ಬೆಂಗಳೂರು:- ಎಸ್ಎಸ್ಎಲ್ಸಿ , ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಆಂಧ್ರದ ಮಾಡೆಲ್ ತರಲು ಶಿಕ್ಷಣ ಇಲಾಖೆ ಮುಂದಾಗಿದೆ.
Bengaluru: ರಾಜಧಾನಿಯಲ್ಲಿ ಹೆಚ್ಚಾಯ್ತು ನಾಯಿಗಳ ಕಾಟ: ಆಸ್ಪತ್ರೆ ಸೇರುವವರ ಸಂಖ್ಯೆ ಹೆಚ್ಚಳ, ಕಂಗಾಲಾದ ಜನ!
ಫೇಲಾದ ವಿದ್ಯಾರ್ಥಿಗಳಿಗೆ ಕಳೆದ ವರ್ಷದಿಂದ ಮೂರು ಮೂರು ಸಲ ಪರೀಕ್ಷೆ ಬರೆಯುವ ಅವಕಾಶ ಶಿಕ್ಷಣ ಇಲಾಖೆ ಕಲ್ಪಿಸಿ ಕೊಟ್ಟಿತ್ತು. ಇಷ್ಟಾದರೂ ಫಲಿತಾಂಶದಲ್ಲಿ ಅಂತಹ ವ್ಯತ್ಯಯ ಏನು ಕಂಡು ಬಂದಿಲ್ಲ. ಇದೇ ಕಾರಣಕ್ಕೆ ಮಕ್ಕಳು ಶಿಕ್ಷಣದಿಂದ ದೂರ ಇರಬಾರದು ಎಂದು ರಾಜ್ಯ ಶಿಕ್ಷಣ ಇಲಾಖೆ ಹೊಸ ಪ್ಲಾನ್ ಮಾಡಿದ್ದು, ಅನುತ್ತೀರ್ಣರಾದವರು ಕೂಡ ಶಾಲೆಗೆ ಹೋಗಬಹುದಾಗಿದೆ. ಈ ವರ್ಷದಿಂದ ಎಸ್ಎಸ್ಎಲ್ ಸಿ ಸೇರಿದಂತೆ ಪ್ರೌಢ ಶಿಕ್ಷಣದವರೆಗೆ ವಿದ್ಯಾರ್ಥಿಗಳು ಫೇಲ್ ಆದರೂ ಸಹ ಮುಂದಿನ ತರಗತಿಗೆ ಹೋಗಲು ಮತ್ತೆ ಅವಕಾಶ ನೀಡಲು ಇಲಾಖೆ ಮುಂದಾಗಿದೆ. ಈ ಮೂಲಕ ಆಂಧ್ರ ಪ್ರದೇಶದ ಮಾದರಿ ಅನುಸರಿಸಲು ರಾಜ್ಯ ಶಿಕ್ಷಣ ಇಲಾಖೆ ಪ್ಲಾನ್ ಮಾಡಿದೆ.
SSLC, ದ್ವಿತೀಯಪಿಯುಸಿ ಫೇಲಾದ್ರು ದಾಖಲಾತಿ ನೀಡಲು ಮುಂದಾಗಿದೆ. ಅನುತ್ತಿರ್ಣರಾದ ವಿದ್ಯಾರ್ಥಿಗಳಿಗೆ ಅವಕಾಶ ನೀಡುತ್ತಿರುವುದು ಇದೇ ಮೊದಲ ಬಾರಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ವಿನೂತನ ಪ್ರಯತ್ನವಾಗಿದೆ. ಪ್ರತೀ ವರ್ಷ ಕನಿಷ್ಠ ಒಂದು ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಮೊಟಕುಗೊಳಿಸ್ತಾರೆ. ವಿದ್ಯಾರ್ಥಿಗಳು ಡ್ರಾಪ್ ಔಟ್ ಆಗಬಾರದು ಎಂದು ಈ ವಿಶೇಷ ಮಾದರಿಯನ್ನು ಜಾರಿಗೆ ತರಲು ಚಿಂತನೆ ಮಾಡಲಾಗಿದೆ.
ಇದರೊಂದಿಗೆ ಸಾಕ್ಷರತಾ ಪ್ರಮಾಣ ಹೆಚ್ಚು ಮಾಡಲು ಶಿಕ್ಷಣ ಇಲಾಖೆ ಮಾಸ್ಟರ್ ಪ್ಲಾನ್ ಮಾಡಿದೆ. ಫೇಲ್ ಆದರೂ ಸಹ ಮತ್ತೊಮ್ಮೆ ಪಾಠ ಕೇಳುವ ಅವಕಾಶ ನೀಡಲು ಮುಂದಾಗಿದೆ. ಅನುತ್ತೀರ್ಣರಾದ ವಿಷಯಕ್ಕೆ ಮಾತ್ರ ಶಾಲೆ ಹಾಜರಿ ಆಗಬಹುದು ಅಥವಾ ಸಂಪೂರ್ಣವಾಗಿ ಮತ್ತೊಮ್ಮೆ ಪರೀಕ್ಷೆ ಬರೆಯಬಹುದು. ಇದು ವಿದ್ಯಾರ್ಥಿಯ ಆಯ್ಕೆ ಇರುತ್ತೆ. ರೆಗ್ಯುಲರ್ ವಿದ್ಯಾರ್ಥಿಗೆ ಸಿಗುವ ಎಲ್ಲಾ ಅನೂಕೂಲ ಈ ವಿದ್ಯಾರ್ಥಿಗಳಿಗೆ ಸಿಗುತ್ತೆ. ವಿದ್ಯಾರ್ಥಿ ಎಲ್ಲ ವಿಷಯ ಓದುವುದು ಅಥವಾ ಅನುತೀರ್ಣ ವಿಷಯಕ್ಕೆ ಮಾತ್ರ ಪರೀಕ್ಷೆ ಹಾಗೂ ಹಾಜರಾತಿ ಬಗ್ಗೆ ವಿದ್ಯಾರ್ಥಿಯೇ ನಿರ್ಣಯ ತಗೆದುಕೊಳ್ಳುವ ಅವಕಾಶ ನೀಡಿದೆ.
ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಶಾಲೆ, ಕಾಲೇಜಿಗೆ ದಾಖಲಾಗಿ ಪಾಠ ಕೇಳುವ ಅವಕಾಶವನ್ನು ಶಿಕ್ಷಣ ಇಲಾಖೆ ಕಲ್ಪಿಸಿದಂತಾಗಿದೆ. ಈಗಾಗಲೇ ಆಂಧ್ರ ಪ್ರದೇಶದಲ್ಲಿ ಇಂತಹದೊಂದು ರೂಲ್ಸ್ ಇದ್ದು, ಈಗ ಕರ್ನಾಟದಲ್ಲಿಯೂ ಇದೇ ಮೊದಲ ಬಾರಿಗೆ ಇಲಾಖೆ ಜಾರಿಗೊಳಿಸಿದೆ.