Dengue Case: ಬೆಂಗಳೂರಲ್ಲಿ ಡೆಡ್ಲಿ ಡೆಂಘಿ ಸ್ಫೋಟ: ಅಪಾರ್ಟ್ಮೆಂಟ್ಗಳಲ್ಲಿ ಕೇಸ್ ಹೆಚ್ಚಳ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕರ್ನಾಟಕ ಬಿಟ್ಟು ಬೇರೆ ಯಾವ ರಾಜ್ಯದಲ್ಲಿಯೂ ಇಲ್ಲ. ದಲಿತರು ಮಾರಾಟ ಮಾಡಿರುವ ಭೂಮಿ ವಾಪಸ್ ಕೊಡಿಸುವ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ಜಮೀನಿನ ವರ್ಗಾವಣೆ ನಿಷೇಧ) (ತಿದ್ದುಪಡಿ) ಕಾಯ್ದೆಗೆ (PTCL Act-ಪಿಟಿಸಿಎಲ್ ಕಾಯ್ದೆ) ತಿದ್ದುಪಡಿ ತರುವ ಅಗತ್ಯಬಿದ್ದರೆ ಖಂಡಿತವಾಗಿಯೂ ತಿದ್ದುಪಡಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬ್ಯಾಂಕ್ಗಳಲ್ಲಿ, ಕೆ.ಎಸ್. ಎಫ್ .ಸಿ, ಉದ್ಯಮಿಗಳಿಗೆ 10 ಕೋಟಿವರೆಗೆ 4% ಬಡ್ಡಿಗೆ ಸಾಲ ದೊರೆಯಬೇಕೆಂಬ ಸೌಲಭ್ಯ ಒದಗಿಸಿದ್ದು ನಮ್ಮ ಸರ್ಕಾರ. ಎಸ್.ಸಿ.ಎಸ್ ಪಿ /ಟಿ. ಎಸ್.ಪಿ ಕಾಯ್ದೆಯಡಿ .7(ಡಿ) ಕೈಬಿಡಲು ಸಲಹೆ ಬಂದ ಮೇರೆಗೆ ಕಾಯ್ದೆಗೆ ತಿದ್ದುಪಡಿ ತಂದು ಅದನ್ನು ಕೈಬಿಡಲಾಗಿದೆ. ಇನ್ನೂ ಬದಲಾವಣೆಗಳು ಅಗತ್ಯವಿದ್ದರೆ ಮಾಡುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ, ನಮಗೆ ಯಾವುದೇ ಸಂಪ್ರದಾಯವಾದಿ ಧೋರಣೆಗಳಿಲ್ಲ ಎಂದರು. ಪರಿಶಿಷ್ಟರ, ಸಾಮಾಜಿಕ ನ್ಯಾಯದ ವಿರುದ್ಧವಾದ ನಿಲುವು ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.
ದಲಿತ ಸಂಘಟನೆಗಳು 70ರ ದಶಕದಲ್ಲಿ ಸಾರಾಯಿ ಅಂಗಡಿಗಳು ಬೇಡ, ವಸತಿ ಶಾಲೆಗಳು ಬೇಕು ಎಂದು ಬೇಡಿಕೆ ಸಲ್ಲಿಸಿದ್ದರಿಂದ ವಸತಿ ಶಾಲೆಗಳನ್ನು ಪ್ರಾರಂಭ ಮಾಡಲಾಗಿದೆ. 94-95ರಲ್ಲಿ ಹಣಕಾಸು ಸಚಿವನಾಗಿದ್ದಾಗ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭ ಮಾಡಿದ್ದು ನಾನೇ ಎಂದು ಸ್ಮರಿಸಿದರು.
ಇಂದು 821 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ತೆರೆಯಲಾಗಿದೆ. ಹೋಬಳಿಗೊಂದು ವಸತಿ ಶಾಲೆ ತೆರೆಯುವ ನಿರ್ಧಾರ ಸರ್ಕಾರ ಮಾಡಿದೆ. 2024-25 ರಲ್ಲಿ 20 ವಸತಿ ಶಾಲೆಗಳನ್ನು ತೆರೆಯಲಾಗುವುದು. ಒಟ್ಟು 905 ವಸತಿ ಶಾಲೆಗಳು ರಾಜ್ಯದಲ್ಲಿ ಕಾರ್ಯನಿರ್ವಹಿಸಲಿವೆ. ವಸತಿ ಶಾಲೆಗಳಲ್ಲಿ 2,11,000 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದರು.
ಕ್ರೈಸ್ ವಸತಿ ನಿಲಯದ ವಿದ್ಯಾರ್ಥಿ 625 ಕ್ಕೇ 625 ಅಂಕಗಳನ್ನು ಗಳಿಸಿದ್ದನ್ನು ಸಿಎಂ ಸ್ಮರಿಸಿದರು. ದಲಿತರಿಗೆ ಸಾಮಾಜಿಕ ಆರ್ಥಿಕ ಶಕ್ತಿ ಬರಬೇಕು. ಆಗ ಮಾತ್ರ ಅವರು ಮುಂಚೂಣಿಗೆ ಬರಲು ಸಾಧ್ಯವಾಗುತ್ತದೆ. ಬಸವಣ್ಣ, ಬಾಬು ಜಗಜೀವನ್ ರಾಂ ಅವರು ಕಂಡಿದ್ದ ಕನಸು ನನಸಾಗಲು ಆರ್ಥಿಕ ಸಾಮಾಜಿಕ ಶಕ್ತಿ ಬರಬೇಕು ಎಲ್ಲರೂ ವಿದ್ಯಾವಂತರಾಗಬೇಕು. ಶಿಕ್ಷಣ, ಸಂಘಟನೆ ಹೋರಾಟಕ್ಕೆ ಕರೆ ಕೊಟ್ಟಿದ್ದ ಅಂಬೇಡ್ಕರ್, ಜಗಜೀವನ್ ರಾಂ ಅವರು ಜಾತಿ ವಿನಾಶವಾಗಬೇಕು. ಜಾತಿ ವಿನಾಶವಾಗದಿದ್ದರೆ ಸಮಾನತೆ ಬರುವುದಿಲ್ಲ ಎಂದಿದ್ದರು. ಹಂತ ಹಂತವಾಗಿ ಇದನ್ನು ನಾವು ಮಾಡಬೇಕು. ಮಾಡದೆ ಇರುವವರನ್ನು ಪ್ರಶ್ನಿಸುವ ನೈತಿಕತೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.