ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅರೆಸ್ಟ್ ಆಗಿರುವ ವಿಚಾರವಾಗಿ ಕಿಚ್ಚ ಸುದೀಪ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ದಿನವಿಡಿ ಕಂಪ್ಯೂಟರ್ ಮುಂದೆ ಕೂತು ಕೆಲಸ ಮಾಡ್ತಿದ್ದೀರಾ!?.. ಹಾಗಿದ್ರೆ ಕಣ್ಣಿನ ಹಾರೈಕೆ ಹೀಗಿರಲಿ!
ಈ ಸಂಬಂಧ ಮಾತನಾಡಿದ ಅವರು,ನನಗೆ ಗೊತ್ತಿರೋದು ಇಷ್ಟೇ.. ನೀವು (ಮಾಧ್ಯಮ) ಏನು ತೋರಿಸುತ್ತಿದ್ದೀರೋ ನಾವು ಅದನ್ನೇ ನೋಡಿ ವಿಚಾರ ತಿಳಿದುಕೊಳ್ಳುತ್ತಿದ್ದೇವೆ. ಅದರಲ್ಲಿ ಅರ್ಥ ಆಗಿರೋದು ಏನೆಂದರೆ, ಮಾಧ್ಯಮ ಮತ್ತು ಪೊಲೀಸ್ ಸಿಬ್ಬಂದಿ ಬಹಳ ಪ್ರಯತ್ನ ಹಾಕಿ ಸತ್ಯಾಂಶ ಹೊರತರಲು ಸಾಕಷ್ಟು ಕೆಲಸ ಮಾಡುತ್ತಿದ್ದೀರಿ. ಅದರಲ್ಲಿ ಎರಡನೇ ಮಾತೇ ಇಲ್ಲ’ ಎಂದರು.
ನನಗೆ ಗೊತ್ತಿರುವ ಹಾಗೆ, ಇತ್ತೀಚಿಗೆ ನಾನು ನಿಮ್ಮ ನ್ಯೂಸ್ನಲ್ಲಿ ನೋಡಿದ್ದು, ಸಿಎಂ ಅವರೇ ಈ ಪ್ರಕರಣದ ಬಗ್ಗೆ ಹಠ ಹಿಡಿದು ಕೂತಿದ್ದಾರೆ. ಕರ್ನಾಟಕದ ದೊಡ್ಡ ಸ್ಥಾನದಲ್ಲಿ ಇರುವ ಅವರು, ಮಾಧ್ಯಮದವರು ಹಾಗೂ ಪೊಲೀಸರು ಸರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದಾಗ, ಕಾಮನ್ ಮ್ಯಾನ್ ಆಗಿ ನನ್ನ ಪ್ರಕಾರ ಕಲಾವಿದರ ಹೆಸರು ಬರಲ್ಲ. ನಾನು ಅವರ ಪರ, ಇವರ ಪರ ಅಂತ ಮಾತಾಡುವುದು ತಪ್ಪಾಗುತ್ತದೆ. ವಿರುದ್ಧವಾಗಿ ಮಾತನಾಡಿದರೂ ತಪ್ಪಾಗತ್ತೆ’ ಎಂದಿದ್ದಾರೆ ಸುದೀಪ್.
ಆ ಕುಟುಂಬಕ್ಕೆ ನ್ಯಾಯ ಸಿಗಬೇಕು. ಆ ಹೆಣ್ಮಗುಗೆ ನ್ಯಾಯ ಸಿಗಬೇಕು. ಬಾಳಿ ಬದುಕಬೇಕಾದ ರೇಣುಕಾ ಸ್ವಾಮಿ ಅವರು ಎಲ್ಲೋ ರಸ್ತೆಯಲ್ಲಿ ಆ ರೀತಿ ಬಿದ್ದಿದ್ದರಲ್ಲ, ಅವರಿಗೆ ನ್ಯಾಯ ಸಿಗಬೇಕು. ಹುಟ್ಟಬೇಕಾಗಿರುವ ಆ ಮಗುಗೆ ನ್ಯಾಯ ಸಿಗಬೇಕು. ಎಲ್ಲಕ್ಕಿಂತ ಮುಖ್ಯವಾಗಿ ನ್ಯಾಯದ ಮೇಲೆ ಎಲ್ಲರಿಗೂ ನಂಬಿಕೆ ಹುಟ್ಟುಬೇಕು ಎಂದರೆ ಈ ಕೇಸ್ನಲ್ಲಿ ಒಳ್ಳೆಯ ನ್ಯಾಯ ಆಗಬೇಕು’ ಎಂದಿದ್ದಾರೆ ಕಿಚ್ಚ ಸುದೀಪ್.
ನಾನು ಇಷ್ಟು ಹೇಳಬಲ್ಲೆ, ಮಾಧ್ಯಮದವರು ತೋರಿಸಿದ್ದು ನಮಗೆ ಗೊತ್ತೇ ಹೊರತು ನಾನು ಸ್ಟೇಷನ್ ಒಳಗೆ ಇಲ್ಲ. ಯಾವ ಸ್ಥಳದಲ್ಲೂ ನಾವು ಇಲ್ಲ. ಆ ಕುಟುಂಬಕ್ಕಾಗಿ ಎಲ್ಲರ ಹೃದಯ ಮಿಡಿಯುತ್ತಿದೆ. ವಾತಾವರಣ ಏನೋ ಸರಿ ಕಾಣಿಸುತ್ತಿಲ್ಲ. ಚಿತ್ರರಂಗಕ್ಕೆ ನ್ಯಾಯ ಸಿಗಬೇಕು. ಎಲ್ಲ ಕಾರಣಕ್ಕೂ ಚಿತ್ರರಂಗದ ಮೇಲೆ ಆರೋಪ ಬರುತ್ತದೆ. ಚಿತ್ರರಂಗಕ್ಕೆ ಒಂದು ಕ್ಲೀನ್ಚಿಟ್ ಬೇಕಾಗಿದೆ. ಕಲಾವಿದರು ತುಂಬ ಜನ ಇದ್ದಾರೆ. ಚಿತ್ರರಂಗ ಎಂದರೆ ಒಬ್ಬರು-ಇಬ್ಬರು ಅಲ್ಲ ಎಂದರು.