ಬೆಂಗಳೂರು:- ಬ್ಯಾಟರಾಯನಪುರ ಠಾಣೆಯಲ್ಲಿ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಇನ್ಸ್ಪೆಕ್ಟರ್ ವಿರುದ್ಧ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ವ್ಹೀಲಿಂಗ್ ಮಾಡೋದನ್ನ ಪ್ರಶ್ನಿಸಿದ್ದಕ್ಕೆ ಹಲ್ಲೆಗೆ ಯತ್ನ: ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ!
ಈ ಮೂಲಕ ಇನ್ಸ್ಪೆಕ್ಟರ್ ಶಂಕರ್ ನಾಯ್ಕ್ ಸಂಕಷ್ಟ ಎದುರಾಗಿದೆ. ಕರ್ತವ್ಯದ ವೇಳೆ ಕಳ್ಳತನ ಪ್ರಕರಣವೊಂದರಲ್ಲಿ 72 ಲಕ್ಷ ರೂಪಾಯಿ ಜಪ್ತಿ ಮಾಡಿದ್ದ ಪೊಲೀಸ್ ಶಂಕರ್ ನಾಯ್ಕ್, ಈ ಹಣವನ್ನು ಸರ್ಕಾರದ ಖಜಾನೆ ಅಥವಾ ಠಾಣೆಯ ಸುಪರ್ದಿಗೆ ಕೊಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಶಂಕರ್ ಹಾಗೂ ಮಧ್ಯವರ್ತಿ ಲೋಕನಾಥ್ ವಿರುದ್ಧ ಎಸಿಪಿ ಭರತ್ ರೆಡ್ಡಿ ನೀಡಿದ್ದ ದೂರು ಆಧರಿಸಿ 2023ರ ನವೆಂಬರ್ನಲ್ಲಿ ಎಫ್ಐಆರ್ ದಾಖಲಾಗಿತ್ತು.
ಎಫ್ಐಆರ್ ದಾಖಲಾಗುತ್ತಿದ್ದಂತೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿಸಲಾಗಿತ್ತು. ಬಳಿಕ ಪ್ರಕರಣ ರದ್ದು ಕೋರಿ ಇನ್ಸ್ಪೆಕ್ಟ್ರ್ ಶಂಕರ್ ನಾಯ್ಕ್ ಹೈಕೋರ್ಟ್ ಮೆಟ್ಟಲೇರಿದ್ದರು. ನಂತರ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿತ್ತು. ಆದರೆ, ತಡೆಯಾಜ್ಞೆ ತೆರವುಗೊಳಿಸುವಂತೆ ಸಿಸಿಬಿ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಇದೀಗ ಹೈಕೋರ್ಟ್ ತೆರವುಗೊಳಿಸಿದೆ.