ತುಮಕೂರು: ಬಿಜೆಪಿ-ಜೆಡಿಎಸ್ ಮೈತ್ರಿಯಾದ ಬಳಿಕ ಜೆಡಿಎಸ್ ನಾಯಕರು ಪಕ್ಷ ಬಿಡುತ್ತಿರುವ ವೇಗ ಹೆಚ್ಚಾಗಿದೆ. ಇದೀಗ ಲೋಕಸಭಾ ಚುನಾವಣೆಯ ಸಿದ್ಧತೆ ಹೊತ್ತಲ್ಲಿ ತುಮಕೂರಿನಲ್ಲಿ ಜೆಡಿಎಸ್ಗೆ ಬಿಗ್ ಶಾಕ್ ಎದುರಾಗಿದೆ. ತುಮಕೂರು ಜಿಲ್ಲೆಯ ಜೆಡಿಎಸ್ನ ಪ್ರಭಾವಿ ನಾಯಕ, ತುಮಕೂರು ಗ್ರಾಮಾಂತರದ ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ಅವರು,
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ತೆನೆ ಇಳಿಸಿ ಕೈ ಹಿಡಿಯಲು ಮುಂದಾಗಿದ್ದಾರೆಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ.ಸಿ ಗೌರಿಶಂಕರ್ ಅವರು ಕಾಂಗ್ರೆಸ್ ಪಕ್ಷ ಸೇರುವ ಮುಹೂರ್ತ ಫಿಕ್ಸ್ ಆಗಿದೆ. ಸುಮಾರು ಎರಡು ಸಾವಿರ ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)