ಬೆಂಗಳೂರು: ಜೈ ಶ್ರೀರಾಮ್ ಎಂದು ಘೋಷಣೆ ಕೂಗಿಕೊಂಡು ಮೂವರು ಯುವಕರು ಹೋಗುತ್ತಿದ್ದ ಕಾರಿಗೆ ಅಡ್ಡಗಟ್ಟಿದ ಇಬ್ಬರು ಯುವಕರು ಆಕ್ಷೇಪ ವ್ಯಕ್ತಪಡಿಸಿ, ಹಲ್ಲೆ ನಡೆಸಿರುವ ಘಟನೆ ಸಂಬಂಧ ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿ ಪ್ರಸಾದ್ ಪ್ರತಿಕ್ರಿಯಿಸಿದ್ದು, ”ವಿದ್ಯಾರಣ್ಯಪುರ ಬೆಟ್ಟಳ್ಳಿ ಬಳಿ ಈ ಘಟನೆ ನಡೆದಿದೆ.
ನಿಮಗೆ ಈರುಳ್ಳಿ ಕತ್ತರಿಸಿ ಫ್ರಿಡ್ಜ್ʼನಲ್ಲಿ ಇಡೋ ಅಭ್ಯಾಸವಿದೆಯಾ?! ಇದೆಷ್ಟು ಡೇಂಜರ್ ಗೊತ್ತಾ ?
ಈ ಸಂಬಂಧ ದೂರು ನೀಡಿದ ಮೇರೆಗೆ ಆರೋಪಿತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡಲಾಗಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಇವರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ. ಘಟನೆಯಲ್ಲಿ ನಾಲ್ವರು ಆರೋಪಿಗಳು ಭಾಗಿಯಾಗಿರುವುದು ತಿಳಿದು ಬಂದಿದೆ. ತನಿಖೆ ಮುಂದುವರೆದಿದ್ದು, ಮತ್ತೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಪರಿಶೀಲಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.