ಶಿವಮೊಗ್ಗ:-ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದಿದ್ದ ಕಳ್ಳನೋರ್ವ ಅಂಗನವಾಡಿ ಕಾರ್ಯಕರ್ತೆಯ ಚಿನ್ನದ ಸರ ಕದ್ದು ಎಸ್ಕೇಪ್ ಆಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಬೈಲಿನಲ್ಲಿ ಜರುಗಿದೆ.
ಪ್ರೇಮಿಗಳ ಲವ್ವಿ-ಡವ್ವಿ: ಬೈಕ್ ಟ್ಯಾಂಕ್ ಮೇಲೆ ಯುವತಿ ಕೂರಿಸಿಕೊಂಡು ರೊಮ್ಯಾನ್ಸ್!
ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಎಂಬುವರನ್ನು ಬೆದರಿಸಿ 42 ಗ್ರಾಂ ತೂಕದ ಸುಮಾರು 3 ಲಕ್ಷದ 20 ಸಾವಿರ ಮೌಲ್ಯದ ಮಾಂಗಲ್ಯ ಸರವನ್ನು ಎಗರಿಸಿದ್ದಾನೆ.
ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.