ವಿಜಯಪುರ: ಗುಮ್ಮಟನಗರಿಯಲ್ಲಿ ಮನೆಗಳ್ಳತನ ಪ್ರಕರಣದಲ್ಲಿ ನಾಲ್ವರು ಆರೋಪಗಳನ್ನು ಬಂಧಿಸಲಾಗಿದೆ ಎಂದು ಎಸ್ ಪಿ ಋಷಿಕೇಶ ಸೋನವಾಣೆ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 12 ಲಕ್ಷ 17 ಸಾವಿರ ಮೌಲ್ಯದ 210 ಗ್ರಾಮ ತೂಕದ ಚಿನ್ನಾಭರಣ, 20 ಗ್ರಾಮ ಬೆಳ್ಳಿ, ಎಲ್ ಇ ಡಿ ಟಿವಿ, ಎರಡು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಇನ್ನೂ ಪ್ರಕರಣದಲ್ಲಿ ಆರೋಪಿಗಳಾದ ಜಮೀರ ಖಾನ್, ಅನ್ವರ ಶೇಖ್, ಆಸೀಫ್ ಹವಾಲ್ದಾರ್, ಸನ್ಮಾನ ಖಾನ ಬಂಧಿತ ಆರೋಪಿಗಳಾಗಿದ್ದು ಬಂಧಿತರು ನಗರದ ಮದೀನಾ ನಗರದಲ್ಲಿ 4 ಮನೆಗಳ್ಳತನ ಕೃತ್ಯಗಳನ್ನು ಮಾಡಿರುವ ಬಗ್ಗೆ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಅಲ್ಲದೇ, ಮೂರು ಗಾಂಧಿಚೌಕ್ ಹಾಗೂ ಒಂದು ಜಲನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.