ಬೆಂಗಳೂರು:- ಲೋಕಸಭಾ ಚುನಾವಣೆಯ ಮತದಾನದ ದಿನ ಸಮೀಪಿಸುತ್ತಿದ್ದಂತೆ ಎಲ್ಲಾ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ.
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಎನ್ಡಿಎ ಒಕ್ಕೂಟ ಅಧಿಕಾರ ಉಳಿಸಿಕೊಳ್ಳುವ ಹರಸಾಹಸದಲ್ಲಿದ್ದರೆ, ಇಂಡಿಯಾ ಒಕ್ಕೂಟ ಈ ಬಾರಿ ಶತಾಯಗತಾಯ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ.
ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ಡಿಎ ಒಕ್ಕೂಟ ಈ ಬಾರಿ 400 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದರೆ, ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಸೋಲಿಸಲು ದೇಶದಾದ್ಯಂತ ಶಕ್ತಿ ಪ್ರದರ್ಶನ ನಡೆಸುತ್ತಿವೆ.
ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ – ಜೆಡಿಎಸ್ ಮೈತ್ರಿದ್ದು, ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಹೊಂದಿದ್ದರೆ, ಇತ್ತ ಆಡಳಿತ ರೂಢ ಕಾಂಗ್ರೆಸ್ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲುವ ಕನಸು ಕಾಣುತ್ತಿದೆ. ಈ ಬೆಳವಣೆಗೆಯ ನಡುವೆ ಇಂಟಿಯಾ ಟಿವಿ – ಸಿಎನ್ಎಕ್ಸ್ ಸಮೀಕ್ಷೆ ಪ್ರಕಟವಾಗಿದ್ದು, ರಾಜಕೀಯ ಪಕ್ಷಗಳೀಗೆ ಈ ಸಮೀಕ್ಷೆಯ ವರದಿ ಶಾಕ್ ನೀಡಿದೆ.
ಇನ್ನೂ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರವನ್ನ ವಶಪಡಿಸಿಕೊಳ್ಳವ ನಿಟ್ಟಿಯಲ್ಲಿ ಆಡಳಿತರೂಢ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಇತ್ತ ಹಾಲಿ 25 ಸಂಸದರಿರುವ ಬಿಜೆಪಿಯೂ ಈ ಬಾರಿ ಕಾಂಗ್ರೆಸ್ ಗೆ ಸೋಲಿನ ರುಚಿ ತೋರಿಸಲು ಬಿಜೆಪಿ ಜೆಡಿಎಸ್ ಹಲವು ತಂತ್ರಗಾರಿಕೆಯನ್ನ ನಡೆಸಿವೆ
ಸಮೀಕ್ಷೆಯ ಪ್ರಕಾರ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸುಲಭವಾಗಿ ಗೆಲುವನ್ನು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಅಲ್ಲದೇ ಕರ್ನಾಟಕದಲ್ಲಿ ಬಿಜೆಪಿ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಅದರಲ್ಲಿ 22 ಕ್ಷೇತ್ರಗಳನ್ನು ಗೆಲ್ಲಲಿದ್ದು, ಜೆಡಿಎಸ್ ಸ್ಪರ್ಧಿಸಿದ ಮೂರು ಕ್ಷೇತ್ರಗಳ ಪೈಕಿ 2 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲಲಿದೆ ಎಂದು ಸಮೀಕ್ಷೆ ಬಹಿರಂಗ ಪಡಿಸಿದೆ.
28 ಕ್ಷೇತ್ರಗಳನ್ನು ಗೆಲ್ಲಬೇಕು ಎನ್ನುವ ನಿಟ್ಟಿನಲ್ಲಿ ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ 24 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದೆ. ಇನ್ನು, ಬಿಜೆಪಿ ಕಳೆದ ಬಾರಿ ಪಕ್ಷೇತರ ಸಂಸದೆ ಸುಮಲತಾ ಸೇರಿ 26 ಸಂಸದರನ್ನು ಹೊಂದಿತ್ತು. ಅದು ಈ ಬಾರಿ 22 ಆಗಲಿದ್ದು, 4 ಸ್ಥಾನಗಳ ನಷ್ಟ ಅನುಭವಿಸಲಿದೆ ಎಂದು ಸಮೀಕ್ಷಾ ವರದಿಯಲ್ಲಿ ಹೇಳಲಾಗಿದೆ.
ಪಂಚ ಗ್ಯಾರಂಟಿಗಳನ್ನ ನೀಡುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಗುರಿಯನ್ನು ಇಟ್ಟುಕೊಂಡಿರುವ ಕಾಂಗ್ರೆಸ್ಗೆ ಇಂಡಿಯಾ ಟಿವಿ – ಸಿಎನ್ಎಕ್ಸ್ ಸಮೀಕ್ಷೆ ಕೇವಲ ನಾಲ್ಕು ಕ್ಷೇತ್ರಗಳನ್ನ ಗೆಲ್ಲಲಿದೆ ಎಂದು ಬಹಿರಂಗ ಪಡಿಸಿದ್ದು, ಈ ಸಮೀಕ್ಷೆಯಿಂದ ಕಾಂಗ್ರೆಸ್ ಗೆ ನಿರಾಸೆ ಉಂಟು ಮಾಡಿದೆ.