ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಣ ವಾಕ್ಸಮರ ತಾರಕಕ್ಕೇರಿದೆ. ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ ಕಾರಿದ್ದಾರೆ.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,, ‘ನನ್ನ ಸಿಎಂ ಮಾಡಿದ್ರೆ ವಾಪಸ್ ಬರುವುದಾಗಿ ಮುಂಬೈಗೆ ತೆರಳಿದ್ದ ಶಾಸಕರು ಹೇಳಿದ್ದರು. ಮುಂಬೈನಲ್ಲಿದ್ದ ಎಸ್.ಟಿ.ಸೋಮಶೇಖರ್, ಗೋಪಾಲಯ್ಯ ಹಾಗೆ ಹೇಳಿದ್ದರು. ಅಂದಿನ ಸಿಎಂ ಕುಮಾರಸ್ವಾಮಿಗೆ ಖುದ್ದು ಕರೆ ಮಾಡಿ ಹೇಳಿದ್ದರು. ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವುದಾದರೆ ವಾಪಸ್ ಬರುತ್ತೇವೆ ಎಂದು ಹೇಳಿದ್ದರು. ಆದರೆ, ಶಾಸಕರ ಬೇಡಿಕೆ ಬಗ್ಗೆ ಕುಮಾರಸ್ವಾಮಿ ಆಗ ಬಾಯಿ ಬಿಡಲೇ ಇಲ್ಲ’ ಎಂದು ಹೇಳಿದ್ದಾರೆ.
ಶಾಸಕರ ಬೇಡಿಕೆ ಬಗ್ಗೆ ಆಗ ಬಾಯಿ ಬಿಡದೇ ಇದ್ದ ಕುಮಾರಸ್ವಾಮಿ ಈಗ ಬೇಕಿದ್ದರೆ 19 ಶಾಸಕರು ಬೆಂಬಲ ಕೊಡ್ತೀವಿ ಎಂದು ಹೇಳ್ತಾರೆ. ಡಿ.ಕೆ.ಶಿವಕುಮಾರ್ ಸಿಎಂ ಆದರೆ ಬೆಂಬಲ ಕೊಡುತ್ತೇವೆ ಅಂತಾರೆ. ಹೆಚ್.ಡಿ.ಕುಮಾರಸ್ವಾಮಿ ಮಾತನ್ನು ನಂಬುವುದಕ್ಕೆ ನಾವು ದಡ್ಡರಾ ಎಂದು ಪ್ರಶ್ನಿಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)