ಬೆಂಗಳೂರು:- ನಿಗಮ ಮಂಡಳಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರಿಗೆ ಸ್ಥಾನ ಸಿಗಲಿ ಎಂದ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಹೊಸಬರಿಗೆ ನಿಗಮ-ಮಂಡಳಿಯಲ್ಲಿ ಅವಕಾಶ ಇಲ್ಲವೇ ಇಲ್ಲ. ಮೂರ್ನಾಲ್ಕು ಬಾರಿ ಗೆದ್ದವರಿಗೆ ಅವಕಾಶ ನೀಡಲು ಪಕ್ಷ ಬದ್ಧವಾಗಿದೆ. ನಮ್ಮ ಜಿಲ್ಲೆಯಲ್ಲೂ ಎರಡ್ಮೂರು ಹಿರಿಯ ಶಾಸಕರಿದ್ದಾರೆ. ಅವರಿಗೆ ನಿಗಮ – ಮಂಡಳಿಯಲ್ಲಿ ಅವಕಾಶ ಕೊಟ್ಟೇ ಕೊಡುತ್ತಾರೆ. ಸದನ ಪ್ರಾರಂಭವಾಗುವುದಕ್ಕೆ ಮೊದಲೇ ನೇಮಕವಾದರೆ ಉತ್ತಮ. ಹಿರಿಯರಿಗೆ ಕೊಟ್ಟರೆ ಭಿನ್ನಮತಕ್ಕೆ ಅವಕಾಶವಿರುವುದಿಲ್ಲ ಎಂದು ಹೇಳಿದರು.
![Demo](https://ainlivenews.com/wp-content/uploads/2023/12/spoorthi-1.jpg)
ನಾನು ಕೂಡ ಕಾರ್ಯಕರ್ತರ ಪರವಾಗಿ ಒತ್ತಾಯ ಮಾಡಿದ್ದೇನೆ. ಕಾರ್ಯಕರ್ತರೇ ಪಕ್ಷ ಸಂಘಟನೆಗೆ ಮುಖ್ಯ ಪಾತ್ರ ವಹಿಸುತ್ತಾರೆ. ಯಾವತ್ತೂ ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಬೆಳಗಾವಿಯಲ್ಲಿ ಚರ್ಚೆಯಾಗಿಲ್ಲ. ಈ ಬಾರಿಯಾದರೂ ಅವಕಾಶ ಸಿಗುತ್ತದೋ ಎಂದು ಕಾದು ನೋಡಬೇಕು ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)