ಉಡುಪಿ:- ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಣೂರು ತೆಕ್ಕಟ್ಟೆಯಲ್ಲಿ ಐಟಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಿರುವ ಘಟನೆ ಜರುಗಿದೆ.
IPL 2025: ಧೋನಿ RCB ಕ್ಯಾಪ್ಟನ್ ಆಗಿದ್ರೆ ಟ್ರೋಫಿಗಳಿಗೆ ಬರವೇ ಇರ್ತಿರಲಿಲ್ಲ; ಲೆಜೆಂಡ್ ಬೌಲರ್ ನ ಶಾಕಿಂಗ್ ಹೇಳಿಕೆ!
45 ವರ್ಷದ ಸಂತೋಷ್ ನಾಯಕ್, 46 ವರ್ಷದ ದೇವರಾಜ್ ಸುಂದರ್ ಮೆಂಡನ್ ಬಂಧಿತರು ಎನ್ನಲಾಗಿದೆ. ಉಳಿದ ಆರೋಪಿಗಳಿಗಾಗಿ ಉಡುಪಿ ಪೊಲೀಸ್ರು ಶೋಧ ಮುಂದುವರಿಸಿದ್ದಾರೆ. ಜುಲೈ 25ರಂದು ಜಿಲ್ಲೆಯ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಮಣೂರು ಎಂಬಲ್ಲಿ ಕವಿತಾ ಎಂಬುವವರ ಮನೆಯಲ್ಲಿ ಘಟನೆ ನಡೆದಿತ್ತು.
ಸದ್ಯ 15 ದಿನಗಳ ಹಿಂದೆ ಕೃತ್ಯಕ್ಕೆ ಬಳಸಿರುವ ಇನ್ನೋವಾ ಕಾರನ್ನು ಪೊಲೀಸ್ರು ವಶಕ್ಕೆ ಪಡೆದಿದ್ದು, ಉಡುಪಿ ನ್ಯಾಯಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಮಹಾರಾಷ್ಟದಿಂದ ಸಂಚು ರೂಪಿಸಿ ಐಟಿ ಅಧಿಕಾರಿಗಳ ಸೋಗಿನಲ್ಲಿ ಬಂದು ಕೃತ್ಯ ನಡೆಸಲು ಖದೀಮರು ಯೋಜನೆ ಹಾಕಿದ್ದರು.
ಮನೆಗೆ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದ ಲೈವ್ ಸರ್ವೇಲೆನ್ಸ್ ಮೂಲಕ ಎಚ್ಚರಿಕೆಯ ಸಂದೇಶ ರವಾನಿಸಲಾಗಿತ್ತು. ಎಚ್ಚರಿಕೆಯ ಹಿನ್ನಲೆ ಕವಿತಾ ಮನೆಯ ಬಾಗಿಲು ಭದ್ರಪಡಿಸಿ ಒಳಗೆ ಕುಳಿತಿದ್ದರು. ಮನೆಯ ಒಳಗೆ ಪ್ರವೇಶಿಸಲು ಯತ್ನ ನಡೆಸಿ ವಿಫಲರಾಗಿ ವಾಪಾಸ್ ಆಗಿದ್ದರು. ಘಟನೆ ಬಳಿಕ ಕವಿತಾ ದೂರಿನ ಮೇಲೆ ತನಿಖೆ ನಡೆಸಿದ್ದ ಉಡುಪಿ ಪೊಲೀಸ್, ಮಹಾರಾಷ್ಟ್ರ ಮತ್ತು ಬೆಂಗಳೂರಿನಲ್ಲಿ ಅಪರಾಧಿಗಳ ಶೋಧ ಮಾಡಿ ಇದೀಗ ಇಬ್ಬರನ್ನು ಬಂಧಿಸಿದ್ದಾರೆ.