ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಸಂಬಂಧ ಜೈಲು ಪಾಲಾಗಿದ್ದ ಚಿತ್ರದುರ್ಗದ ಮುರುಘಾಶ್ರೀಗೆ ಜಾಮೀನು ಸಿಕ್ಕಿದ್ದು, ಇದೀಗ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ. ದಾವಣಗೆರೆ ಜಯದೇವ ಗದ್ದುಗೆ ದರ್ಶನ ಪಡೆದುಕೊಂಡಿದ್ದಾರೆ.
ಮೂರು ಗಂಟೆಯಿಂದ ಕೋರ್ಟ ವಿಸಿಗೆ ಹಾಜರಾಗಲಿರುವ ಸ್ವಾಮೀಜಿ, ಒಂದು ವರ್ಷದ ಬಳಿಕ ಮಠದಲ್ಲಿ ಊಟ ಮಾಡಿದ್ದಾರೆ. ಈ ವೇಳೆ ಸ್ವಾಮೀಜಿಗಳನ್ನ ಭೇಟಿ ಆಗಲು ವೈದ್ಯರು, ವ್ಯಾಪಾರಿಗಳು ಸೇರಿದಂತೆ ನೂರಾರು ಭಕ್ತರು ಆಗಮಿಸಿದ್ದಾರೆ. ಬಳಿಕ ದಾವಣಗೆರೆಯ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಲಿದ್ದಾರೆ.