲಾ.ಇದರಿಂದ ಹಲವು ಸಮಸ್ಯೆ ಉಂಟಾಗಿವೆ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಜಿಲ್ಲೆಯಿಂದ ನೂರಾರು ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿ ನ್ಯಾಯಕ್ಕಾಗಿ ಒತ್ತಾಯಿಸಿದರು.ಕಳೆದ ಹಲವು ತಿಂಗಳಿನಿಂದ ಸಂಬಳ ಆಗದೆ ಕುಟಂಬ ನಡೆಸಲು ಕಷ್ಟವಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು.
ವಿವಿಧ 15 ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.ನಮ್ಮ ಬೇಡಿಕೆಗಳನ್ನು ಪೂರೈಸದಿದ್ದರೆ ಮುಂದೆ ಉಗ್ರವಾದ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದರು.