Author: Author AIN

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಕಳೆದ ಎರಡು ದಿನಗಳ ಹಿಂದಷ್ಟೇ ಕುಟುಂಬ ಸದಸ್ಯರ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಪ್ರಜ್ವಲ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರು ನಟಿಸಿರುವ, ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಲೋಹಿತ್ ಹೆಚ್ ನಿರ್ದೇಶನದ “ಮಾಫಿಯಾ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕ ಪ್ರಜ್ವಲ್ ದೇವರಾಜ್ ಅವರಿಗೆ “ಮಾಫಿಯಾ” ಚಿತ್ರತಂಡ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಸಾಕಷ್ಟು ಅದ್ದೂರಿಯಾಗಿ ನಿರ್ಮಾಣವಾಗಿರುವ ಮಾಫಿಯಾ ಸಿನಿಮಾಗೆ ಅನೂಪ್ ಸೀಳಿನ್ ಹಾಗೂ ಗಗನ್ ಬಡೇರಿಯಾ ಸಂಗೀತ ನೀಡಿದ್ದು ಆಗಸ್ಟ್ ನಲ್ಲಿ ತೆರೆಗೆ ಬರಲಿದೆ ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರು ಕಾಣಿಸಿಕೊಂಡಿದ್ದಾರೆ.

Read More

ಇದು ನಂಬಲು ತುಸು ಕಷ್ಟವಾದ ಸುದ್ದಿಯೇ. ಆದರೆ ನಂಬಲೇ ಬೇಕಿದೆ. ಹೌದು. ಇದೇ ಮೊದಲ ಬಾರಿಗೆ ಕೆಲಸದ ಒತ್ತಡ ತಾಳದೆ ರೊಬೋಟ್ ಒಂದು ಆತ್ಮಹತ್ಯೆಗೆ ಶರಣಾಗುವ ಮೂಲಕ ಅಚ್ಚರಿ ಮೂಡಿಸಿದೆ. ಈ ಘಟನೆ ನಡೆದಿರುವುದು ಸಮಗ್ರ ಸ್ವಯಂಚಾಲಿತ ರೊಬೋಟ್‌ಗಳನ್ನು ವಿವಿಧ ವೃತ್ತಿಗಳಲ್ಲಿ ಬಳಕೆ ಮಾಡಿಕೊಳ್ಳುವುದರಲ್ಲಿ ಮುಂಚೂಣಿಯಲ್ಲಿರುವ ದಕ್ಷಿಣ ಕೊರಿಯಾದಲ್ಲಿ. ನಾಗರಿಕ ಸೇವಾ ರೊಬೋಟ್ ಒಂದು ಇದೇ ಪ್ರಪ್ರಥಮ ಬಾರಿಗೆ ಮೆಟ್ಟಿಲುಗಳ ಮೇಲಿಂದ ತನ್ನನ್ನು ತಾನು ಕೆಳಕ್ಕೆ ದೂಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದೆ ಎಂದು The Daily Mail ಸುದ್ದಿ ಸಂಸ್ಥೆ ವರದಿ ಮಾಡಿದೆ. ಎರಡು ಮೀಟರ್ ಎತ್ತರದಿಂದ ಕೆಳಗೆ ಬಿದ್ದ ನಂತರ ರೊಬೋಟ್ ನಿಷ್ಕ್ರಿಯವಾಗಿದೆ ಎಂದು ಗುಮಿ ಸಿಟಿ ಕೌನ್ಸಿಲ್ ಕೂಡಾ ದೃಢಪಡಿಸಿದೆ. ಕಟ್ಟಡದ ಎರಡು ಮತ್ತು ಮೊದಲ ಮಹಡಿಯ ನಡುವೆ ಕೆಳಕ್ಕೆ ಬಿದ್ದಿರುವ ರೊಬೋಟ್ ತುಂಡುತುಂಡಾಗಿದೆ ಎಂದು ಹೇಳಲಾಗಿದೆ. ರೊಬೋಟ್ ಆತ್ಮಹತ್ಯೆ ಸುದ್ದಿ ತಿಳಿದ ಗುಮಿ ನಗರದ ಸ್ಥಳೀಯ ನಾಗರಿಕರು ಕಂಬನಿ ಮಿಡಿಯುತ್ತಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ವಿವರಿಸಲಾಗದ ಪತನಕ್ಕೂ ಮುನ್ನ, ಅದೃಶ್ಯ…

Read More

ಭಾರತದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಮದುವೆಗೆ ಇನ್ನೇನು ಕೆಲವು ದಿನಗಳು ಮಾತ್ರವೇ ಬಾಕಿ ಉಳಿದಿವೆ. ಪ್ರೀ ವೆಡ್ಡಿಂಗ್ ಕಾರ್ಯಕ್ರಮಗಳು ಸಾಕಷ್ಟು ಅದ್ದೂರಿಯಾಗಿ ನಡೆಸಿದ್ದ ಅಂಬಾನಿ ಕುಟುಂಬ ಇದೀಗ ಮದುವೆಗೆ ಸ್ವರ್ಗವನ್ನೇ ಧರೆಗಿಳಿಸಲು ಮುಂದಾಗಿದೆ. ಈ ಹಿಂದೆ ಪ್ರೀವೆಂಡಿಂಗ್ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದ್ದ ಸೆಲೆಬ್ರೆಟಿಗಳು ಪರ್ಫಾಮೆನ್ಸ್ ಮಾಡಿದ್ದರು. ಈಗ ಮದುವೆಗೂ ಹಾಗೇ ಸಿದ್ಧತೆಗಳು ಜೋರಾಗಿಯೇ ನಡೆಯುತ್ತಿವೆ. ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ ಸಮಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಮೂರು ದಿನಗಳು ನಡೆಯುತ್ತಿರುವ ಈ ಸಮಾರಂಭದಲ್ಲಿ ಅಂತರಾಷ್ಟ್ರೀಯ ಪಾಪ್ ತಾರೆ ಜಸ್ಟಿನ್ ಬೀಬರ್ ಹಾಡಲಿದ್ದಾರೆ. ಅದಕ್ಕಾಗಿ ಈಗಾಗಲೇ ಜಸ್ಟಿನ್ ಬೀಬರ್ ಮುಂಬೈಗೂ ಬಂದು ಇಳಿದಿದ್ದಾರೆ. ಜುಲೈ 12ರಂದು ಮದುವೆ ನಡೆಯುತ್ತಿದ್ದು, ಅದರಕ್ಕೂ ಮುನ್ನ ಸಂಗೀತ ಕಾರ್ಯಕ್ರಮ ನಡೆಯಲಿದೆ. ಅಂದ್ಹಾಗೆ ಇಂದು ಸಂಜೆ (ಜುಲೈ 5) ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಜಸ್ಟಿನ್ ಬೀಬರ್ ಹಾಡುತ್ತಿದ್ದು ಕಾರ್ಯಕ್ರಮ ವೀಕ್ಷಿಸಲು ಬಾಲಿವುಡ್ ತಾರೆಯರ ದಂಡೇ ಹಾಜರಾಗಲಿದೆ.…

Read More

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬರ್ತಡೇಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಸಾಮಾನ್ಯವಾಗಿ ನಟ, ನಟಿಯರ ಹುಟ್ಟುಹಬ್ಬದಂದರು ಹೊಸ ಹೊಸ ಸಿನಿಮಾಗಳು ಅನೌನ್ಸ್ ಆಗುತ್ತವೆ. ಆದರೆ ಶಿವಣ್ಣನ ಬರ್ತಡೇಗೆ ಇನ್ನೂ ಕೆಲ ದಿನ ಭಾಕಿ ಇರುವಾಗಲೇ ಹೊಸ ಸಿನಿಮಾವೊಂದು ಅನೌನ್ಸ್ ಆಗಿದೆ. ಚಿತ್ರಕ್ಕೆ ‘ಭೈರವನ ಕೊನೆ ಪಾಠ’ ಎಂದು ಟೈಟಲ್ ಇಡಲಾಗಿದೆ. ಜುಲೈ 12ಕ್ಕೆ ನಟ ಶಿವರಾಜ್‌ಕುಮಾರ್ 62ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಬಾರಿ ಶಿವಣ್ಣ ಹುಟ್ಟುಹಬ್ಬಕ್ಕೆ ಸಾಕಷ್ಟು ಸರ್‌ಪ್ರೈಸ್‌ಗಳು ಕಾದಿವೆ. ಅದಕ್ಕೂ ಮುಂಚೆಯೇ ಶಿವಣ್ಣ ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕವಲುದಾರಿ’, ‘ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಎ ಮತ್ತು ಬಿ’ ಸಿನಿಮಾಗಳ ಖ್ಯಾತಿಯ ನಿರ್ದೇಶಕ ಹೇಮಂತ್‌ ಎಂ ರಾವ್‌ ʻಭೈರವನ ಕೊನೆ ಪಾಠʼ ಸಿನಿಮಾಗೆ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಡಾ. ವೈಶಾಕ್ ಜೆ ಗೌಡ ಅವರು ತಮ್ಮ ನಿರ್ಮಾಣ ಸಂಸ್ಥೆಯಾದ ವಿಜೆಎಫ್ – ವೈಶಾಕ್ ಜೆ…

Read More

ಬಾಲಿವುಡ್ ನ ಖ್ಯಾತ ನಟಿ ಹೀನಾ ಖಾನ್ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾರೆ. ತಾವು ಸ್ತನ ಕ್ಯಾನ್ಸರ್ ನ ಮೂರನೇ ಹಂತದಲ್ಲಿದ್ದು ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ನಟಿ ಕೆಲವು ದಿನಗಳ ಹಿಂದಷ್ಟೇ ಹೇಳಿಕೊಮಡಿದ್ದರು. ಇದೀಗ ಹೀನಾ ತಮ್ಮ ಉದ್ದ ಕೂದಲಿಗೆ ಕತ್ತರಿ ಹಾಕಿದ್ದಾರೆ. ಹೀನಾ ಖಾನ್ ಸ್ಟೇಜ್ ಶೋದಿಂದ ನೇರವಾಗಿ ಕಿಮೋ ಥಿಯೇಟರ್ ಗೆ ಎಂಟ್ರಿ ಕೊಡೋ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ. ನಾನು ಗಟ್ಟಿಯಾಗಿದ್ದೇನೆ ಮತ್ತು ಈ ಕಾಯಿಲೆಯಿಂದ ಹೊರಬರಲು ನಿರ್ಧರಿಸಿ ಹೋರಾಟ ಆರಂಭಿಸಿದ್ದೇನೆ ಎಂದಿದ್ದಾರೆ. ರಿಯಾಲಿಟಿ ಶೋ, ಸೀರಿಯಲ್, ಮಾಡೆಲಿಂಗ್ ಹೀಗೆ ಬ್ಯುಸಿ ಶೆಡ್ಯೂಲ್ ಲೈಫ್ ನಲ್ಲಿ ಬ್ಯುಸಿಯಾಗಿದ್ದ ಹೀನಾ ಖಾನ್ ಗೆ ಕಳೆದ ಒಂದು ವಾರದ ಹಿಂದೆಯಷ್ಟೇ ವೈದ್ಯಕೀಯ ಪರೀಕ್ಷೆ ಕ್ಯಾನ್ಸರ್ ಇದೆ ಅನ್ನೋ ಕಹಿಸತ್ಯವನ್ನು ತಿಳಿಸಿದೆ. ಸಾಮಾನ್ಯವಾಗಿ ಸೆಲೆಬ್ರೆಟಿಗಳು ತಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಸಂಗತಿಗಳನ್ನು ಹೊರಜಗತ್ತಿನಿಂದ ಮುಚ್ಚಿಡುತ್ತಾರೆ. ಆದರೆ ಹೀನಾಖಾನ್ ಎಲ್ಲರಿಗಿಂತ ಭಿನ್ನವಾಗಿ ಕ್ಯಾನ್ಸರ್ ಎದುರಿಸಲು ಸಜ್ಜಾಗಿದ್ದಾರೆ. ಅಷ್ಟೇ ಅಲ್ಲ, ಈ ಸಂದರ್ಭದಲ್ಲಿ ನಾನು ನನ್ನ ಬದುಕಿನ ಅತಿದೊಡ್ಡ…

Read More

ತಮಿಳು ಚಿತ್ರರಂಗದ ಖ್ಯಾತ ನಟಿ ವರಲಕ್ಷ್ಮಿ ಶರತ್‌ಕುಮಾರ್ ಬಹುಕಾಲದ ಗೆಳೆಯ ನಿಕೊಲಾಯ್ ಜೊತೆ ಥೈಲ್ಯಾಂಡ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜು.3ರಂದು ಚೆನ್ನೈನಲ್ಲಿ ಅದ್ಧೂರಿ ಆರತಕ್ಷತೆ ಆಯೋಜಿಸಿದ್ದು, ಕನ್ನಡದ ಸ್ಟಾರ್ ನಟ ಸುದೀಪ್ ಅವರ ಕುಟುಂಬ ಆರತಕ್ಷತೆಯಲ್ಲಿ ಭಾಗಿಯಾಗ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಹಿರಿಯ ನಟ ಶರತ್‌ ಕುಮಾರ್‌ ಮತ್ತು ರಾಧಿಕಾ ದಂಪತಿ ಪುತ್ರಿ ವರಲಕ್ಷ್ಮಿ ಮದುವೆ ಆರತಕ್ಷತೆಗೆ ಸುದೀಪ್ ಫ್ಯಾಮಿಲಿ ಭಾಗಿಯಾಗಿ ನವಜೋಡಿಗೆ ಶುಭಕೋರಿದ್ದಾರೆ. ಸುದೀಪ್ ಜೊತೆ ಪತ್ನಿ ಪ್ರಿಯಾ, ಮಗಳು ಸಾನ್ವಿ ಜೊತೆಗೆ ಭಾಗಿಯಾಗಿದ್ದರು. ಸುದೀಪ್ ಕುಟುಂಬದ ಜೊತೆ ವರಲಕ್ಷ್ಮಿ ಉತ್ತಮ ಒಡನಾಟ ಹೊಂದಿದ್ದಾರೆ. ಮಾಣಿಕ್ಯ, ರನ್ನ, ಮತ್ತು ಸದ್ಯದಲ್ಲೇ ರಿಲೀಸ್ ಆಗಲಿರೋ ಮ್ಯಾಕ್ಸ್ ಸಿನಿಮಾದಲ್ಲೂ  ವರಲಕ್ಷ್ಮಿ ನಟಿಸಿದ್ದಾರೆ. ವರಲಕ್ಷ್ಮಿ ಶರತ್‌ಕುಮಾರ್, ನಿಕೊಲಾಯ್ ಆತರಕ್ಷತೆಯಲ್ಲಿ ತಮಿಳು ನಟ ಸಿದ್ಧಾರ್ಥ್, ಬಾಲಯ್ಯ, ತ್ರಿಷಾ, ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ಸಚಿವ ಉದಯನಿಧಿ ಮಾರನ್ ಸೇರಿದಂತೆ ಸಾಕಷ್ಟು ಗಣ್ಯರು ನವಜೋಡಿಗೆ ಶುಭ ಕೋರಿದ್ದಾರೆ. ವರಲಕ್ಷ್ಮೀ ಕೈ ಹಿಡಿದ ನಿಕೋಲಾಯ್ ಸಚ್‌ದೇವ್ ಅವರು…

Read More

ಸುಡಾನ್‍ನಲ್ಲಿ ಸಶಸ್ತ್ರ ಪಡೆ ಮತ್ತು ಅರೆಸೇನಾ ಪಡೆಯ ನಡುವೆ ಮುಂದುವರಿದಿರುವ ಭೀಕರ ಯುದ್ಧದಿಂದ ಕಂಗೆಟ್ಟು ಸುರಕ್ಷಿತ ದೇಶಕ್ಕೆ ಪಲಾಯನ ಮಾಡುವ ಪ್ರಯತ್ನದಲ್ಲಿದ್ದ ವೇಳೆ ದೋಣಿ ಮುಳುಗಿ ಮಕ್ಕಳು, ಮಹಿಳೆಯರ ಸಹಿತ 25 ಮಂದಿ ನೈಲ್ ನದಿಯಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಆಗ್ನೇಯ ಸುಡಾನ್‍ನ ಸೆನ್ನಾರ್ ರಾಜ್ಯದಿಂದ ದೋಣಿಯಲ್ಲಿ ಹೊರಟಿದ್ದ ಸುಮಾರು 25 ನಾಗರಿಕರು ಬ್ಲೂ ನೈಲ್ ನದಿಯಲ್ಲಿ ದೋಣಿ ಮುಳುಗಿ ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಒಂದು ಕುಟುಂಬ ಸರ್ವನಾಶವಾಗಿದೆ ಎನ್ನಲಾಗುತ್ತಿದೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳ ಸಂಖ್ಯೆ ಅಧಿಕವಾಗಿದೆ. ಸೇನೆ ಮತ್ತು ಅರೆಸೇನಾ ಪಡೆಯ ನಡುವಿನ ಸಂಘರ್ಷದಿಂದ ಕಂಗೆಟ್ಟಿರುವ ಸುಡಾನ್ ಪ್ರಜೆಗಳು ಅಪಾಯವನ್ನು ಲೆಕ್ಕಿಸದೆ ಸುರಕ್ಷಿತ ಸ್ಥಳವನ್ನು ಅರಸುತ್ತಾ ವಲಸೆ ಹೋಗುತ್ತಿದ್ದಾರೆ ಎಂದು ಸ್ಥಳೀಯ ಸ್ವಯಂಸೇವಾ ಸಂಸ್ಥೆಯೊಂದು ವರದಿ ಮಾಡಿದೆ.

Read More

ಬ್ರಿಟನ್‌ ಸಂಸತ್ತಿಗೆ ಗುರುವಾರ ಸಾರ್ವತ್ರಿಕ ಚುನಾವಣೆ ನಡೆದಿದೆ. ಬರೋಬ್ಬರಿ 14 ವರ್ಷಗಳ ಬಳಿಕ ಭರ್ಜರಿ ಜಯದೊಂದಿಗೆ ಅಧಿಕಾರಕ್ಕೆ ಮರಳುವ ವಿಶ್ವಾಸವನ್ನು ವಿರೋಧ ಪಕ್ಷವಾದ ಲೇಬರ್ ಪಾರ್ಟಿ ವ್ಯಕ್ತಪಡಿಸಿದೆ. ಇನ್ನೂ ಆರು ತಿಂಗಳು ಅಧಿಕಾರವಧಿ ಇದ್ದರೂ ಅವಧಿಪೂರ್ವ ಚುನಾವಣೆಗೆ ಹೋಗುವ ಮೂಲಕ ರಿಷಿ ಸುನಕ್ ಅಚ್ಚರಿ ಮೂಡಿಸಿದ್ದರು. ಪ್ರಾಥಮಿಕ ವಿಶ್ಲೇಷಣೆ ಪ್ರಕಾರ, ವಿರೋಧಪಕ್ಷ ಲೇಬರ್ ಪಾರ್ಟಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಗಳಿವೆ. ಆಡಳಿತ ವಿರೋಧಿ ಅಲೆಯ ಭೀತಿಯಲ್ಲಿರುವ ಆಡಳಿತಾರೂಢ ಕನ್ಸರ್ವೇಟಿವ್‌ ಪಕ್ಷ ಅಧಿಕಾರವನ್ನು ಉಳಿಸಿಕೊಳ್ಳಲು ಯತ್ನಿಸುತ್ತಿದೆ. ಈ ಚುನಾವಣೆ ಮೂಲಕ ಭಾರತ ಮೂಲದ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರ ರಾಜಕೀಯ ಭವಿಷ್ಯವೂ ತೂಗುಯ್ಯಾಲೆಯಲ್ಲಿದೆ.

Read More

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್ ಎಂಡ್ ಗ್ಯಾಂಗ್ ಸದಸ್ಯರಿಗೆ  ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆಯಾಗಿದೆ. ವಿಡಿಯೋ ಕಾನ್ಫರೆನ್ಸ್‌ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ ಮಹತ್ವದ ಆದೇಶ ನೀಡಿದ್ದು ಜು 17ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಕೊಲೆ ಪ್ರಕರಣದ ಆರೋಪಿಗಳನ್ನು ಬೆಂಗಳೂರು ಮತ್ತು ತುಮಕೂರಿನಿಂದ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ದರ್ಶನ್ ಹಾಗೂ ಉಳಿದ ಸದಸ್ಯರನ್ಉ ಪುರುಷರ ಬ್ಯಾರಕ್‌ನಿಂದ ಪ್ರಕರಣದ A1 ಆರೋಪಿ ಪವಿತ್ರಗೌಡ ಅವರನ್ನು ಪ್ರತ್ಯೇಕವಾಗಿ ಹಾಜರು ಪಡಿಸಲಾಗಿತ್ತು. ವಿಚಾರಣೆ ಬಳಿಕ ದರ್ಶನ್ ಎಂಡ್ ಗ್ಯಾಂಗ್ ಸದಸ್ಯರನ್ನು ಜುಲೂ 17ರವರೆರೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸರ್ಕಾರದ ಪರವಾಗಿ ನ್ಯಾಯಾಂಗ ಬಂಧನ ವಿಸ್ತರಣೆ ಬಗ್ಗೆ ಕೋರ್ಟ್‌ಗೆ ರಿಮ್ಯಾಂಡ್ ಕಾಪಿ ಸಲ್ಲಿಕೆ ಮಾಡಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಿಸಿದೆ. ಇದೇ ವೇಳೆ ಸರ್ಕಾರ ಪರ ವಕೀಲರು ಸಲ್ಲಿಸಿದ ರಿಮ್ಯಾಂಡ್ ಅರ್ಜಿಗೆ ಆರೋಪಿಗಳ ಪರ ವಕೀಲರು ಮನವಿ ಮಾಡಿದರು. ಜಡ್ಜ್‌ ರಿಮ್ಯಾಂಡ್ ಅರ್ಜಿ ಕಾಪಿಯ ಪ್ರತಿಯನ್ನು…

Read More

ಟ್ವಿಟರ್ ಗೆ ಪರ್ಯಾಯವಾಗಿ ಹುಟ್ಟಿಕೊಂಡಿದ್ದ ಸ್ವದೇಶಿ ಮೈಕ್ರೋ ಬ್ಲಾಗಿಂಗ್​​ ಆ್ಯಪ್​ ‘ಕೂ’ ಇದೀಗ ತನ್ನ ಕಾರ್ಯಾಚರಣೆ ನಿಲ್ಲಿಸಲು ಸಜ್ಜಾಗಿದೆ. ಕನ್ನಡ ಸೇರಿದಂತೆ 10 ಸ್ಥಳೀಯ ಭಾಷೆಗಳಲ್ಲಿ ಸೇವೆ ನೀಡುತ್ತಿದ್ದ ಈ ಸಾಮಾಜಿಕ ಜಾಲತಾಣ ಸಾಕಷ್ಟು ಖ್ಯಾತಿ ಘಳಿಸಿತ್ತು. ಆದರೆ ಆರಂಭವಾದ ನಾಲ್ಕೇ ವರ್ಷದಲ್ಲಿ ಸ್ಥಗಿತಗೊಳ್ಳುತ್ತಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಸಂಸ್ಥೆ ಹಲವು ಕಂಪನಿಗಳೊಂದಿಗೆ ನಡೆಸಿದ ಸಹಭಾಗಿತ್ವದ ಮಾತುಕತೆ ವಿಫಲವಾದ ಹಿನ್ನೆಲೆ ಈ ಸಾಮಾಜಿಕ ಜಾಲತಾಣ ಸಾರ್ವಜನಿಕ ಸೇವೆಯಿಂದ ಹೊರ ನಡೆದಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಘೋಷಿಸಿದ್ದಾರೆ. ಲಿಂಕ್ಡಿನ್​ನಲ್ಲಿ ಈ ಕುರಿತು ಪ್ರಕಟಿಸಿರುವ ಸಂಸ್ಥೆಯ ಸಂಸ್ಥಾಪಕರಾದ ಅಪ್ರಮೇಯ ರಾಧಾಕೃಷ್ಣ ಮತ್ತು ಮಯಾಂಕ್​ ಬುಡಲತ್ಕಾ, ಅನೇಕ ದೊಡ್ಡ ದೊಡ್ಡ ಇಂಟರ್ನೆಟ್​ ಕಂಪನಿಗಳು, ಸಂಘಟಿತ ಸಂಸ್ಥೆ ಮತ್ತು ಮಾಧ್ಯಮ ಸಂಸ್ಥೆಗಳೊಂದಿಗೆ ಪಾಲುದಾರಿಕೆಗೆ ಹುಡುಕಾಟ ನಡೆಸಿದೆವು. ಆದರೆ, ಇದು ಫಲ ನೀಡಲಿಲ್ಲ. ಬಹುತೇಕರು ನಮ್ಮ ಬಳಕೆದಾರ ರಚಿತ ವಿಷಯ ಮತ್ತು ಸಾಮಾಜಿಕ ಸಂಸ್ಥೆಯ ಕೆಲಸದ ಪ್ರವೃತ್ತಿಯೊಂದಿಗೆ ಕಾರ್ಯ ನಿರ್ವಹಿಸುವ ಆಸಕ್ತಿ ತೋರಲಿಲ್ಲ ಎಂದು ತಿಳಿಸಿದ್ದಾರೆ. ಟೈಗರ್​…

Read More