ಬೆಂಗಳೂರು:- ಹೆತ್ತ ತಾಯಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ಪೆಕ್ಟರ್ ವಿರುದ್ಧ FI ದಾಖಲಾಗಿದೆ.
ರಾಮಮೂರ್ತಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ಹಲ್ಲೆ ಮಾಡಿದ ಸಬ್ ಇನ್ಸ್ಪೆಕ್ಟರ್. ಈ ಸಂಬಂಧ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ತಾಯಿ ಮಂಗಳಮ್ಮ ದೂರು ದಾಖಲಿಸಿದ್ದಾರೆ. ಸಬ್ ಇನ್ಸ್ಪೆಕ್ಟರ್ ಮಂಜುನಾಥ್ಗೆ ಮದುವೆಯಾಗಿದ್ದು, ಕೆಆರ್ ಪುರದ ಅಯ್ಯಪ್ಪ ನಗರದಲ್ಲಿ ಮಹಿಳೆಯೊಬ್ಬರ ಜೊತೆಗೆ ಅನೈತಿಕ ಸಂಬಂಧ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಮಾಹಿತಿ ಪಡೆದ ತಾಯಿ ಮಂಗಳಮ್ಮ ಮತ್ತು ಮಂಜುನಾಥನ ಇಬ್ಬರು ಸಹೋದರಿಯರು ಆ ಮಹಿಳೆಯ ಮನೆಯ ಬಳಿ ಹೋಗಿ ಗಲಾಟೆ ಮಾಡಿದ್ದಾರೆ. ಈ ವಿಚಾರ ತಿಳಿದ ಸಬ್ ಇನ್ಸ್ಪೆಕ್ಟರ್ ಮಂಜುನಾಥ್, ಸ್ಥಳಕ್ಕೆ ಹೋಗಿ ತಾಯಿ ಮಂಗಳಮ್ಮ ಮೇಲೆ ಹಲ್ಲೆ ಮಾಡಿ ಇಲ್ಲಿಂದ ಹೋಗುವಂತೆ ಗಲಾಟೆ ಮಾಡಿದ್ದಾರೆ.
ಈ ಸಂಬಂಧ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಮಗ ಮಂಜುನಾಥ್, ಮಹಿಳೆ ಮತ್ತು ಮತ್ತೊಬ್ಬ ವ್ಯಕ್ತಿಯ ಮೇಲೆ ಎಫ್ಐಆರ್ ದಾಖಲಾಗಿದೆ.