ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲು ಸೇರಿದ್ದಾರೆ. ದರ್ಶನ್ ಬಿಡುಗಡೆಗೆ ಒಂದು ಕಡೆ ಪತ್ನಿ ವಿಜಯಲಕ್ಷ್ಮಿ ಶತಪ್ರಯತ್ನ ನಡೆಸುತ್ತಿದ್ದರೆ ಇತ್ತ ಸಹೋದರು ದಿನಾಕರ್ ತೂಗುದೀಪ್ ಕೂಡ ಪ್ರಯತ್ನ ಮುಂದುವರೆಸಿದ್ದಾರೆ. ಇದೀಗ ದಿನಕರ್ ತೂಗುದೀಪ್ ದಂಪತಿ ಜೊತೆ ನಟ ಚಿಕ್ಕಣ್ಣ ಕೂಡ ಚಾಮುಂಡಿ ತಾಯಿಯ ದರ್ಶನ ಪಡೆದು ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿದ್ದಾರೆ. ಮೈಸೂರಿನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ದರ್ಶನ್ ಸಹೋದರ ದಿನಕರ್ ತೂಗುದೀಪ್ ಕುಟುಂಬದ ಜೊತೆ ಚಿಕ್ಕಣ್ಣ ಕೂಡ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಣ್ಣನನ್ನು ಸಂಕಷ್ಟದಿಂದ ಪಾರು ಮಾಡುವಂತೆ ಪ್ರಾರ್ಥನೆ ಮಾಡಿದ್ದಾರೆ. ಇನ್ನೂ ಇಂದು (ಜು.26) ಬೆಳಗ್ಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ವಿಜಯಲಕ್ಷ್ಮಿ ಚಂಡಿಕಾ ಯಾಗ ಮಾಡಿಸಿದ್ದಾರೆ. ದರ್ಶನ್ರನ್ನು ಸಂಕಷ್ಟದಿಂದ ಪಾರಾಗಲಿ ಎಂದು ದೇವಿಗೆ ವಿಜಯಲಕ್ಷ್ಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Author: Author AIN
ಪಾಕಿಸ್ತಾನದ ಕರಾಚಿಯ ರಕ್ಷಣಾ ಪ್ರದೇಶದಲ್ಲಿ ಎರಡು ಗುಂಪುಗಳು ಪರಸ್ಪರ ಗುಂಡು ದಾಳಿ ನಡೆಸಿದ್ದು ಪರಿಣಾಮ ಐವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಕರಾಚಿಯ ಡಿಫೆನ್ಸ್ ನಿಶಾತ್ ಕಮರ್ಷಿಯಲ್ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಟ್ಟು ಐದು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಇತರ ಇಬ್ಬರು ಗಾಯಗೊಂಡಿದ್ದಾರೆ ಎಂದು ಡಿಐಜಿ ದಕ್ಷಿಣ ಅಸಾದ್ ರಾಜಾ ಖಚಿತಪಡಿಸಿದ್ದಾರೆ. ಮೃತರನ್ನು ಫಹಾದ್ ಬುಗ್ತಿ, ನಸೀಬುಲ್ಲಾ, ಮೀರ್ ಮೆಹ್ಸುಮ್ ಬುಗ್ತಿ, ಮೀರ್ ಎಸ್ಸಾ ಬುಗ್ತಿ ಮತ್ತು ಅಲಿ ಎಂದು ಗುರುತಿಸಲಾಗಿದೆ. ಏತನ್ಮಧ್ಯೆ, ಗಾಯಗೊಂಡ ಇಬ್ಬರನ್ನು ಮೀರ್ ಅಲಿ ಹೈದರ್ ಬುಗ್ತಿ ಮತ್ತು ಖೈಮ್ ಅಲಿ ಎಂದು ಗುರುತಿಸಲಾಗಿದೆ ಎಂದು ಎಆರ್ವೈ ನ್ಯೂಸ್ ವರದಿ ಮಾಡಿದೆ. ಇದಲ್ಲದೆ, ಹಿಂಸಾತ್ಮಕ ವಾಗ್ವಾದದ ಸಮಯದಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಘಟನೆಯ ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ, ಆದರೆ ಘಟನೆಯಲ್ಲಿ ಭಾಗಿಯಾಗಿರುವ ಎರಡೂ ಗುಂಪುಗಳಿಗೆ ಸೇರಿದ ವಾಹನಗಳು ಸಹ ಘಟನಾ ಸ್ಥಳದಲ್ಲಿ ಕಂಡುಬಂದಿವೆ. “ಈ ಘಟನೆಯ…
ಬಾಲಕಿಯರಿಗೆ ಅಕ್ರಮ ಲೈಂಗಿಕ ಚಟುವಟಿಕೆಗಳಲ್ಲಿ ಭಾಗಿಯಾಗಲು ಪ್ರೇರಿಪಿಸುತ್ತಿದ್ದ ಆರೋಪ ಸಾಬೀತಾಗಿದ್ದರಿಂದ ಭಾರತ ಮೂಲದ ವಿದ್ಯಾರ್ಥಿಯೊಬ್ಬನಿಗೆ ಅಮೆರಿಕದ ಫೆಡರಲ್ ನ್ಯಾಯಾಲಯ 12 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಪರಾಧಿಯನ್ನು ಅಮೆರಿಕದಲ್ಲಿ ವಿದ್ಯಾರ್ಥಿ ವೀಸಾದ ಮೇಲೆ ನೆಲೆಸಿದ್ದ ಉಪೇಂದ್ರ ಆಡೂರು (32) ಎಂದು ಗುರುತಿಸಲಾಗಿದೆ. ಸಾಮಾಜಿಕ ಮಾಧ್ಯಮಗಳ ಮುಖಾಂತರ ನಿಷೇಧಿತ ಚಟುವಟಿಕೆಗಳನ್ನು ನಡೆಸುತ್ತಿದ್ದ ಶಂಕೆಯ ಮೇಲೆ ಪತ್ತೆದಾರಿ ಪೊಲೀಸರು 2022ರ ಸೆಪ್ಟೆಂಬರ್ನಿಂದ ಅಕ್ಟೋಬರ್ವರೆಗೆ ಉಪೇಂದ್ರ ಮೇಲೆ ನಿಗಾ ಇಟ್ಟಿದ್ದರು. ಈ ವೇಳೆ ನಕಲಿ ಖಾತೆ ತೆರೆದಿದ್ದ ಪೊಲೀಸರು ಅದರ ಮೂಲಕ ಉಪೇಂದ್ರನನ್ನು ಬಲೆಗೆ ಬೀಳಿಸಿ ಬಂಧಿಸಿದ್ದಾರೆ. ಉಪೇಂದ್ರ ಬಾಲಕಿಯರನ್ನು ಗುರಿಯಾಗಿಸಿ ಅವರನ್ನು ಅಕ್ರಮ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗುವಂತೆ ಪ್ರೇರಿಪಿಸುವುದು ಹಾಗೂ ಪದೇ ಪದೇ ಅಶ್ಲೀಲ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ. ಈ ಕುರಿತು ಪ್ರಕರಣ ದಾಖಲಿಸಿ, ಆತನ ಮೊಬೈಲ್ ವಶಪಡಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದರು ಎಂದು ಫೆಡರಲ್ ನ್ಯಾಯಾಲಯದ ಅಟಾರ್ನಿಯವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೆಲುಗು ನಟ ಸಂದೀಪ್ ಕಿಶನ್ ಅವರು ‘ವಿವಾಹ ಭೋಜನಂಬು’ ಹೆಸರಿನ ರೆಸ್ಟೋರೆಂಟ್ ಒಂದನ್ನು ನಡೆಸುತ್ತಿದ್ದಾರೆ. ಸಿಕಂದರಾಬಾದ್ನಲ್ಲಿ ಈ ರೆಸ್ಟೋರೆಂಟ್ ಇದ್ದು ಈ ರೆಸ್ಟೋರೆಂಟ್ ಮೇಲೆ ಇತ್ತೀಚೆಗೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಆಹಾರ ಸುರಕ್ಷತೆ ಮತ್ತು ಶೇಖರಣೆ ವಿಚಾರದಲ್ಲಿ ಸಾಕಷ್ಟು ನಿಯಮಗಳನ್ನು ಅವರು ಗಾಳಿಗೆ ತೂರಿದ್ದಾರೆ ಎಂದು ವರದಿ ಆಗಿತ್ತು. ಈ ಬಗ್ಗೆ ಸಂದೀಪ್ ಪ್ರತಿಕ್ರಿಯಿಸಿದ್ದಾರೆ. ಸಂದೀಪ್ ನಡೆಸುತ್ತಿರುವ ರೆಸ್ಟೋರೆಂಟ್ ಏಳು ಔಟ್ಲೆಟ್ಗಳನ್ನು ಹೊಂದಿದೆ. ತಮಗೆ ಮೋಸ ಮಾಡೋ ಅಗತ್ಯವಿಲ್ಲ ಎಂದಿದ್ದಾರೆ ಅವರು. ‘ವಿವಾಹ ಭೋಜನಂಬು ರೆಸ್ಟೋರೆಂಟ್ನ ಏಳೂ ಶಾಖೆಗಳಿಂದ ನಾವು ನಿತ್ಯ 50 ಫುಡ್ ಪ್ಯಾಕೆಟ್ಗಳನ್ನು ದಾನ ಮಾಡುತ್ತೇವೆ. ಅಂದರೆ ದಿನಕ್ಕೆ 350 ಫುಡ್ ಪ್ಯಾಕೆಟ್ಗಳನ್ನು ಉಚಿತವಾಗಿ ನೀಡುತ್ತಿದ್ದೇವೆ. ಒಂದು ಪ್ಯಾಕೆಟ್ನ ಬೆಲೆ 50 ರೂಪಾಯಿ. ಅಂದರೆ ಪ್ರತಿ ತಿಂಗಳು ನಾಲ್ಕು ಲಕ್ಷ ರೂಪಾಯಿಗೂ ಹೆಚ್ಚು ಆಹಾರವನ್ನು ಉಚಿತವಾಗಿ ನೀಡುತ್ತಿದ್ದೇವೆ. ಹೀಗಿರುವಾಗ ಕೆಲವೇ ಸಾವಿರ ರೂಪಾಯಿ ಬೆಲೆ ಬಾಳುವ…
ಯಕೃತ್ ಕ್ಯಾನ್ಸರ್ಗೆ ಒಳಗಾಗಿದ್ದ 52 ವರ್ಷದ ತಾಯಿಗೆ ಸ್ವತಃ ಮಗನೇ ಯಕೃತ್ ಭಾಗವನ್ನು ದಾನ ಮಾಡುವ ಮೂಲಕ ಮಹಿಳೆಗೆ ಮರು ಜನ್ಮ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಗನ ಯಕೃತ್ ಭಾಗವನ್ನು ತಾಯಿಗೆ ಶಸ್ತ್ರ ಚಿಕಿತ್ಸೆ ಮೂಲಕ ಯಶಸ್ವಿಯಾಗಿ ಜೋಡಣೆ ಮಾಡಿದ್ದಾರೆ. ಬನ್ನೇರುಘಟ್ಟ ಫೋರ್ಟಿಸ್ ಆಸ್ಪತ್ರೆಯ ಯಕೃತ್ತಿನ ಕಸಿ ಶಸ್ತ್ರಚಿಕಿತ್ಸಕರಾದ ಡಾ.ಕಿಶೋರ್ ಜಿ.ಎಸ್.ಬಿ. ಮತ್ತು ಡಾ.ಪಿಯೂಷ್ ಸಿನ್ಹಾ ಹಾಗೂ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ.ಬಿ.ಎಸ್ ರವೀಂದ್ರ ಅವರ ತಂಡ ಯಶಸ್ವಿಯಾಗಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಫೋರ್ಟಿಸ್ ಆಸ್ಪತ್ರೆಯ ಲಿವರ್ ಟ್ರಾನ್ಸ್ಪ್ಲಾಂಟ್ ಸರ್ಜನ್ ಡಾ. ಕಿಶೋರ್ ಜಿಎಸ್ಬಿ, ಮತ್ತು ಡಾ. ಪಿಯೂಷ್ ಸಿನ್ಹಾ, 2021 ರಲ್ಲಿ 52 ವರ್ಷದ ಲೀಲಾ ಎಂಬುವವರು ಕಾಮಾಲೆ ಕಾಯಿಲೆಗೆ ತುತ್ತಾದರು. ಇದರ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ ಲಿವರ್ ಸಿರೋಸಿಸ್ ಇರುವುದು ಪತ್ತೆಯಾಯಿತು. ಬಳಿಕ ಅವರು ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು. ದೀರ್ಘಕಾಲದಿಂದ ಯಕೃತ್ನ ಕಾಯಿಲೆ ಇರುವ ಕಾರಣ ಅವರ ಯಕೃತ್ನಲ್ಲಿ ದ್ರವದ…
ಕೆಜಿಎಫ್ ಸಿನಿಮಾದ ಬಳಿಕ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಆರಂಭಕ್ಕೂ ಮೊದಲೇ ಚಿತ್ರದ ಮೇಲೆ ಭರವಸೆ ಹುಟ್ಟು ಹಾಕಿದೆ. ಸಿನಿಮಾದ ಚಿತ್ರೀಕರಣ ಗುಟ್ಟಾಗಿಯೇ ನಡೆಯುತ್ತಿದೆ. ಇದೀಗ ಏಕಾ ಏಕಿ ‘ಟಾಕ್ಸಿಕ್’ ಸಿನಿಮಾ ತಂಡದ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ‘ಟಾಕ್ಸಿಕ್’ ಸಿನಿಮಾಕ್ಕಾಗಿ ನಿರ್ಮಿಸಲಾಗಿರುವ ಬೃಹತ್ ಸೆಟ್ನಿಂದ ಸಮಸ್ಯೆ ಎದುರಾಗಿದೆ ಎಂದು ಕೋರ್ಟ್ ಮೆಟ್ಟಿಲೇರಲಾಗಿದೆ. ಬೆಂಗಳೂರಿನ ಪೀಣ್ಯದ ಪ್ಲಾಂಟೇಶನ್ ಜಮೀನಿನ ಬಳಿ ಸುಮಾರು 20 ಎಕರೆ ಜಾಗದಲ್ಲಿ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಬೃಹತ್ ಸೆಟ್ ಹಾಕಲಾಗಿದೆ. ಆದರೆ ಈ ಸೆಟ್ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಹಾಕಲಾಗಿದೆ ಎಂದು ಆರೋಪಿಸಿ ವಕೀಲ ಜಿ.ಬಾಲಾಜಿ ನಾಯ್ಡುರಿಂದ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದಾರೆ. ಅಕ್ರಮವಾಗಿ ನಿರ್ಮಿಸಲಾಗಿರುವ ಈ ಸೆಟ್ ಅನ್ನು ಕೂಡಲೇ ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅರ್ಜಿ ವಿಚಾರಣೆಗೆ ಅರ್ಹವೆಂದು ಪರಿಗಣಿಸಿರುವ ಹೈಕೋರ್ಟ್ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಎಚ್ಎಂಟಿ ಸಂಸ್ಥೆಗೆ ನೊಟೀಸ್ ನೀಡಿದೆ. ಈಗ ಸೆಟ್ ನಿರ್ಮಾಣ…
ಬಾಲಿವುಡ್ನ ಖ್ಯಾತ ನಟ ಅಕ್ಷಯ್ ಕುಮಾರ್ ಬ್ಯಾಕ್ ಟು ಬ್ಯಾಕ್ ಸೋಲು ಕಾಣುತ್ತಿದ್ದಾರೆ. ಅವರ ನಟನೆಯ ಎರಡು ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಹೇಳ ಹೆಸರಿಲ್ಲದಂತಾಗಿವೆ. ಏನೇ ಪ್ರಯತ್ನ ಮಾಡಿದರೂ, ಎಷ್ಟೇ ಸಿನಿಮಾ ಮಾಡಿದರೂ ಅವರಿಗೆ ಸಕ್ಸಸ್ ಸಿಗುತ್ತಿಲ್ಲ. ಇದರಿಂದ ನಿರ್ಮಾಪಕರು ಅಸಮಾಧಾನ ಗೊಂಡಿದ್ದಾರೆ. ಅಲ್ಲದೆ ಗಡಿಬಿಡಿಯಲ್ಲಿ ಸಿನಿಮಾ ಕೆಲಸಗಳನ್ನು ಮುಗಿಸುವುದೇ ಈ ಪರಿಸ್ಥಿತಿಗೆ ಕಾರಣ ಎಂದು ಅನೇಕರು ಟೀಕಿಸಿದ್ದಾರೆ. ಈ ಬಗ್ಗೆ ಅಕ್ಷಯ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದು, ನನಗೂ ನಿರ್ಮಾಪಕರಿಂದ ಮೋಸ ಆಗಿದೆ ಎಂದಿದ್ದಾರೆ. ಅಕ್ಷಯ್ ಕುಮಾರ್ ನಟನೆಯ ‘ಬಡೆ ಮಿಯಾ ಚೋಟೆ ಮಿಯಾ’ ಹಾಗೂ ‘ಸರ್ಫಿರಾ’ ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ ನೆಲ ಕಚ್ಚಿತ್ತು. ಆ ಸಿನಿಮಾವನ್ನು ನಿರ್ಮಾಣ ಮಾಡಿದ್ದ ಜಾಕಿ ಭಗ್ನಾನಿ ಮತ್ತು ವಶು ಭಗ್ನಾನಿ ಅವರು ಆಸ್ತಿ ಮಾರಿಕೊಳ್ಳುವ ಪರಿಸ್ಥಿತಿಗೆ ಬಂದರು. ಇದಕ್ಕೆಲ್ಲ ಅಕ್ಷಯ್ ಕುಮಾರ್ ಕಾರಣ ಎಂದು ಅನೇಕರು ಆರೋಪಿಸಿದ್ದರು. ಆದರೆ ಆ ವೇಳೆ ಅಕ್ಷಯ್ ಕುಮಾರ್ ತಮ್ಮ ಸಂಭಾವನೆ ಪಡೆಯದೆ ನಿರ್ಮಾಪಕರಿಗೆ ನೆರವಾಗಿದ್ದರು. ಆದರೆ ಸಾಕಷ್ಟು…
ಮನೆಗೆ ಆಧಾರವಾಗಿದ್ದ ರೇಣುಕಾ ಸ್ವಾಮಿಯನ್ನು ಕಳೆದುಕೊಂಡ ಕುಟುಂಬ ಕಂಗಾಲಾಗಿದೆ. ಗರ್ಭಿಣಿ ಪತ್ನಿ, ವಯಸ್ಸಾದ ತಂದೆ ತಾಯಿಯರು ನಿತ್ಯ ಮಗನನ್ನು ನೆನೆದು ಕೊರಗುತ್ತಿದ್ದಾರೆ. ಇದೀಗ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡ ಮಾತನಾಡಿದ್ದು, ಈ ಪ್ರಕರಣದಲ್ಲಿ ಯಾವುದೇ ಕಾರಣಕ್ಕೂ ತಾವು ಸಂಧಾನ ಮಾಡಿಕೊಳ್ಳುವುದಿಲ್ಲ’ ಎಂದಿದ್ದಾರೆ. ರೇಣುಕಾ ಸ್ವಾಮಿ ಕಾಮುಕ ಎಂಬಿತ್ಯಾದಿ ಮಾತುಗಳು ಈ ಮೊದಲು ಕೇಳಿ ಬಂದಿದ್ದವು. ಈ ವೇಳೆ ಕಾಶಿನಾಥಯ್ಯ ಶಿವನಗೌಡ ಅವರು ಮಗನ ಪರ ವಹಿಸಿಕೊಂಡು ಮಾತನಾಡಿದ್ದರು. ಇದಾದ ಬಳಿಕ ಕಾಶಿನಾಥಯ್ಯ ಅವರು ಸಾಮಾನ್ಯವಾಗಿ ಮಾತನಾಡುತ್ತಿರುವ ವಿಡಿಯೋ ಒಂದು ವೈರಲ್ ಆಗಿತ್ತು. ‘ರೇಣುಕಾ ಸ್ವಾಮಿ ದರ್ಶನ್ ಭೇಟಿಗೆ ಬರಲಿ ಎಂದು ನಿರೀಕ್ಷಿಸುತ್ತಿದ್ದಾರೆ’ ಎಂದು ಕೆಲವರು ಬಿಂಬಿಸಿದ್ದರು. ಈ ಬಗ್ಗೆ ಕಾಶಿನಾಥಯ್ಯ ಅವರು ಮಾತನಾಡಿದ್ದಾರೆ. ‘ನಮ್ಮ ಭೇಟಿಗೆ ದರ್ಶನ್ ಬರಲಿ ಎಂಬ ಅರ್ಥದಲ್ಲಿ ನಾನು ಏನನ್ನೂ ಹೇಳಿಲ್ಲ. ಹೆತ್ತ ಮಗನನ್ನು ಕಳೆದುಕೊಂಡು ತುಂಬಾ ಸಂಕಟ ಆಗಿದೆ. ವಿಶಾಲ ಭಾವನೆಯಿಂದ ಯಾರು ಬಂದರೂ ಬರಲಿ ಎನ್ನುತ್ತೇವೆ. ವೈಯಕ್ತಿಕವಾಗಿ ನಟ ದರ್ಶನ್ ಬರಲಿ ಎಂದು ಹೇಳುವುದಿಲ್ಲ’…
ಕಮಲಾ ಹ್ಯಾರಿಸ್ ಅಮೆರಿಕಾದ ಆಡಳಿತ ನಡೆಸಲು ಅನರ್ಹರಾಗಿದ್ದಾರೆ. ಅವರು ತೀವ್ರಗಾಮಿ ಎಡಪಂಥೀಯ ಮನೋಸ್ಥಿತಿಯವರು ಎಂದು ಅಮೆರಿಕದ ಮಾಜಿ ಅಧ್ಯಕ್ಷ ಹಾಲಿ ರಿಪಬ್ಲಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಟ್ರಂಪ್, ಮೂರುವರೆ ವರ್ಷಗಳಿಂದ ಕಮಲಾ ಹ್ಯಾರಿಸ್ ಅವರು ಜೋ ಬೈಡೆನ್ ಮಾಡಿದ ದುರಂತದ ಚಾಲನಾ ಶಕ್ತಿಯಾಗಿದ್ದಾರೆ. ಅವರೆನಾದರೂ ಅಧಿಕಾರಕ್ಕೆ ಬಂದರೆ ನಮ್ಮ ದೇಶವನ್ನು ನಾಶಮಾಡುತ್ತಾರೆ. ಅಮೆರಿಕವನ್ನು ನಾಶ ಮಾಡಲು ನಾವು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹ್ಯಾರಿಸ್ಗೆ ಹಾಕುವ ಒಂದು ಮತ ಇನ್ನೂ ನಾಲ್ಕು ವರ್ಷಗಳ ಅಪ್ರಾಮಾಣಿಕತೆ, ಅಸಮರ್ಥತೆ, ದೌರ್ಬಲ್ಯ ಮತ್ತು ವೈಫಲ್ಯಕ್ಕೆ ಹಾಕುವ ಮತವಾಗುತ್ತದೆ ಎಂದು ಟ್ರಂಪ್ ಹೇಳಿದರು. ಕಮಲಾ ಹ್ಯಾರಿಸ್ ಮುಟ್ಟಿದ್ದೆಲ್ಲವೂ ದುರಂತವಾಗುತ್ತದೆ ಎಂದು ಆರೋಪಿಸಿದ ಅವರು, ಉಕ್ರೇನ್ ದಾಳಿ ಮಾಡದಂತೆ ರಷ್ಯಾವನ್ನು ತಡೆಯಲು ಕಮಲಾ ಹ್ಯಾರಿಸ್ ಅವರನ್ನು ಯುರೋಪ್ಗೆ ಕಳುಹಿಸಿದಾಗ ಏನಾಯ್ತು? ಅವರು ತೆರಳಿದ ಐದು ದಿನಗಳ ನಂತರ ರಷ್ಯಾ ದಾಳಿ ಮಾಡುವ ಮೂಲಕ ಉತ್ತರಿಸಿತು. ಪುಟಿನ್ ಏನಿಲ್ಲವೆಂಬಂತೆ…
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿ ತಿಂಗಳು ಕಳೆದಿದೆ. ಈ ಮಧ್ಯೆ ಪೊಲೀಸರು ಸಾಕಷ್ಟು ಮಾಹಿತಿ ಕಲೆ ಹಾಕಿದ್ದಾರೆ. ಆದರೆ ಹೇಗಾದರು ಮಾಡಿ ದರ್ಶನ್ ರನ್ನು ಹೊರ ತರಬೇಕು ಎಂದು ವಿಜಯಲಕ್ಷ್ಮಿ ಟೊಂಕಾ ಕಟ್ಟಿ ನಿಂತಿದ್ದಾರೆ. ಅದೇ ಕಾರಣಕ್ಕೆ ಸಾಕಷ್ಟು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ , ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಅಂತೆಯೇ ಇದೀಗ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದುಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಆಪ್ತರ ಜೊತೆ ಭೇಟಿ ನೀಡಿದ ವಿಜಯಲಕ್ಷ್ಮೀ ದೇವಿಯ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ ಅವರು ನವ ಚಂಡಿಕಾ ಹೋಮ ಮಾಡಿಸಲಿದ್ದಾರೆ ಎಂಬ ಮಾಹಿತಿ ಇದೆ. ದರ್ಶನ್ ಅವರು ಈ ಕಷ್ಟದ ಪರಿಸ್ಥಿತಿಯಿಂದ ಹೊರಬರಲಿ ಎಂದು ವಿಜಯಲಕ್ಷ್ಮಿ ಅವರು ದೇವರಲ್ಲಿ ಪ್ರಾರ್ಥನೆ ಮಾಡಲಿದ್ದಾರೆ. ಸ್ಟಾರ್ ಆಗಿ ಮೆರೆದ ದರ್ಶನ್ ಅವರು ಜೈಲಿನಲ್ಲಿ ಕಾಲ ಕಳೆಯುವುದು ಸಾಕಷ್ಟು ಕಷ್ಟವಾಗಿದೆ. ಜೈಲಿನ ಉಳಿದ ಕೈದಿಗಳ ಜೊತೆ…