ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಆದೇಶದಂತೆ ರಾಜ್ಯದಲ್ಲಿ ಕರ್ನಾಟಕ ಸಾರಿಗೆ ಇಲಾಖೆಯಿಂದ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳು (HSRP) ಅಳವಡಿಕೆಗೆ ಆದೇಶ ಹೊರಡಿಸಿದೆ. ಆದರೆ, ವಾಹನ ಸವಾರರ ಮನವಿಗೆ ಓಗೊಟ್ಟಿದ್ದ ರಾಜ್ಯ ಸರ್ಕಾರ ಈಗಾಗಲೇ 3 ಬಾರಿ ಅವಧಿ ವಿಸ್ತರಣೆ ಮಾಡಿ ಮೇ 31ಕ್ಕೆ ಗಡುವು ವಿಸ್ತರಿಸಿದೆ. ಈಗ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಅವಧಿ ವಿಸ್ತರಣೆಗೆ ಸರ್ಕಾರ ನಿರಾಸಕ್ತಿ ತೋರಿದ್ದು, ಜೂನ್ ತಿಂಗಳಿಂದ ದಂಡ ವಸೂಲಿ ಮಾಡಲು ನಿರ್ಧರಿಸಿದೆ.
ಹೌದು, ರಾಜ್ಯದ ವಾಹನ ಸವಾರರು ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಆಸಕ್ತಿ ತೋರಿಸುತ್ತಿಲ್ಲ. ಏಪ್ರಿಲ್ 2019 ಕ್ಕಿಂತ ಮೊದಲು ರಾಜ್ಯದಲ್ಲಿ ನೋಂದಣಿ ಮಾಡಿಕೊಂಡ ಎಲ್ಲ ದ್ವಿಚಕ್ರ, ತ್ರಿಚಕ್ರ ವಾಹನಗಳು, ಕಾರುಗಳು, ಲಘು, ಮಧ್ಯಮ ಮತ್ತು ಭಾರಿ ವಾಹನಗಳಿಗೆ ಈ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ನಿಯಮ ಅನ್ವಯವಾಗಲಿದೆ. ಈವರೆಗೆ ರಾಜ್ಯದಲ್ಲಿ 34 ಲಕ್ಷ ವಾಹನಗಳಿಗೆ ಮಾತ್ರ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆ ಮಾಡಲಾಗಿದೆ. ಈಗ ಮೇ 31 ರೊಳಗೆ ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯವಾಗಿದ್ದ, 21 ದಿನವಷ್ಟೇ ಬಾಕಿಯಿದೆ. ಹೀಗಿರುವಾಗ, ಇನ್ನೂ 1.56 ಕೋಟಿ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುವುದು ಬಾಕಿಯಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ನೆನಪಿಡಿ.. ಅಪ್ಪಿತಪ್ಪಿಯೂ ಊಟದ ಬಳಿಕ ಎಂದಿಗೂ ಈ ತಪ್ಪುಗಳನ್ನು ಮಾಡದಿರಿ..!
ಈಗಾಗಲೇ ಸಾರಿಗೆ ಇಲಾಖೆಯಿಂದ ರಾಜ್ಯದ ವಾಹನ ಸವಾರರಿಗೆ 3 ಬಾರಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಆದರೂ ವಾಹನ ಸವಾರರು ಆಸಕ್ತಿ ತೋರಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ನಿರ್ಲಕ್ಷ್ಯ ತೋರಿದ ವಾಹನ ಸವಾರರಿಗೆ ದಂಡ ವಿಧಿಸಲು ಮುಂದಾಗಿದೆ. ಜೂ.1 ರಿಂದ ಎಲ್ಲ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಸಿಕೊಳ್ಳದ ವಾಹನ ಸವಾರರಿಗೆ ದಂಡಾಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಹೀಗಾಗಿ, ವಾಹನ ಮಾಲೀಕರ ವಿರುದ್ಧ ಸಾರಿಗೆ ಇಲಾಖೆ ದಂಡಂ ದಶಗುಣಂ ಅಸ್ತ್ರ ಪ್ರಯೋಗಕ್ಕೆ ಸಿದ್ದವಾಗಿದೆ.
ರಾಜ್ಯದಲ್ಲಿ ಜೂ.1ರೊಳಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳದ ವಾಹನ ಸವಾರರಿಗೆ ಮೊದಲು ಬಾರಿಗೆ 500 ರೂ. ದಂಡ, ಎರಡನೇ ಬಾರಿ ಸಿಕ್ಕಿ ಬಿದ್ದರೆ 1,000 ರೂ. ದಂಡ ವಿಧಿಸಲು ತೀರ್ಮಾನ ಕೈಗೊಂಡಿದೆ. 2019 ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟೇಷನ್ ಪ್ಲೇಟ್ ಇಲ್ಲದಿದ್ದರೆ ದಂಡ ವಿಧಿಸಲಾಗುತ್ತದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)