ಕಲಬುರ್ಗಿ:– ಕೇಂದ್ರದಲ್ಲಿರುವುದು ಒಬ್ಬ ಅಸಮರ್ಥ ಹೋಮ್ ಮಿನಿಸ್ಟರ್ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ
ಈ ಸಂಬಂಧ ಮಾತನಾಡಿದ ಅವರು,ಸಂಸತ್ ಮೇಲಿನ ದಾಳಿ ಪ್ರಕರಣದ ಕುರಿತು ಇಂದಿಗೂ ಸದನದಲ್ಲಿ ಒಂದು ಹೇಳಿಕೆ ನೀಡಲಾಗದ ಅಮಿತ್ ಶಾ ಈ ದೇಶ ಕಂಡ ಅಸಮರ್ಥ ಎಂದರು.
, ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಸಂಸತ್ ಮೇಲಿನ ದಾಳಿ ಯತ್ನ ಒಂದು ಗಂಭೀರ ವಿಷಯ ಎಂದು ವ್ಯಾಖ್ಯಾನಿಸಿದ್ದಾರೆ.
ಇಷ್ಟಾದರೂ ಗೃಹ ಸಚಿವ ಅಮಿತ್ ಶಾ ಅವರು ಸದನದಲ್ಲಿ ಈ ಕುರಿತು ಅಧಿಕೃತವಾದ ಹೇಳಿಕೆ ನೀಡಲು ಹಿಂದೇಟು ಹಾಕುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು. ಸಂಸತ್ ಸದಸ್ಯರ ಅಮಾನತು ಕುರಿತಂತೆ ಪ್ರತಿಕ್ರಿಯಿಸಿದ ಅವರು, ದೇಶದ ಇತಿಹಾಸದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಎಂದೂ ಚುನಾಯಿತ ಸದಸ್ಯರ ಅಮಾನತು ಆಗಿರಲಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವ ಗೃಹ ಸಚಿವರು ಪಾರ್ಲಿಮೆಂಟ್ನಲ್ಲಿ ಹೇಳಿಕೆ ನೀಡಬೇಕೆ ಹೊರತು, ಪ್ರತಿಪಕ್ಷಗಳ ಸದಸ್ಯರನ್ನು ಹೀಗೆ ಅಮಾನತುಗೊಳಿಸಲು ಮುಂದಾಗಬಾರದು. ಇದವರ ಅಸಮರ್ಥ ಕಾರ್ಯಶೈಲಿಯನ್ನು ಎತ್ತಿ ತೋರಿಸುತ್ತಿದೆ ಎಂದರು.