ರಾಮನಗರ:- ರಾಮನಗರ ಆರ್ ಟಿಓ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎನ್ನುವ ದೂರುಗಳ ಮೇರೆಗೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಇನ್ನೇನು ಕೊನೆ ದಿನ ಕೆಲಸ ಮುಗಿಸಿ ಮನೆಗೆ ಹೊರಡಬೇಕೆಂದಿದ್ದ ಶಿವಕುಮಾರ್ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
Bengaluru: ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂಗೆ ಮತ್ತಿಬ್ಬರು ಬಲಿ..!
ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು, ರಾಮನಗರ RTO ಅಧಿಕಾರಿ ಶಿವಕುಮಾರ್, ಎಸ್ಡಿಎ ರಚಿತ್ ರಾಜ್ ಮತ್ತು ಬ್ರೋಕರ್ ಸತೀಶ್ ಅವರನ್ನು ಬಂಧಿಸಿದ್ದಾರೆ. ಅಲ್ಲದೇ ಇದೀಗ ರಾಮನಗರ ಆರ್ಟಿಓ ಕಚೇರಿ, ಎಸ್ಡಿಎ ರಚಿತ್ ರಾಜ್ ಮತ್ತು ಬ್ರೋಕರ್ ಸತೀಶ್ ನಿವಾಸದ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸಿಸುತ್ತಿದ್ದಾರೆ.
ಸೀಜ್ ಮಾಡಿರುವ ವಾಹನಗಳ ದಾಖಲೆಯನ್ನು ನೀಡಿ ಮಾರಾಟ, ಹಳೇ ಟ್ರ್ಯಾಕ್ಟರ್ಗಳಿಗೆ ಹೊಸ ದಾಖಲೆ ಸೃಷ್ಟಿ ಮಾಡಿದ್ದಾರೆ. ಒಟ್ಟು 2 ಸಾವಿರ ಟ್ರ್ಯಾಕ್ಟರ್ಗಳಿಗೆ ಹೊಸ ದಾಖಲೆ ನೀಡಿರುವುದು ಬೆಳಕಿಗೆ ಬಂದಿದೆ
![](https://ainlivenews.com/wp-content/uploads/2024/01/Ad-Banner-copy-scaled.jpg)