ಶಿವಮೊಗ್ಗ ;– ಬರೋಬ್ಬರಿ 25 ಕುರಿಗಳು ಬೀದಿನಾಯಿಗಳ ಹಾವಳಿಗೆ ಸಾವನ್ನಪ್ಪಿರುವ ಘಟನೆ ಜರುಗಿದೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ಈ ಘಟನೆ ಜರುಗಿದೆ.

ವೇಲಾಯುಧನ್ ಎಂಬವರಿಗೆ ಸೇರಿದ ಕುರಿಗಳು, ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಣಿಕೆರೆ ಗ್ರಾಮದಲ್ಲಿ ಸಾವಿಗೀಡಾಗಿವೆ.
ವೇಲಾಯುಧನ್ ಕುರಿ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಕೊಟ್ಟಿಗೆಯಲ್ಲಿದ್ದ ಇತರ ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ ಈ ಘಟನೆ ನಡೆದಿದೆ.
