ಬೆಂಗಳೂರು:- ನಗರತ್ಪೇಟೆ ಹಲ್ಲೆ ಪ್ರಕರಣವನ್ನು ಬಿಜೆಪಿ ಸ್ವಾರ್ಥಕ್ಕೆ ಬಳಸುತ್ತಿದೆ ಎಂದು ಸಚಿವ ದಿನೇಶ್ ಗೂಂಡೂರಾವ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಯುವಕನ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವುದು ತಪ್ಪು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಅಲ್ಲದೆ, ಪ್ರಕರಣವನ್ನು ಬಿಜೆಪಿ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಬಿಜೆಪಿಯವರಿಗೆ ಭಾವನಾತ್ಮಕ ವಿಚಾರಗಳೇ ಬೇಕು. ಇಂತಹ ಘಟನೆಗಳ ನಡೆಯಲಿ ಅಂತ ಕಾಯುತ್ತಿರುತ್ತಾರೆ. ಉರಿಯುವ ಬೆಂಕಿಗೆ ತುಪ್ಪ ಸುರಿಯೋದು ಇವರ ಉದ್ದೇಶ ಎಂದರು.
ಪ್ರಕರಣ ಸಂಬಂಧ ದೂರಿನಲ್ಲಿ ಎಲ್ಲಿ ಕೂಡ ಹನುಮಾನ್ ಚಾಲೀಸಾ ಮತ್ತು ಆಜಾನ್ ಬಗ್ಗೆ ಪ್ರಸ್ತಾಪ ಇಲ್ಲ. ಸಂಸದ ತೇಜಸ್ವಿ ಸೂರ್ಯ ಅವರು ದ್ವೇಷದ ವಾತಾವರಣ ಸೃಷ್ಟಿಸಲು ವರ್ತಿಸಿರುವುದು ಖಂಡನೀಯ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಹೇಗೆ ನಡೆದುಕೊಳ್ಳಬೇಕು ಎಂದು ತಿಳಿದುಕೊಳ್ಳಬೇಕು. ಅನಾವಶ್ಯಕವಾಗಿ ಭಯ ಹುಟ್ಟಿಸಲಾಗುತ್ತಿದೆ. ಚುನಾವಣೆ ಇದೆ ಎಂಬ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.ಪ್ರಕರಣ ಸಂಬಂಧ ದೂರಿನಲ್ಲಿ ಎಲ್ಲಿ ಕೂಡ ಹನುಮಾನ್ ಚಾಲೀಸಾ ಮತ್ತು ಆಜಾನ್ ಬಗ್ಗೆ ಪ್ರಸ್ತಾಪ ಇಲ್ಲ. ಸಂಸದ ತೇಜಸ್ವಿ ಸೂರ್ಯ ಅವರು ದ್ವೇಷದ ವಾತಾವರಣ ಸೃಷ್ಟಿಸಲು ವರ್ತಿಸಿರುವುದು ಖಂಡನೀಯ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಹೇಗೆ ನಡೆದುಕೊಳ್ಳಬೇಕು ಎಂದು ತಿಳಿದುಕೊಳ್ಳಬೇಕು. ಅನಾವಶ್ಯಕವಾಗಿ ಭಯ ಹುಟ್ಟಿಸಲಾಗುತ್ತಿದೆ. ಚುನಾವಣೆ ಇದೆ ಎಂಬ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.