ಬೆಂಗಳೂರು: ಪ್ರಿಯ ವೀಕ್ಷಕರೆ ಇದು ರಾಜ್ಯವೇ ಖುಷಿ ಕೊಡ ಸುದ್ದಿ ಎನು ಇದು ಹೀಗೆ ಹೇಳುತಾ ಇದ್ದೀರಾ ಅಂತ ಅನ್ನುತೀರಾ ಹೌದು ವೀಕ್ಷಕರೆ ಈ ಸುದ್ದಿ ನೋಡಿ ನಿಮಗೆ ಗೊತ್ತಾಗುತ್ತದೆ
ಇದು ರಾಜ್ಯವೇ ಖುಷಿ ಪಡುವ ಸುದ್ದಿ ಎನ್ನುತ್ತಾ ನ್ಯೂಸ್ ಮಾಡುತ್ತಿದ್ದ ದಿವ್ಯಾ ವಸಂತ್ (Divya Vasanth) ಇದೀಗ ಸುದ್ದಿಯಾಗುತ್ತಿದ್ದಾರೆ. ಅದರಲ್ಲೂ ಸುಲಿಗೆ ಆರೋಪವನ್ನು ಎದುರಿಸುತ್ತಿರುವ ಅವರು ಕಳೆದೊಂದು ದಿನದಿಂದ ನಾಪತ್ತೆಯಾಗಿದ್ದಾರೆ.ಇಂದಿರಾನಗರ ಸ್ಪಾ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರು. ಹಣ ಸುಲಿಗೆಗೆ ಯತ್ನಿಸಿದ್ದರು .ಈ ಬೆದರಿಕೆ ಸಹಿಸಲಾರದೆ ಸ್ಪಾ ವ್ಯವಸ್ಥಾಪಕ, ಜೆ.ಬಿ.ನಗರ ಠಾಣೆಗೆ ದೂರು ನೀಡಿದ್ದರು. ಇನ್ನು ಪ್ರಕರಣ ಸಂಬಂಧ ‘ರಾಜ್ ನ್ಯೂಸ್’ (Raj News) ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ ಇಬ್ಬರನ್ನು ಜಿ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ.
ಸುದ್ದಿವಾಹಿನಿಯ ಸಿಇಒ ರಾಜಾನುಕುಂಟೆ ವೆಂಕಟೇಶ್ (CEO Rajanakunte Venkatesh) ಹಾಗೂ ನಿರೂಪಕಿ ದಿವ್ಯಾ ವಸಂತಾ ಸೋದರ ಸಂದೇಶ್ ಬಂಧಿತರಾಗಿದ್ದು, ಆರೋಪಿಗಳಿಂದ 3 ಮೊಬೈಲ್ ಜಪ್ತಿ ಮಾಡಲಾಗಿದೆ. ಖಾಸಗಿ ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿದ್ದ ದಿವ್ಯಾ, ಒಂದು ತಿಂಗಳ ಹಿಂದಷ್ಟೇ ಕೆಲಸ ಬಿಟ್ಟಿದ್ದಳು. ಅಲ್ಲದೆ ಇನ್ಸ್ಟಾಗ್ರಾಂ ಹಾಗೂ ಫೇಸ್ಬುಕ್ (Facebook) ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ, ರೀಲ್ಸ್ಗಳ ಮೂಲಕ 75 ಸಾವಿರಕ್ಕೂ ಹೆಚ್ಚು ಮಂದಿ ಪಾಲವರ್ಸ್ ಹೊಂದಿದ್ದರು .
ಮುಖ್ಯಮಂತ್ರಿಗಳ ಎದುರೇ ಹೆಚ್.ಸಿ.ಮಹದೇವಪ್ಪ ವಿರುದ್ಧ ಕೈ ಶಾಸಕ ಗರಂ!
ಇನ್ನು ಖಾಸಗಿ ಸುದ್ದಿವಾಹಿನಿಯಲ್ಲಿ ಪ್ರತಿ ತಿಂಗಳು 15 ರಿಂದ 20 ಸಾವಿರ ರು. ಸಂಬಳ ಪಡೆಯುತ್ತಿದ್ದರೆ ಮನರಂಜನಾ ವಾಹಿನಿ ಯಲ್ಲಿ ಹಾಸ್ಯ ಕಾರ್ಯಕ್ರಮದಲ್ಲಿ ನಟಿಸುತ್ತಿದ್ದ ಆಕೆಗೆ ವಾರಕ್ಕೆ 6 ರಿಂದ 7 ಸಾವಿರ ರು. ಸಂಭಾವನೆ ಸಿಗುತ್ತಿತ್ತು.
ಐಷಾರಾಮಿ ಜೀವನಕ್ಕೆ ಮಾರುಹೋಗಿದ್ದ ದಿವ್ಯಾ ವಸಂತ್ ಸುಲಭವಾಗಿ ಹಣ ಸಂಪಾದಿಸಲು ಅಡ್ಡ ಮಾರ್ಗ ತುಳಿದು ಸಂಕಷ್ಟಕ್ಕೆ ತುತ್ತಾಗಿದ್ದಾಳೆ .ಸುಲಿಗೆ ಕೃತ್ಯಗಳಿಗೆ ವಾಟ್ಸ್ ಆಪ್ನಲ್ಲಿ ‘ಸೈ ರಿಸರ್ಚ್ ಟೀಂ’ (Sci Research Team) ಹೆಸರಿನ ಗ್ರೂಪ್ ಅನ್ನು ವೆಂಕಟೇಶ್ ಹಾಗೂ ದಿವ್ಯಾ ಮಾಡಿಕೊಂಡಿದ್ದರು. ಈಗಾಗಲೇ 100ಕ್ಕೂ ಹೆಚ್ಚಿನ ಜನರಿಂದ ಈ ತಂಡ ಸುಲಿಗೆ ಮಾಡಿದೆ.ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಕರಣ ಸಂಬಂಧ ಲಗ್ಗೆರೆಯಲ್ಲಿರುವ ದಿವ್ಯಾ ಮನೆ ಮೇಲೆ ಪೊಲೀಸರು ದಾಳಿ ನಡೆಸಿ, ಕೆಲ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಬಂಧನ ಭೀತಿಗೊಳಗಾದ ದಿವ್ಯಾ, ಮನೆಯಲ್ಲಿದ್ದ ಕ್ಯಾಮೆ ರಾ, ಲ್ಯಾಪ್ಟಾಪ್ (Laptop) ಸೇರಿ ಕೆಲ ವಸ್ತು ಗಳನ್ನು ತೆಗೆದುಕೊಂಡು ಕಾರಿನಲ್ಲಿ ಪರಾರಿಯಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಇನ್ನು ಸಂತ್ರಸ್ತರಿಂದ 80 ಸಾವಿರ, 50 ಸಾವಿರ ಹಾಗೂ 1 ಲಕ್ಷ ರು.ವರೆಗೆ ಆನ್ಲೈನ್ ಮೂಲಕ ತಮ್ಮ ಖಾತೆಗಳಿಗೆ ವೆಂಕಟೇಶ್ ಹಾಗೂ ದಿವ್ಯಾ ಹಣ ವರ್ಗಾಯಿಸಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.ಈಗ ಸುಲಿಗೆ ಯತ್ನ ಪ್ರಕರಣದಲ್ಲಿ ತಮ್ಮ ಮಕ್ಕಳು ಸಿಕ್ಕಿಬಿದ್ದರಿಂದ ತೀವ್ರವಾಗಿ ನೊಂದಿರುವ ದಿವ್ಯಾವಸಂತ್ ತಾಯಿ, ಜಿ.ಬಿ.ನಗರ (G B Nagar) ಠಾಣೆಗೆ ತೆರಳಿ ಕಣ್ಣೀರಿಟ್ಟಿದ್ದಾರೆ.