ದಕ್ಷಿಣ ಅಮೆರಿಕದ ಪರಾಗ್ವೆಯ ಹಿರಿಯ ಅಧಿಕಾರಿಯೊಬ್ಬರು ಅಸ್ತಿತ್ವದಲ್ಲಿಲ್ಲದ ದೇಶದೊಂದಿಗೆ ಸಹಕಾರ ಜ್ಞಾಪಕ ಪತ್ರಕ್ಕೆ ಸಹಿ ಹಾಕಿದ ನಂತರ ಅವರನ್ನು ವಜಾ ಮಾಡಲಾಗಿದೆ. ಭಾರತದಿಂದ ತಲೆಮರೆಸಿ ಕೊಂಡಿರುವ ಸ್ವಾಮಿ ನಿತ್ಯಾನಂದನ ಕಪೋಕಲ್ಪಿತ ದೇಶ ‘ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ’ ಅಧಿಕೃತ ದೇಶವೆಂದು ತಿಳಿದುಕೊಂಡು ಅಧಿಕಾರಿ ಅಲ್ಲಿನ ಅಧಿಕಾರಿಗಳು ಎಂದು ಹೇಳಿಕೊಂಡು ಬಂದವರ ಜತೆ ಮಾತುಕತೆ ನಡೆಸಿದ್ದಾರೆ.
ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸದ ಉದ್ದೇಶಿತ ಅಧಿಕಾರಿಗಳೊಂದಿಗೆ ಡಾಕ್ಯುಮೆಂಟ್ಗೆ ಸಹಿ ಹಾಕಿದ ನಂತರ ಕೃಷಿ ಸಚಿವರ ಸಿಬ್ಬಂದಿಯ ಮುಖ್ಯಸ್ಥ ಹುದ್ದೆಯಿಂದ ತನ್ನನ್ನು ವಜಾಗೊಳಿಸಲಾಗಿದೆ ಎಂದು ಅರ್ನಾಲ್ಡೊ ಚಮೊರೊ ಸುದ್ದಿಗಾರರಿಗೆ ತಿಳಿಸಿದರು. ‘ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ’ ದಕ್ಷಿಣ ಅಮೆರಿಕದ ದ್ವೀಪ ಹಾಗೂ ಅಧಿಕೃತ ದೇಶವೆಂದು ಅವರಿಗೆ ಪ್ರಸ್ತುತಪಡಿಸಲಾಗಿದೆ.
ಹೆಚ್ಚುತ್ತಲೇ ಇದೆ PM ಮೋದಿ ಕ್ರೇಜ್ – 2 ಕೋಟಿ ಚಂದಾದಾರರ ಸಂಖ್ಯೆ ದಾಟಿತು ಯೂಟ್ಯೂಬ್ ಚಾನೆಲ್
ಅಲ್ಲಿನ ಅಧಿಕಾರಿಗಳೆಂದು ಹೇಳಿಕೊಂಡು ಬಂದು ಪರಾಗ್ವೆಗೆ ಸಹಾಯ ಮಾಡಲು ಇಚ್ಛೆಯನ್ನು ವ್ಯಕ್ತಪಡಿಸಿದರು. ಅವರು ಹಲವಾರು ಯೋಜನೆಗಳನ್ನು ಪ್ರೆಸೆಂಟೇಷನ್ ಮಾಡಿದರು, ನಾವು ಅದನ್ನು ಕೇಳಿದೆವು, ಅಷ್ಟೇ ಎಂದು ತಾವು ಮೂರ್ಖರಾಗಿ ರುವುದನ್ನು ಒಪ್ಪಿಕೊಂಡರು. ಅವರನ್ನು ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ನಕಲಿ ಅಧಿಕಾರಿಗಳು ತಮ್ಮ ಸಚಿವ ಕಾರ್ಲೋಸ್ ಗಿಮೆನೆಜ್ ಅವರನ್ನು ಭೇಟಿಯಾದರು ಎಂದೂ ಚಮೊರೊ ಹೇಳಿದರು. ಆದರೆ, ಅವರ ಉದ್ದೇಶ ತಿಳಿದು ಬಂದಿಲ್ಲ. ಎರಡು ಪಕ್ಷಗಳು ಸಹಿ ಮಾಡಿದ ಜ್ಞಾಪಕ ಪತ್ರವು ಎರಡು “ದೇಶಗಳ” ನಡುವೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸುವುದನ್ನು ಕಲ್ಪಿಸಿದೆ ಎಂದೂ ಹೇಳಲಾಗಿದೆ.