Author: Author AIN

ಹುಬ್ಬಳ್ಳಿ : ಮುಡಾ ಪ್ರಕರಣದ ಲೋಕಾಯುಕ್ತ ತನಿಖೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಗುತ್ತದೆ ಎಂದು ಮೊದಲೇ ಗೊತ್ತಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತದಲ್ಲಿ ಅಧಿಕಾರಿಗಳನ್ನ ಪೋಸ್ಟಿಂಗ್ ಮಾಡುವುದು ಸಿಎಂ‌ ಕೈಯಲ್ಲೇ ಇರುತ್ತದೆ. ಇದನ್ನ ಲೋಕಾಯುಕ್ತ ಪೊಲೀಸರಿಂದ ತನಿಖೆ ಮಾಡಿದ್ರೆ ಇದನ್ನ ಮುಚ್ಚಿ ಹಾಕ್ತಾರೆ ಅಂತ ಆವತ್ತೇ ಹೇಳಿದ್ದೆ, ಇಂದು ಅದೇ ಪರಿಸ್ಥಿತಿ ಆಗಿದೆ ಎಂದರು. ರಾತ್ರೋ ರಾತ್ರಿ ಅಧಿಕಾರಿಗಳನ್ನ ಯಾರೆಲ್ಲ ಭೇಟಿಯಾಗಿ ಬಂದಿದ್ದಾರೆ ಅನ್ನೋದು ಎಲ್ಲವೂ ಗೊತ್ತಿದೆ. ಇದೇನೂ ಆಶ್ಚರ್ಯಕರ ಸಂಗತಿ ಏನೂ ಅಲ್ಲ. ನಿಷ್ಪಕ್ಷಪಾತ ತನಿಖೆಯಾಗಬೇಕಾದ್ರೆ ನೇರವಾಗಿ ಸಿಬಿಐ ತನುಖೆ ಮಾಡಿಸಬೇಕು‌. ಆವಾಗ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದರು. https://ainlivenews.com/ed-submitted-the-muda-scam-investigation-report-to-the-high-court/ ಇನ್ನೂ ಪಡಿತರ ಅಕ್ಕಿ‌ ವಿಚಾರವಾಗಿ ರಾಜ್ಯ ಸರ್ಕಾರದವರಿಗೆ ಈಗ ಜ್ಞಾನೋದಯವಾಗಿದೆ. ನಾವು ಅಕ್ಕಿ ಕೊಡುತ್ತೇವೆ ಅಂದಾಗ ಇವ್ರು ತಗೋಳೋಕೆ ಮುಂದೆ ಬರಲಿಲ್ಲ. ಈಗ ಈ‌ ಬಗ್ಗೆ ಚರ್ಚೆ ಗಂಭೀರವಾದಾಗ ಸಿಎಂ ಅವರಿಗೆ ಬುದ್ದಿ ಬಂದಿದೆ. ಇದೀಗ ಅನಿವಾರ್ಯವಾಗಿ…

Read More

ಧಾರವಾಡ : ನಂಬರ್‌ ಪ್ಲೇಟ್ ಚೇಂಜ್ ಮಾಡಿ ಸ್ಪಿರಿಟ್‌ ಸಾಗಾಟ ಮಾಡುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿಯಿಂದ ಗೋವಾ ಕ್ಕೆ ಹೋಗುವಾಗ ಘಟನೆ ನಡೆದಿದೆ. ಅಬಕಾರಿ ಇಲಾಖೆಯ ಅಧಿಕಾರಿಗಳು ರೇಡ್‌ ಮಾಡಿದ್ದು, ಟ್ಯಾಂಕರ್‌ ಸಮೇತ ಚಾಲಕ ಓಂ ಪ್ರಕಾಶ್‌ನನ್ನು ಬಂಧಿಸಿದ್ದಾರೆ. ಬಂಧಿತ ಕಳೆದ 6 ತಿಂಗಳಿಂದ ಅಕ್ರಮವಾಗಿ ಟ್ಯಾಂಕರ್‌ ಮುಖಾಂತರ ಸಾಗಾಟ ಮಾಡುತ್ತಿದ್ದ ಓಂ ಪ್ರಕಾಶ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. https://ainlivenews.com/ed-submitted-the-muda-scam-investigation-report-to-the-high-court/ ಟ್ಯಾಂಕರ್‌ನಲ್ಲಿ 40,000 ಲೀಟರ್ ಸ್ಪಿರಿಟ್ ಸಾಗಾಟ ಮಾಡುವಾಗ ಅಧಿಕಾರಿಗಳು ದಾಳಿ ಮಾಡಿದ್ದು, 24 ಲಕ್ಷ ಮೌಲ್ಯದ ಸ್ಪಿರಿಟ್, 55 ಲಕ್ಷ ಮೌಲ್ಯದ ಟ್ಯಾಂಕರ್‌ ಸಮೇತ ಓಂ ಪ್ರಕಾಶ್‌ನನ್ನು ಬಂಧಿಸಿದ್ದಾರೆ. ಸದ್ಯ  ಅಬಕಾರಿ ಇಲಾಖೆಯ ಅಧಿಕಾರಿಗಳು ಟ್ಯಾಂಕರ್ ಚಾಲಕ ಓಂ ಪ್ರಕಾಶ್‌ ಮತ್ತು ಮಾಲೀಕ ಸುಖದೇವ್ ಮೇಲೆ ದೂರು ದಾಖಲಿಸಿಕೊಂಡಿದ್ದಾರೆ.

Read More

ಧಾರವಾಡ : ಮುಡಾ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಮಹತ್ವದ ಹೆಜ್ಜೆ ಇಟ್ಟಿದೆ. ಇಡಿ ತನಿಖೆಯ ಮೊದಲ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದೆ. ಇಡಿ ಪರ ವಕೀಲ ಹೆಚ್ಚುವರಿ ಸಾಲಿಸಿಟರ್ ಜನಲರ್ ಅರವಿಂದ್ ಕಾಮತ್ ರವರು  ಇಲ್ಲಿಯವರೆಗಿನ ಇಡಿ ತನಿಖಾ ವರದಿಯನ್ನು ಕಾಫಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಮುಡಾ ಹಗರಣದ ತನಿಖೆ ನಡೆಸುತ್ತಿರುವ ಇಡಿ ಈಗಾಗಲೇ 142 ಸೈಟ್ ಗಳ ಜನ್ಮ ಜಾಲಾಡಿದ್ದು, ಈ ಹಿಂದೆಯೇ 142 ಸೈಟ್ ಗಳನ್ನು ಮಾರಾಟ ಮಾಡದಂತೆ ತಡೆ ಹಾಕಿತ್ತು ಕೂಡ. ಮೈಸೂರು ಸಬ್ ರಿಜಿಸ್ಟರ್ ಕಚೇರಿಗೆ ಮರು ಮಾರಾಟ, ನೋಂದಣಿ ಪ್ರಕ್ರಿಯೆ ನಡೆಸದಂತೆ ತಿಳಿಸಿತ್ತು. https://ainlivenews.com/kidnapping-case-of-real-estate-businessman-in-belgaum-has-a-happy-ending/ ಈಗ ಅದೇ 142 ಸೈಟ್ ಗಳ ಮಾಲೀಕರ, ಸಂಬಂಧಿಗಳ ಖಾತೆಗಳನ್ನು ಜಾಲಾಡಿದ್ದು, ಅದಕ್ಕೆ ಸಂಬಂಧಿಸಿದ ತನಿಖಾ ವರದಿ ಹೈಕೋರ್ಟ್ ಗೆ ಸಲ್ಲಿಸಿದ್ದಾರೆ. ಈ 142 ಸೈಟ್ ಗಳಲ್ಲಿ ಅನೇಕರು ಮೊಮ್ಮಕ್ಕಳಿಗೆ ಸೈಟ್ ಕೊಟ್ಟಿದ್ದಾರೆ. ತಾವು ಮುಚ್ಚಿದ ಲಕೋಟೆಯ ದಾಖಲೆಗಳನ್ನು ನೋಡಬಹುದು. ಇದನ್ನು ಆಧರಿಸಿಯೇ ನಾವು ಪಾರ್ವತಿ, ಭೈರತಿಯವರ…

Read More

ಬೆಂಗಳೂರು: ನಾವೆಲ್ಲರು ಸಂವಿಧಾನ, ನ್ಯಾಯಾಲಯದಲ್ಲಿ ಭರವಸೆ ಇಟ್ಟುಕೊಂಡು ಕೆಲಸ ಮಾಡ್ತಿದ್ದೇವೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಕೇತಗಾನಹಳ್ಳಿ ಜಮೀನು ಸರ್ವೇ ರಾಜಕೀಯ ಪ್ರೇರಿತ ಎಂಬ ಕುಮಾರಸ್ವಾಮಿ ಆರೋಪಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಕೇತಗಾನಹಳ್ಳಿ ಜಮೀನು ಸರ್ವೇ ಕೋರ್ಟ್ ಆದೇಶದ ಮೇರೆಗೆ ನಡೆಯುತ್ತಿದೆ. ಸರ್ಕಾರ ಉದ್ದೇಶಪೂರ್ವಕವಾಗಿ ಮಾಡ್ತಿರೋದಲ್ಲ. ಅಧಿಕಾರ ದುರ್ಬಳಕೆ ಮಾಡಿರುವುದು ಕುಮಾರಸ್ವಾಮಿಯವರು, ಸರ್ಕಾರವಲ್ಲ. ಜಮೀನು ಸರ್ವೇ ಸರ್ಕಾರ ಮಾಡುತ್ತಿಲ್ಲ. ಕೋರ್ಟ್ ನಿರ್ದೇಶನದ ಮೇಲೆ ಆಗುತ್ತಿದೆ. ಹಾಗಾದ್ರೆ ಕೋರ್ಟ್ ಸರ್ವೇ ಮಾಡಿ ಎಂದು ಹೇಳಿರುವುದು ರಾಜಕೀಯನಾ? ಎಂದು ಪ್ರಶ್ನೆ ಮಾಡಿದರು. https://ainlivenews.com/drip-irrigation-facility-under-agricultural-irrigation-scheme-at-90-subsidy/ ನಾವೆಲ್ಲರು ಸಂವಿಧಾನ, ನ್ಯಾಯಾಲಯದಲ್ಲಿ ಭರವಸೆ ಇಟ್ಟುಕೊಂಡು ಕೆಲಸ ಮಾಡ್ತಿದ್ದೇವೆ. ಈ ಸರ್ವೇ ಸರ್ಕಾರ ಮಾಡಿದ್ದಲ್ಲ. ನ್ಯಾಯಾಲಯದ ಸೂಚನೆ ಮೇಲೆ ಆಗ್ತಿರೋದು. ಕುಮಾರಸ್ವಾಮಿ ಅವರು ಈ ರೀತಿ ಮಾತನಾಡಿದರೆ ಅದು ದುರಂತ. ಅವರು ದಾಖಲೆ ಬಿಡುಗಡೆ ಮಾಡ್ತೀನಿ ಎಂದು ಹೇಳುತ್ತಲೇ ಇದ್ದಾರೆ. ದಾಖಲಾತಿ ಬಿಡುಗಡೆ ಮಾಡಲಿ ಎಂದು ಸವಾಲೊಡ್ಡಿದರು.

Read More

ಬೆಂಗಳೂರು: ಲೋಕಾಯುಕ್ತ ಒಂದು ಸ್ವಾಯತ್ತ ಸಂಸ್ಥೆ ಎಂದು ಹೈಕೋರ್ಟ್ ಹೇಳಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ವಿಚಾರಕ್ಕೆ ನಗರದಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಪ್ರಾರಂಭದಲ್ಲೇ ನಾನು ಹೇಳಿದ್ದೆ. ಬಿಜೆಪಿ ಹಾಗೂ ಜೆಡಿಎಸ್​​ನವರು ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಮಾಡಿದಾಗಲೇ, ನಾನು ಏನು ಹೇಳಬೇಕೋ ಹೇಳಿದ್ದೆ. https://ainlivenews.com/drip-irrigation-facility-under-agricultural-irrigation-scheme-at-90-subsidy/ ಇದು ರಾಜಕೀಯ ಪ್ರೇರಿತ ಆರೋಪ. ಯಾವ ದಾಖಲೆಯಲ್ಲೂ ಸಿದ್ದರಾಮಯ್ಯ ಅವರ ಸಹಿ ಇಲ್ಲದಿರುವಾಗ, ಸಂಬಂಧವೇ ಇಲ್ಲದಿರುವಾಗ ಅವರ ಪಾತ್ರ ಹೇಗೆ ಬರುತ್ತದೆ? ಆಸ್ತಿ ಕಳೆದುಕೊಂಡವರು ಪರಿಹಾರ ಕೇಳುವುದು ಸಹಜ. ನಾವು ನೀವು ಕೂಡ ಕೇಳುತ್ತೇವೆ. ಮುಡಾದವರು ಕೊಟ್ಟಿದ್ದಾರೆ. ನಮಗೆ ಇಂತಹದೇ ಜಾಗದಲ್ಲಿ ನಿವೇಶನ ನೀಡಿ ಎಂದು ಅವರು ಎಲ್ಲಿಯೂ ಕೇಳಿಲ್ಲ ಎಂದು ಸಮರ್ಥಿಸಿಕೊಂಡರು. ಆದರೂ ಅನಗತ್ಯ ಗೊಂದಲ ಬೇಡ ಎಂದು ಅವರು ಈ ನಿವೇಶನಗಳನ್ನು ವಾಪಸ್ ನೀಡಿದ್ದಾರೆ. ಯಾವುದೇ ಪ್ರಕರಣ ದಾಖಲಿಸುವಾಗ ಅದಕ್ಕೆ ಪೂರಕವಾದ ದಾಖಲೆ ಬೇಕು.…

Read More

ಬೀದರ್‌ : ಕಾರಂಜ ಸಂತ್ರಸ್ತರೊಬ್ಬರು ಪರಿಹಾರಕ್ಕಾಗಿ ಸಚಿವ ಈಶ್ವರ್ ಖಂಡ್ರೆ ಕಾಲಿಗೆ ಬಿದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈಶ್ವರ್‌ ಖಂಡ್ರೆ  ಜಿಲ್ಲೆಗೆ ಭೇಟಿ ನೀಡಿದ ವೇಳೆ ಕಾರಂಜಾ ಡ್ಯಾಂ ನಿರ್ಮಾಣ ವೇಳೆ ನನ್ನ 26 ಎಕರೆ ಜಮೀನು ಹೋಗಿದೆ. ನಾನು ಇನ್ನೂ ಎಷ್ಟು ವರ್ಷ ಕಾಯಬೇಕು. ನಮಗೆ ಪರಿಹಾರ ಹಣ ನೀಡಿ ಎಂದು ಕಾರಂಜ ಡ್ಯಾಂನ ನಿರ್ಮಾಣದ ವೇಳೆ ಭೂಮಿ ಕಳೆದುಕೊಂಡ ರೈತನೊಬ್ಬ ಸಚಿವ ಈಶ್ವರ್ ಖಂಡ್ರೆ ಅವರ ಕಾಲಿಗೆ ಬಿದಿದ್ದಾರೆ. ರೈತ ಕಾಲಿಗೆ ಬೀಳುತ್ತಿದ್ದಂತೆ ನೀವು ಹಿರಿಯರು ನಮ್ಮ ಕಾಲಿಗೆ ಬೀಳಬಾರದು ಎಂದು ರೈತನನ್ನು ಸಚಿವ ಈಶ್ವರ್ ಖಂಡ್ರೆ ಅವರು ಸಮಾಧಾನ ಮಾಡಿದರು. https://ainlivenews.com/kidnapping-case-of-real-estate-businessman-in-belgaum-has-a-happy-ending/ ನನ್ನ ಒಬ್ಬ ಮಗ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಾನೆ ಇನ್ನೊಬ್ಬ ಕೂಲಿ ಕೆಲಸಕ್ಕೆ ಹೋಗ್ತಾನೆ. ನಾನು 26 ಎಕರೆ ಭೂಮಿಯನ್ನು ಕಳೆದುಕೊಂಡಿದ್ದೇನೆ. ಖಂಡ್ರೆ ಸಾಹೇಬರು ನಮಗೆ  ಪರಿಹಾರ ಕೊಡುವುದಾಗಿ ಹೇಳಿ ನಮ್ಮ ಹೋರಾಟವನ್ನು ಕೈಬಿಡಿಸಿದ್ದಾರೆ. ನಾನು ಕಾಲಿಗೆ ಬಿದ್ದ ಮೇಲಾದರೂ…

Read More

ಬೆಳಗಾವಿ : ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನಾಪ್ ಪ್ರಕರಣ ಸುಖಾಂತ್ಯಗೊಂಡಿದೆ. ಇಂದು ಈ ಬಗ್ಗೆ ಬೆಳಗಾವಿ ಎಸ್‌ಪಿ ಡಾ.ಭೀಮಾಶಂಕರ್‌ ಗುಳೇದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದು, ಘಟಪ್ರಭಾ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಿಡ್ನಾಪ್ ಪ್ರಕರಣ ಸುಖಾಂತ್ಯವಾಗಿದೆ. ಪ್ರಕರಣ ದಾಖಲಾಗಿ 24 ಗಂಟೆಯ ಒಳಗೆ ಅಪಹರಣಕ್ಕೊಳಗಾದ ವ್ಯಕ್ತಿಯನ್ನ ರಕ್ಷಣೆ ಮಾಡಲಾಗಿದೆ. ಅಪಹರಣ ಮಾಡಿದ್ದ ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದೇವೆ. ನಿಪ್ಪಾಣಿ ಹೊರಲವಲಯದಲ್ಲಿ ಅಪಹರಣಕ್ಕೊಳಗಾದ ಬಸವರಾಜ ಅಂಬಿಯನ್ನ ಇಡಲಾಗಿತ್ತು. ಘಟಪ್ರಭಾ ಪೊಲೀಸರು ನಿಪ್ಪಾಣಿ ಪೊಲೀಸರು ಒಗ್ಗೂಡಿ ತಂಡ ಮಾಡಿ ದಾಳಿ ನಡೆಸಿ ವ್ಯಕ್ತಿಯನ್ನ ರಕ್ಷಣೆ ‌ಮಾಡಿದ್ದಾರೆ.‌ https://ainlivenews.com/real-estate-businessman-kidnapped-in-belgaum/ ಈಗಾಗಲೇ ಈಶ್ವರ ರಾಮಗಾನಟ್ಟಿ, ಸಚಿನ್ ಕಾಂಬಳೆ, ರಮೇಶ್ ಕಾಂಬಳೆ, ರಾಘವೇಂದ್ರ ಮಾರಾಪುರ ಬಂಧಿಸಿದ್ದೆವೆ. ಪ್ರಕರಣದಲ್ಲಿ ಇನ್ನೂ ಕೆಲವು ಜನ ಭಾಗಿಯಾಗಿದ್ದಾರೆ ಎನ್ನುವ ಸಂದೇಹವಿದೆ. ಅವರನ್ನೂ ಸಹ ವಶಕ್ಕೆ ಪಡೆದು ಅವರ ಮೇಲೆ ಕಾನೂನು ಕ್ರಮ ಜರುಗಿಸುತ್ತೆವೆ. ಅಪಹರಣಕ್ಕೊಳಗಾದ ಬಸವರಾಜ ಬೇರೆ ಅಕ್ರಮ ಕೆಲಸದಲ್ಲಿ ಭಾಗಿಯಾಗಿದ್ದ. ಆತ ಅಕ್ರಮದಲ್ಲಿ ಭಾಗಿಯಾಗಿದ್ದು ಉಳಿದ ಆರೋಪಿಗಳಿಗೆ ಗೊತ್ತಿತ್ತು. ಅವನನ್ನು…

Read More

ಕೋಲಾರ‌ – ಇತ್ತೀಚೆಗಷ್ಟೇ ಮುಕ್ತಾಯವಾದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ-25ರ ಒಟ್ಟಾರೆ 10.27 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯ ಭಾಗವಾಗಿದ್ದ ₹315 ಕೋಟಿ ರೂಪಾಯಿಗಳ ಜರ್ಮನಿ ಮೂಲದ ಕ್ರೋನ್ಸ್ ಕಂಪನಿಯ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕ ನಿರ್ಮಾಣದ ಅನುಷ್ಠಾನ  ಆರಂಭಗೊಂಡಿತು. ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಕಂಪನಿ ನಿರ್ಮಿಸಲಿರುವ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಭೂಮಿಪೂಜೆ ನೆರವೇರಿಸುವುದರೊಂದಿಗೆ ಈ ಕಾರ್ಯಯೋಜನೆ ಚಾಲನೆ ನೀಡಲಾಯಿತು. https://www.youtube.com/watch?v=p33MFLBmtXY ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪಾಟೀಲ ಅವರು, “ಕೈಗಾರಿಕಾ ಅಗತ್ಯಗಳಿಗೆ ಬೇಕಾಗುವ ಬಾಟ್ಲಿಂಗ್ ಮತ್ತು ಶುದ್ಧೀಕರಣ ಸಾಧನಗಳ ತಯಾರಿಕೆಗೆ ದೇಶದಲ್ಲಿ ಅಪಾರ ಬೇಡಿಕೆ ಇದೆ. ಇದನ್ನು ಮನಗಂಡು ಕ್ರೋನ್ಸ್, ರಾಜ್ಯದಲ್ಲಿ ಈ ಸ್ಥಾವರ ಆರಂಭಿಸಲು ಮುಂದಾಗಿದೆ. ಇದರಿಂದ ಬಂಡವಾಳ ಹೂಡಿಕೆಯ ಜತೆಗೆ ಸ್ಥಳೀಯರಿಗೆ ಉದ್ಯೋಗ ಸೃಷ್ಟಿಯೂ ಆಗಲಿದೆ. ವೇಮಗಲ್ ಕೈಗಾರಿಕಾ ಪ್ರದೇಶವು ಬೆಂಗಳೂರಿಗೆ ಕೂಡ ಹತ್ತಿರದಲ್ಲಿ ಇರುವುದರಿಂದ ಮತ್ತಷ್ಟು ಅನುಕೂಲವಾಗಲಿದೆ” ಎಂದರು.

Read More

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಮಠ, ಎದ್ದೇಳು ಮಂಜುನಾಥನಂತಹ ಸಿನಿಮಾಗಳನ್ನು ಕೊಟ್ಟಿದ್ದ ನಿರ್ದೇಶಕ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಕನ್ನಡ ಚಿತ್ರರಂಗದ​ಲ್ಲಿ ಬರಹಗಾರ, ನಿರ್ಮಾಪಕ, ನಟ, ನಿರ್ದೇಶಕರಾಗಿದ್ದ ಗುರುಪ್ರಸಾದ್ (52) ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇದೀಗ ಗುರುಪ್ರಸಾದ್ ಅವರು ಸಾವಿಗೆ ಮುಂಚೆ ಅವರ ಪತ್ನಿಯೊಡನೆ ಆಡಿದ್ದ ಮಾತಿನ ಆಡಿಯೋ ವೈರಲ್ ಆಗಿದೆ. ಪತ್ನಿಯೊಡನೆ ಫೋನ್​ನಲ್ಲಿ ಜಗಳವಾಡಿದ್ದ ಗುರುಪ್ರಸಾದ್, ನಿನಗೆ, ಮಗಳಿಗೆ ಏನಾದರೂ ಸ್ವಲ್ಪ ಹಣ ಮಾಡಿ ಸತ್ತು ಹೋಗಿಬಿಡುತ್ತೇನೆ ಎಂದಿದ್ದರು. https://ainlivenews.com/drip-irrigation-facility-under-agricultural-irrigation-scheme-at-90-subsidy/ ಆ ಫೋನ್​ ಕಾಲ್​ನಲ್ಲಿ ಪದೇ ಪದೇ ಗುರುಪ್ರಸಾದ್ ಸಾಯುವ ಮಾತನ್ನಾಡಿದ್ದರು. ಈ ಆಡಿಯೋವನ್ನು ಸ್ವತಃ ಗುರುಪ್ರಸಾದ್‌ ಅವರೇ ರೆಕಾರ್ಡ್‌ ಮಾಡಿ ಆಪ್ತರಿಗೆ ಕಳುಹಿಸಿದ್ದರಂತೆ. ಅವರ ಸಾವಿನ ನಂತರ ಈ ಆಡಿಯೋ ಕ್ಲಿಪ್ ವೈರಲ್ ಆಗಿದೆ.

Read More

ಬೆಂಗಳೂರು: ಅತ್ತೆಯನ್ನು ಸಾಯಿಸಲು ಮಾತ್ರೆ ಹೇಳಿ ಎಂದು ಸೊಸೆ ವೈದ್ಯರಿಗೆ ವಾಟ್ಸಾಪ್​​ ಸಂದೇಶ ಕಳುಹಿಸಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿತ್ತು. ಇನ್ನೂ ಈ ಕೇಸ್‌ ಟ್ವಿಸ್‌ ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಆರೋಪಿತ ಮಹಿಳೆಯನ್ನ ವಿಚಾರಣೆ ಮಾಡಿದಾಗ ಮತ್ತೊಂದು ಮಾಹಿತಿ ಬೆಳಕಿಗೆ ಬಂದಿದೆ. ನಾನು ನನ್ನ ಅತ್ತೆಯನ್ನು ಸಾಯಿಸಲು ಅಲ್ಲ, ನಾನೇ ಸಾಯಬೇಕೆಂದು ಮಾತ್ರೆ ಕೇಳಿದ್ದೆ” ಎಂದು ಯುವತಿ ಹೇಳಿಕೆ ನೀಡಿದ್ದಾಳೆ. ವಿಚಾರಣೆ ವೇಳೆ ಆಕೆ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿರುವುದು ಕೂಡ ಬೆಳಕಿಗೆ ಬಂದಿದೆ. https://ainlivenews.com/drip-irrigation-facility-under-agricultural-irrigation-scheme-at-90-subsidy/ ಈ ಹಿಂದೆ ಈ ಯುವತಿ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಳಂತೆ. ಒಮ್ಮೆ ಮನೆಯನ್ನೇ ಬಿಟ್ಟು ಹೋಗಿದ್ದಳಂತೆ.ಈಗಲೂ ಆಕೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾಳೆ ಎಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಗೂಗಲ್‌ನಲ್ಲಿ ವೈದ್ಯರ ನಂಬರ್ ಹುಡುಕಿದ್ದ ಮಹಿಳೆಗೆ ಡಾ.ಸುನಿಲ್ ಎಂಬುವವರ ನಂಬರ್ ಸಿಕ್ಕಿದೆ. ತಕ್ಷಣ ಆವರಿಗೆ ಮೆಸೇಜ್ ಮಾಡಿದ್ದಾಳೆ. ಈ ವಿಷಯ ತಿಳಿದ ವೈದ್ಯರು ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರು ಚೌಟ್ರಿಪಾಳ್ಯದಲ್ಲಿ ವಾಸವಾಗಿರುವ ಈ ಮಹಿಳೆಗೆ…

Read More