ದೇಶ ವಿಭಜನೆಯ ಹೇಳಿಕೆ ನೀಡಿದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಸದಸ್ಯ ಡಿಕೆ ಸುರೇಶ್ ರವರ ವಿರುದ್ಧ ಇಂದು ಗುಂಡ್ಲುಪೇಟೆ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು KSRTC ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿ ಡಿ ಕೆ ಸುರೇಶ್ ಪ್ರತಿಕೃತಿ ದಯಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಣಯ್ ದೇಶ ವಿಭಜನೆ ಎಂಬ ಪಿಡುಗು ಕಾಂಗ್ರೆಸ್ಸ್ ನವರ ಡಿಎನ್ಎ ದಲ್ಲೇ ಬಂದಿದೆ,ಸ್ವಾತಂತ್ರದ ದಿನದಿಂದಲೂ ದೇಶವನ್ನ ಹೊಡೆದು ಆಳುವ ನೀತಿಯನ್ನ ಕಾಂಗ್ರೆಸ್ಸ್ ನವರು ಮಾಡಿಕೊಂಡು ಬಂದಿದ್ದಾರೆ ಇದರ ಮುಂದುವರೆದ ಭಾಗವಾಗಿ ಇಂದಿನ ಕಾಂಗ್ರೆಸ್ಸ್ ನವರು ನಡೆದುಕೊಳ್ಳುತ್ತಿದ್ದಾರೆ.
ಇಂತಹ ಹೇಳಿಕೆ ಕೊಡಲು ಡಿ ಕೆ ಸುರೇಶ್ ರವರಿಗೆ ನಾಚಿಕೆಯಾಗಬೇಕು ಹಾಗು ಇವರ ಹೇಳಿಕೆ ಗಳನ್ನ ಸಮರ್ಥನೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ಸ್ ನಾಯಕರುಗಳ ವರ್ತನೆಯು ಅದೇ ರೀತಿಯಾಗಿದೆ ಎಂದು ಕಿಡಿಕಾರಿದರು,
ಕೂಡಲೇ ಡಿ ಕೆ ಸುರೇಶ್ ರವರನ್ನ ಸಂಸತ್ ಸದ್ಯಸ್ಯ ಸ್ಥಾನದಿಂದ ವಜಾ ಮಾಡಬೇಕೆಂದು ಆಗ್ರಹ ಆಗ್ರಹಿಸಿದರು. ಪ್ರತಿಭಟನೆ ನಂತರ ಗುಂಡ್ಲುಪೇಟೆ ತಾಲೂಕು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ತೆರಳಿದ ಕಾರ್ಯಕರ್ತರುಗಳನ್ನು ಪೊಲೀಸರು ಬಂದಿಸಿ ಠಾಣೆಗೆ ಕರೆದೊಯ್ದು ನಂತರ ಬಿಡುಗಡೆಗೊಳಿಸಿದರು.