ನವದೆಹಲಿ:- ದೆಹಲಿ ಚುನಾವಣಾ ಫಲಿತಾಂಶದಲ್ಲಿ 27 ವರ್ಷಗಳ ಬಳಿಕ ಬಿಜೆಪಿ ಮೇಲುಗೈ ಸಾಧಿಸಿದ ಕುರಿತು ಅಮಿತ್ ಶಾ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ದೆಹಲಿ ಗೆಲುವಿಗೆ ಮೋದಿ ಅವರ ಭ್ರಷ್ಟಾಚಾರ ರಹಿತ ಆಡಳಿತವೇ ಕಾರಣ – ಅರವಿಂದ ಬೆಲ್ಲದ್
ದೆಹಲಿಯ ಜನರು ಸುಳ್ಳು, ವಂಚನೆ ಮತ್ತು ಭ್ರಷ್ಟಾಚಾರದ ‘ಶೀಷ್ಮಹಲ್’ ಅನ್ನು ನಾಶಮಾಡುವ ಮೂಲಕ ದೆಹಲಿಯನ್ನು ಆಪ್ ಮುಕ್ತಗೊಳಿಸಲು ತೀರ್ಮಾನಿಸಿದ್ದಾರೆ. ಭರವಸೆಗಳನ್ನು ಮುರಿಯುವವರಿಗೆ ದೆಹಲಿ ತಕ್ಕ ಪಾಠ ಕಲಿಸಿದೆ. ಇದು ದೇಶಾದ್ಯಂತ ಸಾರ್ವಜನಿಕರಿಗೆ ಸುಳ್ಳು ಭರವಸೆಗಳನ್ನು ನೀಡುವವರಿಗೆ ಒಂದು ಉದಾಹರಣೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಅಲ್ಲದೇ ಆಪ್ ಸೋಲನ್ನು ದುರಹಂಕಾರ ಮತ್ತು ಅರಾಜಕತೆಯ ಸೋಲು ಎಂದು ಕರೆದರು.
ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ. ಅಲ್ಲದೇ ದೆಹಲಿಯನ್ನು ವಿಶ್ವದ ನಂಬರ್ ಒನ್ ರಾಜಧಾನಿಯನ್ನಾಗಿ ಮಾಡುತ್ತದೆ. ಇದು ‘ಮೋದಿ ಗ್ಯಾರಂಟಿ’ಯ ಗೆಲುವು. ಈ ಬೃಹತ್ ಜನಾದೇಶಕ್ಕಾಗಿ ದೆಹಲಿಯ ಜನರಿಗೆ ಧನ್ಯವಾದ ಎಂದು ಕೃತಜ್ಞತೆ ಸಲ್ಲಿಸಿದರು.
ಯಮುನಾ, ಕೊಳಕು ಕುಡಿಯುವ ನೀರು, ಹಾಳಾದ ರಸ್ತೆಗಳು, ತುಂಬಿ ಹರಿಯುವ ಚರಂಡಿಗಳು ಮತ್ತು ಪ್ರತಿ ಬೀದಿಯಲ್ಲಿ ತೆರೆದಿರುವ ಮದ್ಯದ ಅಂಗಡಿಗಳಿಗೆ ಸಾರ್ವಜನಿಕರು ತಮ್ಮ ಮತಗಳಿಂದ ತಕ್ಕ ಉತ್ತರ ನೀಡಿದ್ದಾರೆ. ದೆಹಲಿ ಈಗ ಮೋದಿಯವರ ನೇತೃತ್ವದಲ್ಲಿ ಆದರ್ಶ ರಾಜಧಾನಿಯಾಗಲಿದೆ ಎಂದು ಭರವಸೆ ನೀಡಿದರು.