ಬೆಂಗಳೂರು: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ವ್ಯಕ್ತಿಯೋರ್ವ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿರುವಂತಹ ಘಟನೆ ಕೋಲಾರದಲ್ಲಿ ನಡೆದಿದೆ.
ಮೆಜೆಸ್ಟಿಕ್ ನಿಂದ ಜೀವನ ಸ್ಟಾರ್ಟ್, ಕಾಮಾಕ್ಷಿಪಾಳ್ಯದಲ್ಲಿ ಲಾಕ್… ದರ್ಶನ್ ಕಾಂಟ್ರವರ್ಸಿ ಒಂದೆರಡಲ್ಲ..!
ಕೋಲಾರ ಜಿಲ್ಲೆ ಶ್ರೀನಿವಾಪುರ ತಾಲೂಕಿನ ಗುಡಸವಾರಪಲ್ಲಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಗುರವಳೋಳ್ಳಗಡ್ಡ ಗ್ರಾಮದ ನಿವಾಸಿ ನರಸಿಂಹ (45) ಎಂಬಾತ ಸಾವನ್ನಪ್ಪಿದ್ದಾನೆ.
ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯ ಗುಡಸರವಾರಪಲ್ಲಿ ಗ್ರಾಮದ ಬಳಿ ಇಸ್ಪೀಟ್ ಆಡಲಾಗುತ್ತಿದ್ದು ಮಾಹಿತಿ ಪಡೆದ ಪೊಲೀಸರು ನಿನ್ನೆ ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ನಾಲ್ವರು ಕೆರೆಗೆ ಹಾರಿದ್ದಾರೆ. ಇವರಲ್ಲಿ ಇಬ್ಬರು ವ್ಯಕ್ತಿಗಳು ಈಜುವ ಮೂಲಕ ಪೊಲೀಸರಿಂದ ತಪ್ಪಿಸಿಕೊಂಡಿದ್ದಾರೆ.
ನರಸಿಂಹ ಎಂಬ ವ್ಯಕ್ತಿ ಈಜಲಾಗದೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಇನ್ನೂ ಮೃತ ದೇಹಕ್ಕಾಗಿ ಪೊಲೀಸರು ಹಾಗೂ ಅಗ್ನಿ ಶಾಮಕ ದಳದವರು ಹುಡುಕಾಟ ನಡೆಸಿ ಶವ ಪತ್ತೆ ಮಾಡಿದ್ದಾರೆ. ಇನ್ನೂ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ನರಸಿಂಹಪ್ಪ ಅವರ ಸಾವಿಗೆ ಪೊಲೀಸರೇ ಕಾರಣ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನೂ ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.