Author: Author AIN

ತಾಯಿಯಾದ ಬಳಿಕ ಮಹಿಳೆಯರ ಜೀವನದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತವೆ. ಹಾರ್ಮೋನ್ ಗಳ ಬದಲಾವಣೆಯಿಂದ ಸಮತೋಲನ ತಪ್ಪುತ್ತದೆ. ಮಕ್ಕಳು ಹಾಲು ಕುಡಿಯಲು, ನಿದ್ರೆ ಮಾಡಲು ತೊಂದರೆ ನೀಡಿದರೆ ಸಾಕಪ್ಪ ಸಾಕು ಅನಿಸುತ್ತದೆ. ಆದರೆ ಆ ಮಗುವಿನ ನಗು ಆ ಎಲ್ಲವನ್ನು ಸಹಿಸಿಕೊಳ್ಳುವ ಶಕ್ತಿ ನೀಡುತ್ತದೆ. ಇದೀಗ ನಟಿಯೊಬ್ಬರು ತಮ್ಮ ಮಗು ಹಾಲು ಕುಡಿಯಲು ಹಿಂಸೆ ನೀಡುತ್ತಿದ್ದು ಇದರಿಂದ ಮಗು ಹುಟ್ಟಿದ ಎರಡೇ ದಿನಕ್ಕೆ ಕೊಲ್ಲಲು ಬಯಸಿದ್ದಾಗಿ ಹೇಳಿಕೊಂಡಿದ್ದಾರೆ. ಪ್ರಸವಾದ ನಂತರದ ಖಿನ್ನತೆಯಿಂದ ಬಳಲುತ್ತಿರುವ ನಟಿಯೊಬ್ಬರು ಮಗುವನ್ನು ಕೊಲ್ಲಲು ಬಯಸಿದ್ದಾಗಿ ಹೇಳಿಕೊಂಡಿದ್ದಾರೆ. ಈ ವಿಷಯವನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಸಾಕಷ್ಟು ವೈರಲ್ ಆಗಿದೆ. ಅಂದ ಹಾಗೆ ಹೆತ್ತ ಮಗುವನ್ನೇ ಕೊಲ್ಲಬೇಕು ಎಂದೆನಿಸಿದ್ದು ಪಾಕಿಸ್ತಾನಿ ನಟಿ ಸರ್ವತ್ ಗಿಲಾನಿ ಅವರಿಗೆ. ಈ ಬಗ್ಗೆ ಪೋಸ್ಟ್ ಮಾಡಿರುವ ನಟಿ ಸರ್ವತ್ ಗಿಲಾನಿ, ‘ನಾನು ಗರ್ಭಿಣಿ ಎಂದು ತಿಳಿದಾಗ ನನಗೆ ತುಂಬಾ ಸಂತೋಷವಾಯಿತು. ನಾನು ಗರ್ಭಾವಸ್ಥೆಯನ್ನು ತುಂಬಾ ಆನಂದಿಸಿದೆ. ಆದರೆ ಹೆರಿಗೆಯ ಸಮಯದಲ್ಲಿ ನನಗೆ ಶಸ್ತ್ರಚಿಕಿತ್ಸೆ ಆಗಿತ್ತು.…

Read More

ಸ್ಯಾಂಡಲ್ ವುಡ್ ಚಿತ್ರರಂಗದ ಒಬ್ಬೊಬ್ಬರೇ ಜೋಡಿಗಳ ಮಧ್ಯೆ ಬಿರುಕು ಮೂಡುತ್ತಿದೆ. ಇತ್ತೀಚೆಗೆ ರ್ಯಾಪರ್ ಚಂದನ್ ಶೆಟ್ಟಿ , ನಿವೇದಿತಾ ಗೌಡ, ಯುವ ಹಾಗೂ ಶ್ರೀದೇವಿ ದಾಂಪತ್ಯದಲ್ಲಿ ಬಿರುಕು ಮೂಡಿರೋದು ಗೊತ್ತೇ ಇದೆ. ಈ ಬೆನ್ನಲ್ಲೇ ನಟಿ ಮಯೂರಿ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಹರಿದಾಡಿತ್ತು. ಈಗ ಈ ಬಗ್ಗೆ ನಟಿ ಸ್ಪಷ್ಟನೆ ನೀಡಿದ್ದಾರೆ. ನಟಿ ಮಯೂರಿ ಸಾಂಸಾರಿಕ ಜೀವನ ಕುರಿತು ಗಾಸಿಪ್ ಕೇಳಿಬಂದಿತ್ತು. ಇನ್ಸ್ಟಾಗ್ರಾಂನಲ್ಲಿ ಪತಿ ಜೊತೆ ಇರುವ ಫೋಟೋ ಡಿಲೀಟ್ ಮಾಡಿದ್ದೇ ಈ ಗಾಸಿಪ್‌ಗೆ ಕಾರಣವಾಗಿತ್ತು. ಹತ್ತು ವರ್ಷಗಳ ಕಾಲ ಪ್ರೀತಿಸಿ ಅರುಣ್ ಎಂಬುವರನ್ನು 4 ವರ್ಷದ ಹಿಂದೆ ಮದುವೆಯಾಗಿದ್ದರು ಮಯೂರಿ. ಈ ದಂಪತಿಗೆ ಓರ್ವ ಪುತ್ರನೂ ಇದ್ದಾನೆ. ನಟಿ ಡಿವೋರ್ಸ್ ಕುರಿತು ಸುದ್ದಿ ಹಬ್ಬಿದ ಬೆನ್ನಲ್ಲೇ, ನನ್ನ ಕುಟುಂಬ ಚೆನ್ನಾಗಿಯೇ ಇದೆ. ನಾವು ಚೆನ್ನಾಗಿಯೇ ಇದ್ದೇವೆ ಎಂದು ಮಯೂರಿ ಹೇಳಿದ್ದಾರೆ. ಈಗ ಡಿಜಿಟಲ್ ಮೀಡಿಯಾದಲ್ಲಿ ಹಾಡು ಸ್ಟೋರಿ ಹಾಕಿದರು ಒಂದೊಂದು ಅರ್ಥ ಬರುತ್ತೆ. ಒಳ್ಳೆಯ ಕಾಮೆಂಟ್ಸ್ ಮತ್ತು…

Read More

ಕಳೆದ ತಿಂಗಳು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್​ಗೆ ಕೆನ್ನೆಗೆ ಹೊಡೆದ ಅಮಾನತುಗೊಂಡಿದ್ದ ಸಿಐಎಸ್​ಎಫ್ ಸಿಬ್ಬಂದಿ ಕುಲ್ವಿಂದರ್​ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಶಿಸ್ತು ಉಲ್ಲಂಘನೆ ವಿಚಾರಣೆ ಬಾಕಿಯಿರುವಂತೆ  ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ CISF ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ ನಟಿ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಸಂಬಂಧ ಸಸ್ಪೆಂಡ್ ಆಗಿದ್ದ ಸಿಐಎಸ್‌ಎಫ್ ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಅಲ್ಲದೇ ಅವರನ್ನು ಚಂಡೀಗಢದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಇರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ವರ್ಗಾವಣೆ ಮಾಡಲಾಗಿದೆ. ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ಅವರಿಗೆ ಇಲಾಖಾ ವಿಚಾರಣೆ ನಡೆಯುತ್ತಿದೆ ಎಂದು ಸಿಐಎಸ್‌ಎಫ್ ತಿಳಿಸಿದೆ. ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ನಟಿ ಕಂಗನಾ ಜೂನ್ 7 ರಂದು ಚಂಡೀಗಢ ವಿಮಾನ ನಿಲ್ದಾಣದಿಂದ ದೆಹಲಿಯತ್ತ…

Read More

ಸ್ಯಾಂಡಲ್ ವುಡ್ ನಟ ಹಾಗೂ  ಬಿಗ್ ಬಾಸ್ ವಿಜೇತ ಪ್ರಥಮ್ ಗೆ ಇತ್ತೀಚೆಗೆ ದರ್ಶನ್ ಅಭಿಮಾನಿಗಳಿಂದ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನಟ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಈ ಪ್ರಕರಣದ ವಿಚಾರವಾಗಿ ಪ್ರಥಮ್ ಸೋಷಿಯಲ್ ಮೀಡಿಯಾದಲ್ಲಿ ಕಿಡಿಕಾರಿದ್ದು, ಇನ್ಮೇಲೆ ಲೀಗಲ್ ಆಗಿ ಹೋಗ್ತೀನಿ ಎಂದು ವಾರ್ನಿಂಗ್ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ಜೈಲು ಸೇರಿರುವ ಕುರಿತು ಪ್ರಥಮ್ ಪ್ರತಿಕ್ರಿಯೆ ನೀಡಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಥಮ್ ಗೆ ಬೆದರಿಕೆ ಕರೆ ಮಾಡಿದ್ದರು. ಪ್ರಥಮ್‌ಗೆ ಮತ್ತೆ ಬೆದರಿಕೆ ಬೆನ್ನಲ್ಲೇ ಕಿಡಿಗೇಡಿಗಳಿಗೆ ಪೊಲೀಸರು ನೋಟಿಸ್ ಕಳುಹಿಸಿದ್ದರು. ಬಳಿಕ ಸ್ಟೇಷನ್‌ಗೆ ಬಂದವರು ಪ್ರಥಮ್ ಫ್ಯಾನ್ಸ್ ಅಂತಾ ಹೈಡ್ರಾಮಾ ಮಾಡಿದ್ದಾರೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಪ್ರಥಮ್, ಅಂಧಾಭಿಮಾನಿಗಳೇ, ನಾನೆಷ್ಟು ತಿಳುವಳಿಕೆ ಹೇಳಿದ್ರೂ ಕೇಳಲಿಲ್ಲ. ಮನೆಗೆ ಪೊಲೀಸ್ ನೋಟಿಸ್ ಬಂದ ಮೇಲೆ ಸ್ಟೇಷನ್‌ಗೆ ಬಂದು ನಾವು ಪ್ರಥಮ್ ಫ್ಯಾನ್, ಯಾರೋ ಫೇಕ್ ಪ್ರೊಫೈಲ್ ಮಾಡಿ ಬಿಟ್ಟಿದ್ದಾರೆ ಅಂತಾ…

Read More

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ದರ್ಶನ್ ನಡೆಯಿಂದ ಸಾಕಷ್ಟು ಮಂದಿ ಅಸಮಾಧಾನ ಗೊಂಡಿದ್ದಾರೆ. ಘಟನೆಯ ಕುರಿತು ಪರ-ವಿರೋಧ ಚರ್ಚೆಗಳು ಆಗುತ್ತಲೇ ಇವೆ. ಇದೀಗ ಘಟನೆಯ ಕುರಿತು ವಿ.ಮನೋಹರ್‌ ಪ್ರತಿಕ್ರಿಯಿಸಿದ್ದಾರೆ. “ಇದು ಆಕಸ್ಮಿಕವಾಗಿ ನಡೆದುಹೋಗಿದೆ. ಸತ್ತವನಂತೂ ಖಂಡಿತ ಒಳ್ಳೆಯವನಲ್ಲ. ಸಾವಿರಾರು ಹೆಣ್ಣು ಮಕ್ಕಳಿಗೆ ಕೆಟ್ಟ ಕೆಟ್ಟದಾಗಿ ಸಂದೇಶ ಕಳುಹಿಸಿರುವ ವಿಕೃತಕಾಮಿ ಅವನು. ಅವನ ಪಾಪದ ಕೊಡ ತುಂಬಿದೆ, ಅದಕ್ಕೆ ತಕ್ಕ ಶಿಕ್ಷೆಯಾಗಿದೆ. ಆದರೆ ಇದು ಪೊಲೀಸ್‌ ಅವರಿಂದ ಆಗಬೇಕಿತ್ತು. ಆದರೆ ದರ್ಶನ್ ಸರ್ ಬ್ಯಾಡ್ ಟೈಂ ಆಗಿರಬಹುದು. ಅವರು ಆ ಕಳಂಕದಿಂದ ಹೊರಬಂದು ಮೊದಲಿನಂತೆ ಸಿನಿಮಾದಲ್ಲಿ ನಟನೆ ಮಾಡಲಿ ಎಂದು ವಿ ಮನೋಹರ್ ಹೇಳಿದ್ದಾರೆ. ದರ್ಶನ್ ಹೀರೋ ಆಗುವ ಮೊದಲೇನೇ ‘ಜನುಮದ ಜೋಡಿ’ ಚಿತ್ರಕ್ಕೆ ಕ್ಯಾಮೆರಾ ಅಸಿಸ್ಟೆಂಟ್ ಆಗಿದ್ರಲ್ವಾ ಆವಾಗಲೇ ಪರಿಚಯ ಇತ್ತು. ಆಗಾಗ ಮುಹೂರ್ತ ಕಾರ್ಯಕ್ರಮಗಳಲ್ಲಿ ಸಿಗುತ್ತಾ ಇದ್ವಿ. ದರ್ಶನ್ ಬಹಳ ಸಹೃದಯಿ ಮನುಷ್ಯ. ಅನೇಕರಿಗೆ ಕಷ್ಟದಲ್ಲಿ ಸಹಾಯ ಮಾಡಿದ್ದಾರೆ.…

Read More

ನಟ ದರ್ಶನ್ ಅವರ ಪತ್ನಿ ನಾನು, ಪವಿತ್ರಾ ಗೌಡ ಅಲ್ಲ ಎಂದು ನಗರ ಪೊಲೀಸ್‌ ಆಯುಕ್ತ ದಯಾನಂದ್ ಅವರಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ. 2003ರಲ್ಲಿ ದರ್ಶನ್ ಮತ್ತು ನಾನು ಮದುವೆ ಆಗಿದ್ದೀವಿ. ಆ ವರ್ಷದ ಮೇ 19 ರಂದು ದರ್ಶನ್ ಅವರ ಧರ್ಮಪತ್ನಿಯಾಗಿದ್ದೀನಿ. ನಮ್ಮಿಬ್ಬರಿಗೆ ಒಬ್ಬ ಮಗ ಇದ್ದಾನೆ. ಪವಿತ್ರಗೌಡ, ಸಂಜಯ್ ಸಿಂಗ್ ಎಂಬವರನ್ನು ಮದುವೆ ಆಗಿದ್ದಾರೆ. ಅವರಿಬ್ಬರಿಗೂ ಒಬ್ಬಳು ಹೆಣ್ಣು ಮಗಳಿದ್ದಾಳೆ ಎಂದು ವಿಜಯಲಕ್ಷ್ಮಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನೀವು ಮಾಧ್ಯಮಗೋಷ್ಠಿಯಲ್ಲಿ ದರ್ಶನ್ ಅವರ ಪತ್ನಿ ಪವಿತ್ರಗೌಡ ಅಂತಾ ಹೇಳಿದ್ದೀರಿ. ಗೃಹ ಸಚಿವರೂ ಕೂಡ ಒಮ್ಮೆ ಅದನ್ನೇ ಉಚ್ಛಾರಣೆ ಮಾಡಿದ್ದಾರೆ. ಹೀಗಾಗಿ ಪೊಲೀಸ್ ರೆಕಾರ್ಡ್ ಅಲ್ಲಿ ಪವಿತ್ರಗೌಡ ದರ್ಶನ್ ಅವರ ಪತ್ನಿ, ದರ್ಶನ್ ಅವರನ್ನು ಮದುವೆಯಾಗಿದ್ದಾರೆ ಎಂದು ಉಲ್ಲೇಖಿಸಬೇಡಿ. ದಾಖಲೆಗಳಲ್ಲಿ ದರ್ಶನ್ ಅವರ ಪತ್ನಿ ಎಂದು ಬರೆಯಬೇಡಿ ಎಂದು ಮನವಿ ಮಾಡಿದ್ದಾರೆ. ಅಂದ ಹಾಗೆ ನಟಿ ಪವಿತ್ರಾ ಗೌಡಗೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್…

Read More

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಕಳೆದ 13 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.  ಇಂದಿಗೆ ನ್ಯಾಯಾಂಗ ಬಂಧನ ಮುಗಿಯಲಿದ್ದು ದರ್ಶನ್ ಅವರನ್ನು ಮತ್ತೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುತ್ತಿದೆ. ಇಂದು ದರ್ಶನ್  ನ್ಯಾಯಾಂಗ ಬಂಧನ ಕಂಪ್ಲೀಟ್ ಆಗಲಿದ್ದು ದರ್ಶನ್ ಪರ ವಕೀಲರು ಜಾಮೀನಿಗೆ ಅರ್ಜಿ ಹಾಕೋ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಇಂದು ದರ್ಶನ್ ​ಗೆ ಜಾಮೀನು ಸಿಗದಿದ್ದರೆ ಮತ್ತೆ ಜೈಲು ಪಾಲಾಗಲಿದ್ದಾರೆ. ದರ್ಶನ್ ಗೆ ಜೈಲಾ ಇಲ್ಲ ಬೇಲಾ ಅನ್ನೋದು ಇಂದು ನಿರ್ಧಾರವಾಗಲಿದೆ. ಈಗಾಗಲೇ ಅವರ ಅಭಿಮಾನಿಗಳು ಅವರಿಗೆ ಜೈಲು ಸಿಗಲಿ ಎಂದು ಪೂಜೆ, ಪ್ರಾರ್ಥನೆ ಮಾಡುತ್ತಿದ್ದಾರೆ. ಕೊಲೆ ಆರೋಪದಲ್ಲಿ ದರ್ಶನ್ ಜೈಲು ಸೇರಿದಾಗಿನಿಂದ ಅವರ ಸಿನಿಮಾ ಮಾಡುತ್ತಿರುವ ನಿರ್ಮಾಪಕರು ಚಿಂತೆಯಲ್ಲಿದ್ದಾರೆ. ಕೆಲವು ಸಿನಿಮಾ ಅರ್ಧದಲ್ಲಿ ನಿಂತಿದ್ದರೆ ಇನ್ನೊಂದಷ್ಟು ನಿರ್ಮಾಪಕರು ನಟನಿಗೆ ಅಡ್ವಾನ್ಸ್ ಪೇ ಮಾಡಿದ್ದಾರೆ. ಇಂದರಿಂದ ನಿರ್ಮಾಪಕರು ಆದಷ್ಟು ಬೇಗ ದರ್ಶನ್ ಹೊರಗೆ ಬರಲಿ ಎಂದು ಅಂದುಕೊಳ್ಳುತ್ತಿದ್ದಾರೆ. ಖ್ಯಾತ ನಿರ್ಮಾಪಕ ಕೆ ಮಂಜು ಸುದ್ದಿಗೋಷ್ಠಿ ನಡೆಸಿ ದರ್ಶನ್…

Read More

ಅನಿಲ್ ಕಪೂರ್ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್‌’ ಒಟಿಟಿ ಸೀಸನ್ 3 ಆರಂಭವಾಗಿ ಕೆಲ ದಿನಗಳು ಕಳೆದಿದೆ. ಈ ಬಾರಿ ಶೋನಲ್ಲಿ ಹೆಚ್ಚು ಗಮನಸೆಳೆದವರು ಅರ್ಮಾನ್ ಮಲ್ಲಿಕ್‌. ಏಕೆಂದರೆ, ಅರ್ಮಾನ್ ತನ್ನ ಇಬ್ಬರು ಪತ್ನಿಯರ ಜೊತೆಗೆ ಶೋಗೆ ಎಂಟ್ರಿ ನೀಡಿದ್ದರು. ಇದೀಗ ಇಬ್ಬರು ಪತ್ನಿಯರಲ್ಲಿ ಒಬ್ಬರು ಎಲಿಮಿನೇಟ್ ಆಗಿದ್ದಾರೆ. ಈ ಮಧ್ಯೆ ಇದುವರೆಗೂ ಅನ್ಯೋನ್ಯವಾಗಿದ್ದ ಅರ್ಮಾನ್ ರ ಇಬ್ಬರು ಪತ್ನಿಯನ್ನು ಎಲಿಮಿನೇಟ್ ಆಗುತ್ತಿದ್ದಂತೆ ನಾನು ಅರ್ಮಾನ ನ ಮೊದಲ ಪತ್ನಿ ಕೃತಿಕಾ ಅಲ್ಲ ಎಂದು ಪಾಯಲ್ ಹೇಳಿದ್ದಾರೆ. ಯೂಟ್ಯೂಬರ್ ಆಗಿರುವ ಅರ್ಮಾನ್ ಮಲ್ಲಿಕ್‌ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಫೇಮಸ್ ಆಗಿದ್ದಾರೆ. ಯೂಟ್ಯೂಬ್‌ನಲ್ಲಿ ಅವರ ಚಾನೆಲ್‌ಗೆ 7.70 ಮಿಲಿಯನ್ ಫಾಲೋವರ್ಸ್ ಹೊಂದಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ 4.10 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಇಂತಹ ಅರ್ಮಾನ್‌ಗೆ ಪಾಯಲ್ ಮಲ್ಲಿಕ್ ಮತ್ತು ಕೃತಿಕಾ ಮಲ್ಲಿಕ್ ಎಂಬಿಬ್ಬರು ಪತ್ನಿಯರಿದ್ದಾರೆ. ಈ ಮೊದಲು ಅರ್ಮಾನ್ ಮದುವೆಯಾಗಿದ್ದ ಆಕೆಗೆ ಡಿವೋರ್ಸ್ ನೀಡಿದ್ದಾರೆ. ಇದೀಗ ತನ್ನ ಎರಡನೇ ಹಾಗೂ ಮೂರನೇ ಹೆಂಡತಿ ಜೊತೆ…

Read More

ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ ಎಂಬ ಕಾರಣಕ್ಕೆ ನಟ ದರ್ಶನ್ ಎಂಡ್ ಗ್ಯಾಂಗ್ ಸದಸ್ಯರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯಲ್ಲಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಘಟನೆಯ ಬಳಿಕ ದರ್ಶನ್ ಎಂಡ್ ಗ್ಯಾಂಗ್ ಜೈಲು ಸೇರಿದ್ದಾರೆ. ಈ ಮಧ್ಯೆ ದರ್ಶನ್ ಹಾಗೂ ಪವಿತ್ರಾ ಗೌಡ ಭೇಟಿಯಾಗಿ ಹತ್ತು ನಿಮಿಷಗಳ ಕಾಲ ಮಾತನಾಡಿದ್ದಾರೆ ಎನ್ನಲಾಗುತ್ತಿದೆ. ಜೈಲಿನ ಆಸ್ಪತ್ರೆಯಲ್ಲಿ ಪ್ರತಿ ದಿನ ದರ್ಶನ್ ಗ್ಯಾಂಗ್‌ಗೆ ಇನ್ಸೂಲಿನ್ ಕೊಡಿಸಲಾಗುತ್ತದೆ. ದರ್ಶನ್‌ಗೆ ಇನ್ಸೂಲಿನ್ ಕೊಡಿಸುವ ವೇಳೆ ಆಸ್ಪತ್ರೆಯಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಭೇಟಿ ಮಾಡಿ 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ಇಬ್ಬರು ಜೈಲು ದಿನಗಳ ಬಗ್ಗೆ ಮಾತಾಡಿದ್ದಾರೆ. ಜೊತೆಗೆ ತಾವಿರು ಸ್ಥಿತಿಗೆ ನೊಂದುಕೊಂಡಿದ್ದಾರೆ. ಈ ವೇಳೆ ಪವಿತ್ರಾ ಗೌಡಗೆ ಎಲ್ಲಾ ಸರಿ ಹೋಗುತ್ತೆ ಎಂದು ದರ್ಶನ್ ಸಮಾಧಾನ ಪಡಿಸಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ನಟ ದರ್ಶನ್ ಅವರನ್ನು ಭೇಟಿಯಾಗಲು ಜೈಲಿಗೆ ಪವಿತ್ರಾ ಗೌಡ ಆಪ್ತೆ ಸಮತಾ ಕೂಡ ಭೇಟಿ ನೀಡಿದ್ದರು ಎನ್ನಲಾಗುತ್ತಿದೆ. ಪವಿತ್ರಾ, ಸಮತಾ…

Read More

ಬಾಲಿವುಡ್​ ನಟಿ ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಮದುವೆಯಾದ ಬೆನ್ನಲ್ಲೇ ಸೋನಾಕ್ಷಿ ತಂದೆ ನಟ ಶತ್ರುಘ್ನ ಸಿನ್ಹಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಅವರನ್ನು  ದಾಖಲಿಸಲಾಗಿದ್ದು ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲೇ ಇರುವ ನಟನಿಗೆ ಚಿಕಿತ್ಸೆ ಮುಂದುವರೆದಿದೆ. ಇತ್ತೀಚೆಗೆ ಚುನವಣಾ ಪ್ರಚಾರ ಮತ್ತು  ಮಗಳು  ಸೋನಾಕ್ಷಿ ಸಿನ್ಹಾ ಮದುವೆಗೆ ತುಂಬಾ ಓಡಾಟ ಮಾಡಿದ್ದರಿಂದ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಕೆಲವರು ಹೇಳುತ್ತಿದ್ದರೆ. ಮತ್ತೆ ಕೆಲವರು ಮಗಳು ಮುಸ್ಲಿಂ ಯುವಕನನ್ನು ಮದುವೆಯಾಗೋದು ಅವರಿಗೆ ಇಷ್ಟವಿರಲಿಲ್ಲ. ಇದರಿಂದ ಸಾಕಷ್ಟು ತಲೆ ಕೆಡಿಸಿಕೊಂಡು ಆರೋಗ್ಯ ಹಾಳು ಮಾಡಿಕೊಂಡಿದ್ದಾರೆ ಎನ್ನುತ್ತಿದ್ದರು. ಅಷ್ಟೇ ಅಲ್ಲದೇ ಇದಾಗಲೇ ಮಗಳ ಮದುವೆಯ ಕುರಿತು ಭಾರಿ ಟೀಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಶತ್ರುಘ್ನ ಸಿನ್ಹಾ ಅವರು ತುಂಬಾ ಬೇಸರಿಕೊಂಡಿದ್ದರು. ಇದರಿಂದ ಅವರು  ಆಘಾತಕ್ಕೆ ಒಳಗಾಗಿದ್ದರು ಎಂದೂ ಹೇಳಲಾಗುತ್ತಿದೆ. ಇದೀಗ ಶತ್ರುಘ್ನ ಸಿನ್ಹಾಅವರ ಪುತ್ರ ಲವ್​ ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ತಮ್ಮ ತಂದೆ ಕೆಲವು ದಿನಗಳಿಂದ ವೈರಲ್ ಜ್ವರದಿಂದ…

Read More