ನವದೆಹಲಿ: ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಇಂದು ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಅಲ್ಲದೇ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಇಂದೇ ರಾಜಿನಾಮೆ ನೀಡುತ್ತಾರೆ ಎಂದು ಹೇಳಲಾಗುತ್ತಿದೆ. ಹೈಕಮಾಂಡ್ ಜೊತೆ ಚರ್ಚಿಸಲು ಶೆಟ್ಟರ್ ಈಗಾಗಲೇ ದೆಹಲಿ ಬಿಜೆಪಿ ಕಚೇರಿಗೆ ತೆರಳಿದ್ದು, ಕೆಲವೇ ಕ್ಷಣಗಳಲ್ಲಿ ಶೆಟ್ಟರ್ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ.
ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುವಂತೆ ಶೆಟ್ಟರ್ ಅಮಿತ್ ಶಾ ಮುಂದೆ ಬೇಡಿಕೆ ಇಟ್ಟಿದ್ದಾರೆ. ಕೆಲವೇ ಕ್ಷಣಗಳಲ್ಲಿ ಅಧಿಕೃತವಾಗಿ ಬಿಜೆಪಿಗೆ ಶೆಟ್ಟರ್ ಮರುಸೇರ್ಪಡೆಯಾಗಲಿದ್ದು, ಕಾಂಗ್ರೆಸ್ಗೆ ಗುಡ್ಬೈ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಕೇಂದ್ರ ಬಿಜೆಪಿ ಕಚೇರಿಯಲ್ಲಿ ಶೆಟ್ಟರ್ ಬಿಜೆಪಿ ಮರುಸೇರ್ಪಡೆಯಾಗುವ ಸಾಧ್ಯತೆಯಿದೆ.
Jagadish Shetter: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಶೆಟ್ಟರ್ ರಾಜೀನಾಮೆ: ಡಿಕೆಶಿಗೆ ರಾಜೀನಾಮೆ ಪತ್ರ ಸಲ್ಲಿಕೆ!
ಮಾಜಿ ಸಿಎಂ ಯಡಿಯೂರಪ್ಪ ಜೊತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತುಕತೆ ನಡೆಸಿದ್ದು, ಬಿಜೆಪಿಗೆ ವಾಪಸ್ ಬರುವಂತೆ ಜಗದೀಶ್ ಶೆಟ್ಟರ್ಗೆ ಯಡಿಯೂರಪ್ಪ ಆಹ್ವಾನ ಕೊಟ್ಟಿದ್ದರು. ವರಿಷ್ಠರನ್ನ ಒಪ್ಪಿಸುತ್ತೇವೆ, ವರಿಷ್ಠರ ಜೊತೆ ಮಾತುಕತೆ ನಡೆಸುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದರು.
ನಾನು ಓಪನ್ ಆಗಿದ್ದೀನಿ. ಆದರೆ ಬಿಜೆಪಿಯ ನಂಬರ್ 1, 2 ಒಪ್ಪಿಗೆ ಕೊಟ್ಟು ಮಾತನಾಡಬೇಕು. ಮೋದಿ, ಅಮಿತ್ ಶಾ ಜೊತೆ ಮಾತಾನಾಡಿಸಬೇಕು. ಅಲ್ಲೇ ಮಾತುಕತೆ ಆಗಬೇಕು ಎಂದು ಶೆಟ್ಟರ್ ಹೇಳಿದ್ದರು. ಈ ಹಿನ್ನೆಲೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಸರ್ಕಸ್ ನಡೆಸಿ ಮಾತುಕತೆಗೆ ಒಪ್ಪಿಸಿದ್ದಾರೆ.