ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಸ್ಪೋಟ ಬೆನ್ನಲ್ಲೇ ಮತ್ತೊಂದು ಪ್ರತಿಷ್ಠಿತ ರೆಸ್ಟೋರೆಂಟ್ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ಗೆ ಬೆದರಿಕೆ ಕರೆ ಬಂದಿದ್ದು, ಶೀಘ್ರದಲ್ಲೇ ರೆಸ್ಟೋರೆಂಟ್ನಲ್ಲಿ ಬಾಂಬ್ ಸ್ಫೋಟವಾಗುತ್ತೆ ಎಂದು ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾನೆ.
ಸ್ಯಾಲರಿ ಕೊಟ್ಟಿಲ್ಲ ಎಂದು ಕುಡಿದು ಬಾಂಬ್ ಬೆದರಿಕೆ ಮಾಡಿದ್ದ ಆರೋಪಿಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ಗೆ ತಡರಾತ್ರಿ ಕರೆ ಬಂದಿದ್ದು, ಶೀಘ್ರದಲ್ಲೇ ಬಾಂಬ್ ಸ್ಫೋಟವಾಗುತ್ತದೆ ಎಂದು ಬೆದರಿಕೆ ಹಾಕಿ ಕಾಲ್ ಕಟ್ ಮಾಡಲಾಗಿದೆ. ಕೂಡಲೇ ರೆಸ್ಟೋರೆಂಟ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ರಾತ್ರಿ ಇಡೀ ಪರಿಶೀಲನೆ ನಡೆಸಿದ್ದಾರೆ.
17 ವರ್ಷ ವನವಾಸ ಅನುಭವಿಸಿದ್ದೇನೆ, ಡಿಸೆಂಬರ್ ಒಳಗೆ ಸರ್ಕಾರ ಬೀಳಲಿದೆ: HDK ಭವಿಷ್ಯ
ಬಳಿಕ ಅನುಮಾನ ಮೂಡಿದ ಹಿನ್ನೆಲೆ ಇಂದಿರಾನಗರ ಬ್ರಾಂಚ್ನಲ್ಲಿ ಕೆಲಸ ಮಾಡುತ್ತಿದ್ದ ವೇಲು ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪೊಲೀಸರೇ ಶಾಕ್ ಆಗಿದ್ದಾರೆ. ಸಂಬಳ ಕೊಡದ ಹಿನ್ನೆಲೆ ತಾನು ರೆಸ್ಟೋರೆಂಟ್ಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದಾಗಿ ವೇಲು ಬಾಯಿಬಿಟ್ಟಿದ್ದಾನೆ.
ರೆಸ್ಟೋರೆಂಟ್ ನ ನೌಕರನಾಗಿರುವ ವೇಲು ಇಂದಿರಾನಗರ ಬ್ರಾಂಚ್ ನಲ್ಲಿ ಕೆಲಸ ಮಾಡುವ ವೇಲು ರಾತ್ರಿ ಪೂರ್ತಿ ರೆಸ್ಟೋರೆಂಟ್ ಪರಿಶೀಲನೆ ನಡೆಸಿದ್ದ ಪೊಲೀಸರು ಬಳಿಕ ವೇಲು ವಶಕ್ಕೆ ಪಡೆದಾಗ ಹುಸಿ ಬಾಂಬ್ ಬಾಂಬ್ ಬೆದರಿಕೆ ಎಂಬುದು ಪತ್ತೆ ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.