ಹುಬ್ಬಳ್ಳಿಯಲ್ಲಿ ಇಬ್ಬರು ಯುವತಿಯರ ಹತ್ಯೆ ಸೇರಿದಂತೆ ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಬಳ್ಳಾರಿ ಬಿಜೆಪಿ ಮಹಿಳಾ ಘಟಕದಿಂದ ಪ್ರತಿಭಟಿಸಲಾಯಿತು.ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಶೂನ್ಯ ಸುರಕ್ಷತೆ ಗ್ಯಾರಂಟಿ ಎಂಬ ಹೊಸ ಯೋಜನೆ ಜಾರಿಗೊಳಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.
ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಮತ್ತು ಅಂಜಲಿ ಕೊಲೆ ಹಾಡುಹಗಲೇ ನಡೆದಿವೆ. ಕೊಲೆಗಡುಕರಿಗೆ ಪೊಲೀಸರ ಭಯವಿಲ್ಲದ ಹಾಗೇ ಆಗಿದೆ. ಪ್ರತಿ ನಿತ್ಯ ರಾಜ್ಯದ ಒಂದಾಲ್ಲೊಂದು ಕಡೆ ಕೊಲೆ, ಸುಲಿಗೆ ಮತ್ತು ಹತ್ಯಾಚಾರ ಮುಂತಾದವು ನಡೆಯುತ್ತಿವೆ. ಕೆಲಸಕ್ಕೆ, ಕಾಲೇಜಿಗೆ ಹೋದಂತಹ ಹೆಣ್ಣು ಮಕ್ಕಳು ಸುರಕ್ಷಿತವಾಗಿ ಮನೆಗೆ ಬರುತ್ತಾರೆಂಬ ನಂಬಿಕೆ ಇಲ್ಲವಾಗಿದೆ. ರಾಜ್ಯದಲ್ಲಿ ಕ್ರೈಂ ತಡೆಯುವಲ್ಲಿ ವಿಫಲವಾದ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಅಪಾರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.