ವಾಷಿಂಗ್ಟನ್: ಭಾರತ, ಅಮೆರಿಕ ಕಾರ್ಯತಂತ್ರದ ಪಾಲುದಾರ ಹಾಗೂ ಅಮೆರಿಕದ ಪ್ರಜೆಯಾಗಿರುವ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನೂ (Gurpatwant Singh Pannun) ಹತ್ಯೆ ಮಾಡುವ ಸಂಚು ರೂಪಿಸಿದವರನ್ನು ನೇರ ಹೊಣೆಗಾರರನ್ನಾಗಿ ಮಾಡುವಂತೆ ಶ್ವೇತಭವನವು ನವದೆಹಲಿಯನ್ನು ಒತ್ತಾಯಿಸಿದೆ. ಈ ಸಂಬಂಧ ಶ್ವೇತಭವನದ (White House) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಷ್ಟ್ರೀಯ ಭದ್ರತಾ ವಕ್ತಾರ ಜಾನ್ ಕಿರ್ಬಿ (John Kirby),
ಭಾರತವು ಒಂದು ಕಾರ್ಯತಂತ್ರದ ಪಾಲುದಾರ. ನಾವು ಆ ಕಾರ್ಯತಂತ್ರದ ಪಾಲುದಾರಿಕೆಯನ್ನು ಆಳಗೊಳಿಸುತ್ತಿದ್ದೇವೆ. ಭಾರತ- ಅಮೆರಿಕ (India- America) ಕ್ವಾಡ್ ಸದಸ್ಯ ರಾಷ್ಟ್ರಗಳಾಗಿವೆ. ಈ ಎರಡೂ ರಾಷ್ಟ್ರಗಳು ಅನೇಕ ಸಮಸ್ಯೆಗಳ ಕುರಿತು ಮಾತುಕತೆ ನಡೆಸುತ್ತಿವೆ. ಅದು ನಿರಂತರವಾಗಿ ಮುಂದುವರಿಯುವುದನ್ನು ನಾವು ನೋಡಲು ಬಯಸುತ್ತೇವೆ. ಇದೇ ಸಮಯದಲ್ಲಿ ಈ ಆರೋಪಗಳ ಗಂಭೀರತೆಯನ್ನು ನಾವು ಖಂಡಿತವಾಗಿ ಗುರುತಿಸುತ್ತೇವೆ ಎಂದು ತಿಳಿಸಿದರು.
Samantha: ಜೀನ್ಸ್’ನಲ್ಲಿ ನೆವರ್ ಬಿಪೋರ್ ಎಂಬಂತೆ ಬೋಲ್ಡ್ ಲುಕ್ಸ್ ಕೊಟ್ಟ ಸಮಂತಾ..! ಫೋಟೋಸ್ ನೋಡಿ
ಇದೇ ವೇಳೆ ಈ ಆರೋಪ ಎರಡೂ ರಾಷ್ಟ್ರಗಳ ಮೇಲೆ ಪರಿಣಾಮ ಬೀರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಕಿರ್ಬಿ, ನಾವು ಅದನ್ನು ಸಂಪೂರ್ಣವಾಗಿ ತನಿಖೆ ಮಾಡಬೇಕೆಂದು ಬಯಸುತ್ತೇವೆ. ಅಲ್ಲದೆ ಪ್ರಕರಣದ ಹಿಂದೆ ಯಾರಿದ್ದಾರೋ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಬೇಕು ಎಂದು ಅವರು ಹೇಳಿದರು. ಸದ್ಯ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ಭಾರತ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವುದು ಸಂತಸದ ವಿಷಯವಾಗಿದೆ. ಹೀಗಾಗಿ ತನಿಖೆ ಪೂರ್ಣಗೊಳ್ಳದೇ ಈ ಬಗ್ಗೆ ಮಾತನಾಡುವುದಿಲ್ಲ ಎಂದು ಕಿರ್ಬಿ ತಿಳಿಸಿದರು.