ಬೆಂಗಳೂರು: ಅಮಾಯಕನ ಮೇಲೆ ಪೊಲೀಸರೇ ಹಲ್ಲೆ ನಡೆಸಿರುವ ಆರೋಪವೊಂದು ಕೇಳಿ ಬಂದಿದೆ. ಯಾರೋ ಮಾಡಿದ ತಪ್ಪಿಗೆ ಅಮಾಯಕ ವ್ಯಕ್ತಿಯನ್ನು ಕಾಟನ್ಪೇಟೆ ಪೊಲೀಸರು ಠಾಣೆಗೆ (Cottonpet Police Station) ಕರೆದೊಯ್ಯದೇ ಲಾಡ್ಜ್ ಗೆ ಕರೆದೊಯ್ದು 3 ದಿನಗಳ ಕಾಲ ಅಕ್ರಮ ಬಂಧನದಲ್ಲಿಟ್ಟು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.
ಕಾಟನ್ ಪೇಟೆ ಸಬ್ಇನ್ಸ್ ಪೆಕ್ಟರ್ ಸಂತೋಷ್ ಗೌಡ, ಸಿಬ್ಬಂದಿ ಧ್ಯಾನ್ ಪ್ರಕಾಶ್ ಹಾಗೂ ಸಚಿನ್ ವಿರುದ್ಧ ವೆಂಕಟ್ ಎಂಬವರು ದೂರು ನೀಡಿದ್ದಾರೆ. ಜೊತೆಗೆ ಪೊಲೀಸ್ ಕಮಿಷನರ್ ಹಾಗೂ ಮಾನವಹಕ್ಕುಗಳ ಆಯೋಗಕ್ಕೂ ಕೋಣನಕುಂಟೆ ನಿವಾಸಿ ವೆಂಕಟ್ ದೂರು ನೀಡಿದ್ದಾರೆ.
ಆರೋಪ ಏನು..?: ಕಳೆದ ಜನವರಿ 12 ರಂದು ಬೆಂಗಳೂರಿನಿಂದ ಮುಳಬಾಗಿಲಿಗೆ ವೆಂಕಟೇಶ್ ತೆರಳಿದ್ದರು. ಮುಳಬಾಗಿಲಿನ ಪಕ್ಕದ ತನ್ನ ಹುಟ್ಟೂರಾದ ಬೇವಳ್ಳಿಗೆ ತೆರಳಲು ಮಣಿ ಎಂಬಾತನಿಂದ ಡ್ರಾಪ್ ಪಡೆಯುತ್ತಿದ್ದರು. ಈ ಮಣಿ ಎಂಬಾತನ ವಿರುದ್ಧ ಕಾಟನ್ ಪೇಟೆ ಠಾಣೆಯಲ್ಲಿ 420 ಅಡಿ ಕೇಸ್ ದಾಖಲಾಗಿತ್ತು. ಮಣಿಯನ್ನ ಹುಡುಕಾಡ್ತಿದ್ದ ಕಾಟನ್ ಪೇಟೆ ಪೊಲೀಸರಿಗೆ ಮಣಿ ಲೊಕೇಷನ್ ಮುಳಬಾಗಿಲು ತೋರಿಸಿತ್ತು