ಬೆಂಗಳೂರು: ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವಂಥ ಬರ ಪರಿಹಾರವನ್ನು ರೈತರ ಖಾತೆಗಳಿಗೆ ನೆರ ವರ್ಗಾವಣೆ ಮೂಲಕ ಬಿಡುಗಡೆ ಮಾಡಲು ರಾಜ್ಯ ಸರ್ಕಾರದ ಕಂದಾಯ ಇಲಾಖೆಗೂ ಆದೇಶವನ್ನು ಹೊರಡಿಸಿದೆ. ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಗರಿಷ್ಠ 2 ಹೆಕ್ಟೇರ್ ಪ್ರದೇಶದ ಮಿತಿಗೊಳಪಟ್ಟು ಬೆಳೆ ನಷ್ಟ ಪರಿಹಾರ ನಿಗದಿ ಮಾಡಲಾಗಿದೆ.
- ಮಳೆಯಾಶ್ರಿತ ಬೆಳೆಗೆ – 8,500 ರೂ.
- ನೀರಾವರಿ ಪ್ರದೇಶದ ಬೆಳೆ – 17,000 ರೂ.
- ದೀರ್ಘಾವಧಿ (ತೋಟಗಾರಿಕೆ) ಬೆಳೆ – 22,500 ರೂ.
ಮೇಲೆ ತಿಳಿಸಿರುವಷ್ಟು ಹಣ ರೈತರು ಖಾತೆಗಳಿಗೆ ಜಮಾ ಆಗಬೇಕು, ಆದರೆ ಈಗಾಗಲೇ ಮೊದಲನೇ ಕಂತಿನಲ್ಲಿ ಎರಡು ಸಾವಿರ ರೂಪಾಯಿಗಳನ್ನು ರೈತರ ಖಾತೆಗಳಿಗೆ ಜಮಾ ಮಾಡಲಾಗಿದ್ದು, ಅದನ್ನು ಮುರಿದುಕೊಂಡು ಉಳಿದ ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡುವ ಸಂಬವವಿದೆ.
2023-24 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ತಾವೇ ಖುದ್ದಾಗಿ ಗೂಗಲ್ ಪ್ಲೇಸ್ಟೋರ್ ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2023″ ಹಾಗೂ ಆಯಾ ಗ್ರಾಮದ ಖಾಸಗಿ ನಿವಾಸಿಗಳ “ಮುಂಗಾರು ಬೆಳೆ ಸಮೀಕ್ಷೆ 2023-24″ ನ್ನು Download ಮಾಡಿಕೊಂಡು ಬೆಳೆ ವಿವರಗಳನ್ನು ದಾಖಲಿಸಬೇಕಾಗಿದೆ.
ಹೀಗೆ ವಿವರಗಳನ್ನು ದಾಖಲಿಸುವದರಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು, ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ಬೆಳೆಸಾಲ ಪಡೆಯುವಲ್ಲಿ ರೈತರಿಗೆ ಅನುಕೂಲವಾಗುವದರಿಂದ ಎಲ್ಲ ರೈತರು ಬೆಳೆ ವಿವರಗಳನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ಆ್ಯಪ್ನಲ್ಲಿ ದಾಖಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ.
ಆದರೆ ಕೇಂದ್ರ ಸರ್ಕಾರದಿಂದ ನಿರೀಕ್ಷಿಸಿದಷ್ಟು ಪರಿಹಾರ ನಮ್ಮ ರಾಜ್ಯಕ್ಕೆ ನೀಡಿಲ್ಲ ಎಂದು ರಾಜ್ಯ ಸರ್ಕಾರವು ಮತ್ತೆ ನಾವು ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಈಗಾಗಲೇ ಹೇಳಿದೆ. ಹಾಗಾಗಿ ಇದೇ ಕಂತಿನಲ್ಲಿ ಪೂರ್ತಿ ಪ್ರಮಾಣದ ಬೆಳೆ ಪರಿಹಾರವನ್ನು ರೈತರ ಖಾತೆಗಳಿಗೆ ಹಾಕುತ್ತಾರೋ ಅಥವಾ ಇಲ್ಲವೋ ಎಂಬುದು ಜಮೆಯಾದ ಬಳಿಕವಷ್ಟೇ ತಿಳಿಯುತ್ತದೆ.