ಬೆಂಗಳೂರು:- ಪುನೀತ್ ರಾಜ್ಕುಮಾರ್ 50ನೇ ಹುಟ್ಟುಹಬ್ಬ ಹಿನ್ನೆಲೆ ಅಪ್ಪು ಸಮಾಧಿ ಬಳಿ ಅಭಿಮಾನಿಗಳು ನಿನ್ನೆ ರಾತ್ರಿಯಿಂದಲೇ ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಸೌತ್ ಆಫ್ರಿಕಾ ವೇಗಿಗೆ ನೋಟಿಸ್ ಕೊಟ್ಟ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್!
ಬಾರದ ಲೋಕಕ್ಕೆ ಹೋಗಿದ್ದರೂ ಅಪ್ಪು ಅಭಿಮಾನಿಗಳ ಪ್ರೀತಿ, ವಿಶ್ವಾಸ, ಹುಟ್ಟುಹಬ್ಬ ಆಚರಿಸುವ ಉತ್ಸಾಹ ಕಿಂಚಿತ್ತೂ ಕಮ್ಮಿಯಾಗಿಲ್ಲ. ಜೊತೆಗಿರದ ಜೀವವನ್ನು ಜೀವಂತವಾಗಿಸಿಕೊಂಡ ಅಭಿಮಾನಿಗಳು ರಾತ್ರಿಯಿಂದಲೇ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿ ಬಳಿ ಹುಟ್ಟುಹಬ್ಬ ಆಚರಣೆಯಲ್ಲಿ ತೊಡಗಿದ್ದಾರೆ.
50ನೇ ವರ್ಷದ ಹುಟ್ಟುಹಬ್ಬವನ್ನ ಅಭಿಮಾನಿಗಳು ಭಾರೀ ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಅಪ್ಪು ಸಮಾಧಿ ಬಳಿ ಜಾತ್ರೆಯ ವಾತಾವರಣ ನಿರ್ಮಾಣವಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಇಂದು
ಬೆಳಗ್ಗೆ 9 ಗಂಟೆ ಸುಮಾರಿಗೆ ಅಭಿಮಾನಿಗಳ ಸಮ್ಮುಖದಲ್ಲೇ ಅಪ್ಪು ಕುಟುಂಬಸ್ಥರು ಪೂಜೆ ಮಾಡಲಿದ್ದಾರೆ. ಬಳಿಕ ಸಮಾಧಿಯ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಇರುತ್ತದೆ. ನಾನಾ ಊರುಗಳಿಂದ ಸಾವಿರಾರು ಅಪ್ಪು ಅಭಿಮಾನಿಗಳು ಭೇಟಿ ಕೊಡುವ ನಿರೀಕ್ಷೆ ಇದೆ. ತಡರಾತ್ರಿ 12 ಗಂಟೆಯಿಂದ ಶುರುವಾದ ಅಪ್ಪು ಹುಟ್ಟುಹಬ್ಬ ಆಚರಣೆಯ£ನ್ನು ಇಂದು ಇಡೀ ದಿನ ಅಭಿಮಾನಿಗಳು ಹಬ್ಬದಂತೆ ಆಚರಿಸಲಿದ್ದಾರೆ.
ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರ ಘೋಷಿಸಿದೆ. ಅದರಂತೆ ಸ್ಫೂರ್ತಿಯ ಚಿಲುಮೆ ಅಪ್ಪು ನೆನಪಲ್ಲಿ ರಾಜ್ಯದೆಲ್ಲೆಡೆ ಅಭಿಮಾನಿಗಳು ತಮ್ಮಿಷ್ಟ ಬಂದಂತೆ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಜೊತೆಗೆ ಕಂಠೀರವ ಸ್ಟುಡಿಯೋದಲ್ಲಂತೂ ಜಾತ್ರೆಯೇ ನಡೆಯಲಿದ್ದು ಅನ್ನದಾನ, ಉಚಿತ ಆರೊಗ್ಯ ತಪಾಸಣೆ, ರಕ್ತದಾನ ಶಿಬಿರ, ವ್ಯಾಪಾರ ವಹಿವಾಟು ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯಲಿದೆ.