ಚನ್ನಪಟ್ಟಣ: ರಾಜಕೀಯ ಅನಿವಾರ್ಯತೆಯಿಂದಾಗಿ ನಮ್ಮ ಪಕ್ಷ ಹಾಗೂ ನನ್ನ ಜನರ ಹಿತಕಾಯಲು ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕಾಯಿತು. ನನ್ನ ದೇಹ ಇಡೀ ದೇಶ ಸುತ್ತುತ್ತಿದ್ದರೂ ನನ್ನ ಹೃದಯ ಮಾತ್ರ ರಾಮನಗರ ಜಿಲ್ಲೆಯಲ್ಲೇ ಇರುತ್ತದೆ ಎಂದು ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ಎರಡು ಬಾರಿ ಕ್ಷೇತ್ರಕ್ಕೆ ಬಾರದಿದ್ದರೂ ಅತಿ ಹೆಚ್ಚು ಮತಗಳನ್ನು ನೀಡಿ ಗೆಲ್ಲಿಸಿದಂತಹ ನಿಮ್ಮನ್ನು ಬಿಟ್ಟು ಹೋಗುತ್ತಿರುವುದು ನಿಮ್ಮ ಮನಸ್ಸಿಗೆ ಬೇಸರ ತರಿಸಿದರೂ ಸಹ ಕಾರ್ಯಕರ್ತರ ಹಿತಕ್ಕಾಗಿ ಈ ಸತ್ವಪರೀಕ್ಷೆಯನ್ನು ನಾನು ಎದುರಿಸಬೇಕಾಗಿದೆ ಎಂದರು.
Father’s Day 2024: ಅಪ್ಪಂದಿರ ದಿನದ ಮಹತ್ವ ಪ್ರಾಮುಖ್ಯತೆ ಮತ್ತು ಇತಿಹಾಸ ತಿಳಿಯಿರಿ!
ನಾನು ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಂಜೂರು ಮಾಡಿಸಿದೆ. ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಸರಕಾರವಿದ್ದರೂ ಹಣಕಾಸು ತರಲು ನನಗೇನೂ ಸಮಸ್ಯೆ ಇರಲಿಲ್ಲ. ಆದರೆ, ಕೆಲ ಅಧಿಕಾರಿಗಳು ನನ್ನ ವೇಗಕ್ಕೆ ತಕ್ಕಂತೆ ಕೆಲಸ ಮಾಡಲಿಲ್ಲ. ಅಧಿಕಾರಿಗಳ ವರ್ತನೆಯ ಬಗ್ಗೆ ನನಗೆ ಇಂದಿಗೂ ಬೇಸರವಿದೆ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.