ರಾಮನಗರ:– ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಗೋದೂರ ಗ್ರಾಮದಲ್ಲಿ ಮಗು ಜೊತೆ ಲಕ್ಷ್ಮಣರೇಖೆ ಔಷಧಿ ಕುಡಿದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜರುಗಿದೆ
ಚಿಕಿತ್ಸೆ ಫಲಿಸದೇ 3 ವರ್ಷದ ಮಗು ಸಾವನ್ನಪ್ಪಿದರೆ, ಅಸ್ವಸ್ಥ ತಾಯಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೀಕ್ಷಿತ್ ಗೌಡ(3) ಮೃತಪಟ್ಟ ಮಗು ಹಾಗೂ ಪೂರ್ಣಿಮಾ(24) ಮಗುವಿಗೆ ವಿಷವುಣಿಸಿದ ತಾಯಿ ಎನ್ನಲಾಗಿದೆ
ಇನ್ನು ಲಕ್ಷ್ಮಣ ರೇಖೆ ಎಂಬ ಹೆಸರಿನ ಜಿರಳೆಗಿಡುವ ವಿಷ ಇದಾಗಿದ್ದು, ತಾಯಿ ಪೂರ್ಣಿಮಾ ತಾನೂ ಕುಡಿದು, ಮಗುವಿಗೂ ವಿಷವುಣಿಸಿದ್ದಾರೆ. ಸತತ ವಾಂತಿ ಹಾಗೂ ಭೇದಿಯಿಂದ ಮಗು ಕೊನೆಯುಸಿರೆಳೆದಿದೆ. ಇದೀಗ ದಯಾನಂದ ಆಸ್ಪತ್ರೆಯಲ್ಲಿ ಮಗುವಿನ ಮರೋಣೋತ್ತರ ಪರೀಕ್ಷೆ ಮಾಡಲಾಗುತ್ತಿದ್ದು, ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.