ನವದೆಹಲಿ: ಆದಾಯ ತೆರಿಗೆ ಇಲಾಖೆಯಿಂದ (Income Tax Department) ಕಾಂಗ್ರೆಸ್ಗೆ (Congress) ಡಿಮ್ಯಾಂಡ್ ನೋಟಿಸ್ ಬಂದಿದೆ. ಚುನಾವಣೆ ಹೊತ್ತಲ್ಲಿ ದಂಡ, ಬಡ್ಡಿ ಸೇರಿದಂತೆ 1,700 ಕೋಟಿ ರೂಪಾಯಿ ಕಟ್ಟುವ ಅನಿವಾರ್ಯತೆ ಕಾಂಗ್ರೆಸ್ ಮುಂದಿದೆ.
ತೆರಿಗೆ ನೋಟಿಸ್ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಅದಾದ ಒಂದು ದಿನದ ನಂತರ ಆದಾಯ ತೆರಿಗೆ ಇಲಾಖೆಯಿಂದ 1,700 ಕೋಟಿ ರೂ. ಮೊತ್ತದ ಡಿಮ್ಯಾಂಡ್ ನೋಟಿಸ್ನ್ನು ಕಾಂಗ್ರೆಸ್ ಸ್ವೀಕರಿಸಿದೆ.
ವಾಸ್ತು ಪ್ರಕಾರ ಮನೆಯಲ್ಲಿ ಬಿದಿರುಗಳನ್ನು ಈ ರೀತಿಯಾಗಿ ಇಟ್ಟುಕೊಂಡರೆ ಅದೃಷ್ಟವಂತೆ.!
ಹೊಸ ಸೂಚನೆಯು 2017-18 ರಿಂದ 2020-21 ರವರೆಗಿನ ದಂಡ ಮತ್ತು ಬಡ್ಡಿಯನ್ನು ಒಳಗೊಂಡಿರುತ್ತದೆ. ಆದಾಯ ತೆರಿಗೆ ಅಧಿಕಾರಿಗಳು 200 ಕೋಟಿ ರೂ. ದಂಡವನ್ನು ವಿಧಿಸಿ ಮತ್ತು ಅದರ ಹಣವನ್ನು ಸ್ಥಗಿತಗೊಳಿಸಿದ ನಂತರ ಕಾಂಗ್ರೆಸ್ ಈಗಾಗಲೇ ಹಣದ ಕೊರತೆಯನ್ನು ಎದುರಿಸುತ್ತಿದೆ. ಪ್ರಕರಣದಲ್ಲಿ ಪಕ್ಷವು ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.
ಏಪ್ರಿಲ್ 19 ರಿಂದ ಪ್ರಾರಂಭವಾಗುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯು ತೆರಿಗೆ ಅಧಿಕಾರಿಗಳನ್ನು ವಿಪಕ್ಷಗಳ ವಿರುದ್ಧ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ನಮ್ಮನ್ನು ಆರ್ಥಿಕವಾಗಿ ದುರ್ಬಲಗೊಳಿಸಲು ನೋಟಿಸ್ಗಳನ್ನು ಕಳುಹಿಸಲಾಗುತ್ತಿದೆ. ಇದು ತೆರಿಗೆ ಭಯೋತ್ಪಾದನೆ. ಇದನ್ನು ಕಾಂಗ್ರೆಸ್ ಮೇಲೆ ದಾಳಿ ಮಾಡಲು ಬಳಸಲಾಗುತ್ತಿದೆ. ಇದು ನಿಲ್ಲಬೇಕು ಎಂದು ಕಾಂಗ್ರೆಸ್ನ ಜೈರಾಮ್ ರಮೇಶ್ ಮಾತನಾಡಿದ್ದಾರೆ.