Author: Author AIN

ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಮನೆ ಮೇಲೆ  ನಡೆದ ಗುಂಡಿನ ದಾಳಿ ಇಡೀ ಮುಂಬೈ ನಗರವನ್ನು ಬೆಚ್ಚಿ ಬೀಳಿಸಿತ್ತು. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯಂತೆ ಸಲ್ಮಾನ್ ಖಾನ್ ಕೊಲೆ ಮಾಡಲು ಸಂಚು ರೂಪಿಸಲಾಗಿತ್ತು ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಮಧ್ಯೆ ಸಲ್ಮಾನ್ ಖಾನ್ ಹತ್ಯೆಗೆ 25 ಲಕ್ಷ ರೂಪಾಯಿಗೆ  ಸೂಪಾರಿ ನೀಡಲಾಗಿದ್ದು ಪಾಕಿಸ್ತಾನದಿಂದ ಎಕೆ 47 ಗನ್ ಬಂದಿತ್ತು ಎಂಬುದು ಬಯಲಾಗಿದೆ. ಸಲ್ಮಾನ್ ಖಾನ್ ಕೊಲೆ ಯತ್ನದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರ ಕೈಗೆ ಹಲವು ಸಾಕ್ಷ್ಯಗಳು ಸಿಕ್ಕಿದೆ. ಈ ಪ್ರಕರಣದಲ್ಲಿ ಬಂಧಿತರಾದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಐವರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಬಿಷ್ಣೋಯ್ ಗ್ಯಾಂಗ್ 25 ಲಕ್ಷ ರೂ ಸುಪಾರಿ ತೆಗೆದುಕೊಂಡಿರುವುದಾಗಿ ಆರೋಪಿಗಳು ಪೊಲೀಸರ ಎದುರು ಬಾಯ್ಬಿಟ್ಟಿದ್ದಾರೆ. ಆರೋಪಿಗಳು ಪಾಕಿಸ್ತಾನದಿಂದ ಎಕೆ 47, ಎಕೆ 92…

Read More

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ತೂಗುದೀಪ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್‌ಗೆ 6106 ಕೈದಿ ನಂಬರ್ ನೀಡಲಾಗಿದೆ. ಆದರೆ, ಆತನ ಅಭಿಮಾನಿಗಳು ಇದೇ ಕೈದಿ ನಂಬರ್ ಅನ್ನು ವಾಹನಗಳ ಮೇಲೆ ಅಂಟಿಸಿಕೊಂಡಿದ್ದಾರೆ. ಇದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿರುವ ಅಂದಾಭಿಮಾನಿಗಳು ಕೈ, ಎದೆ, ಕುತ್ತಿಗೆ ಸೇರಿದಂತೆ ಪುಷ್ಠ ಭಾಗದ ಮೇಲೂ ಕೈದಿ ನಂಬರ್ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಅಲ್ಲದೆ ಪುಟ್ಟ ಮಗುವಿಗೆ ಕೈದಿ ನಂಬರ್ 6106 ಎಂದು ಸಿದ್ಧಪಡಿಸಿ ಫೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈಗಾಗಲೇ ದರ್ಶನ್ರ ಹಲವು ಅಭಿಮಾನಿಗಳು ಬೈಕ್‌ಗಳು, ಬಸ್‌ಗಳು, ಆಟೋಗಳು, ಗೂಡ್ಸ್ ವಾಹನಗಳು ಸೇರಿ ವಿವಿಧೆಡೆ ಡಿ ಬಾಸ್ ಸ್ಟಿಕ್ಕರ್ ತೆರವುಗೊಳಿಸಿ ‘ಕೈದಿ ನಂಬರ್ 6106 ಹಾಗೂ ಕೈ ಕೋಳ’ ಸ್ಟಿಕ್ಕರ್ ಅಂಟಿಸಿಕೊಂಡಿದ್ದಾರೆ. ಇದರ ಬೆನ್ನಲ್ಲಿಯೇ ಇದೇ ಕೈದಿ ನಂಬರ್ 6106 ಅನ್ನು ಕೈ, ಎದೆ, ಭುಜ, ಕುತ್ತಿಗೆ ಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಇದಕ್ಕೂ ಒಂದು ಹೆಜ್ಜೆ…

Read More

ಕೊಡಗಿನಲ್ಲಿ ಹುಟ್ಟಿ ಬೆಳೆದ ನಟಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸ್ಟಾರ್ ನಟರ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿರುವ ನಟಿಗೆ ತನ್ನೂರಿನ ಮೇಲಿರುವ ಪ್ರೀತಿ ಕೊಂಚವೂ ಕಮ್ಮಿಯಾಗಿಲ್ಲ. ಸಿನಿಮಾಗಳಲ್ಲಿ ಅದೆಷ್ಟೇ ಬ್ಯುಸಿಯಾಗಿದ್ದರು ಬಿಡುವು ಮಾಡಿಕೊಂಡು ರಶ್ಮಿಕಾ ಆಗಾಗ ಕೊಡಗಿಗೆ ಭೇಟಿ ನೀಡುತ್ತಿರುತ್ತಾರೆ. ತಾವು ಹುಟ್ಟಿ ಬೆಳೆದ ಮನೆಗೆ ನಟಿ ಭೇಟಿ ನೀಡಿ ತಮ್ಮ ಬಾಲ್ಯದ ದಿನಗಳನ್ನು ಆಗಾಗ ಮೆಲುಕು ಹಾಕುತ್ತಿರುತ್ತಾರೆ. ಇತ್ತೀಚೆಗೆ ನಟಿ ರಶ್ಮಿಕಾ ಸ್ನೇಹಿತೆಯ ಮದುವೆಗಾಗಿ ಕೊಡಗಿಗೆ ಆಗಮಿಸಿದ್ದರು. ಈ ವೇಳೆ ರಾಯಲ್ ಬ್ಲೂ ಸೀರೆಯುಟ್ಟ ನಟಿ ಅಭಿಮಾನಿಗಳ ಮನಸ್ಸು ಗೆದ್ದಿದ್ದರು. ಅಂತೆಯೇ ತಮ್ಮ ಮಾತೃ ಭಾಷೆಯಲ್ಲಿ ಮಾತನಾಡಿ ಕೊಡಗು ಜನಗಳ ಮನ ಗೆದ್ದಿದ್ದರು. ಸದ್ಯ ಆ ವಿಡಿಯೋವನ್ನ ನಟಿ ಸಾಮಾಜಿಕ ಜಾಲಾ ತಾಣದಲ್ಲಿ ಹಂಚಿಕೊಂಡಿದ್ದಾರೆ. ಎಲ್ಲರಿಗೂ ನಮಸ್ಕಾರ, ನಾನು ಕೊಡಗಿನಲ್ಲಿ ನಡೆಯುತ್ತಿರುವ ನನ್ನ ಫ್ರೆಂಡ್ ಮದುವೆಗಾಗಿ ಇಲ್ಲಿಗೆ ಬಂದಿದ್ದೇನೆ. ಕೊಡಗಿನ ಜನರಿಗಾಗಿ ಈ ವಿಡಿಯೋ ಮಾಡುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಬೆಳೆಯುತ್ತಿದ್ದೇನೆ, ನನ್ನ…

Read More

ನಾಳೆಯಿಂದ ಎರಡು ದಿನಗಳ ಕಾಲ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗ್ಲೋಬಲ್ ಇಂಡಿಯಾ ಎಐ ಶೃಂಗಸಭೆ ನಡೆಯಲಿದ್ದು ವಿವಿಧ ರಾಷ್ಟ್ರಗಳ ತಜ್ಞರು ಭಾಗಿಯಾಗಲಿದ್ದಾರೆ. ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನಗಳ ನೈತಿಕ ಮತ್ತು ಅಂತರ್ಗತ ಬೆಳವಣಿಗೆಗೆ ಭಾರತದ ಸಮರ್ಪಣೆಯನ್ನು ಒತ್ತಿ ಹೇಳುವುದರ ಜೊತೆಗೆ ಸಹಯೋಗ ಮತ್ತು ಜ್ಞಾನ ವಿನಿಮಯವನ್ನು ಉತ್ತೇಜಿಸುವ ಗುರಿಯೊಂದಿಗೆ ಇದೇ ವಾರ ‘ಗ್ಲೋಬಲ್ ಇಂಡಿಯಾಎಐ ಶೃಂಗಸಭೆ’ ನಡೆಸುವುದಾಗಿ ಕೇಂದ್ರ ಸರಕಾರ ಸೋಮವಾರ ಪ್ರಕಟಿಸಿದೆ. ಭಾರತವು ಕೃತಕ ಬುದ್ಧಿಮತ್ತೆಯ ಜಾಗತಿಕ ಸಹಭಾಗಿತ್ವದ ಅಧ್ಯಕ್ಷನಾಗಿ ಈ ಶೃಂಗಸಭೆ ನಡೆಸುತ್ತಿದೆ ಎಂದು ಐಟಿ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಈ ಶೃಂಗಸಭೆಯು ವಿಜ್ಞಾನ, ಉದ್ಯಮ, ನಾಗರಿಕ ಸಮಾಜ, ಸರ್ಕಾರಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಪ್ರಮುಖ ಅಂತಾರಾಷ್ಟ್ರೀಯ ಎಐ ತಜ್ಞರಿಗೆ ಪ್ರಮುಖ ಎಐ ಸಮಸ್ಯೆಗಳು ಮತ್ತು ಸವಾಲುಗಳ ಬಗ್ಗೆ ಒಳನೋಟಗಳನ್ನು ಹಂಚಿಕೊಳ್ಳಲು ವೇದಿಕೆಯನ್ನು ಒದಗಿಸುವ ನಿರೀಕ್ಷೆಯಿದೆ. ಕಳೆದ ವರ್ಷ ಡಿಸೆಂಬರ್​ನಲ್ಲಿ, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ, ಜಿಪಿಎಐನ ನವದೆಹಲಿ ಘೋಷಣೆಯನ್ನು 28 ದೇಶಗಳು ಸರ್ವಾನುಮತದಿಂದ ಅಂಗೀಕರಿಸಿದ್ದವು.…

Read More

ಮಹಿಳಾ ಅಧಿಕಾರಿಯೊಬ್ಬರು ಕೈದಿಯ ಜೊತೆ ಜೈಲಿನಲ್ಲಿ ಸಂಬೋಗದಲ್ಲಿ ತೊಡಗಿಕೊಂಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ನೈಋತ್ಯ ಲಂಡನ್‌ನ ಹೆಚ್‌ಎಂಪಿ ವಾಂಡ್ಸ್‌ವರ್ತ್ ಜೈಲಿನಲ್ಲಿ ನಡೆದಿದೆ. 30 ವರ್ಷದ ಲಿಂಡಾ ಡಿ ಸೌಸಾ ಅಬ್ರೂ ಪಶ್ಚಿಮ ಲಂಡನ್‌ನ ಫುಲ್‌ಹಾಮ್‌ನಲ್ಲಿ ವಾಸಿಸುತ್ತಿದ್ದಾರೆ. ಅವರ ಸಾರ್ವಜನಿಕ ಕಚೇರಿಯಲ್ಲಿ ಈ ದುಷ್ಕೃತ್ಯ ನಡೆಸಿದ ಆರೋಪ ಎದುರಿಸುತ್ತಿದ್ದು, ಅವರನ್ನು ಆಕ್ಸ್‌ಬ್ರಿಡ್ಜ್ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರುಪಡಿಸಲಾಗಿದೆ. ಜೈಲಿನೊಳಗೆ ಚಿತ್ರೀಕರಿಸಿದ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ಮೆಟ್ರೋಪಾಲಿಟನ್ ಪೊಲೀಸರು ಶುಕ್ರವಾರ ವಿಚಾರಣೆಯನ್ನು ಪ್ರಾರಂಭಿಸಿದರು. ವರದಿಗಳ ಪ್ರಕಾರ, ಈ ಘಟನೆ ಸಂಭವಿಸುವ ಮೊದಲು ಆ ಮಹಿಳಾ ಜೈಲಧಿಕಾರಿಯು ಆರಂಭದಲ್ಲಿ ಯೂನಿಫಾರಂ ಧರಿಸಿದ್ದರು. ಡ್ಯೂಟಿಯಲ್ಲಿರುವಾಗಲೇ ಕೈದಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿರುವುದು ಈ ವಿಡಿಯೋ ಮೂಲಕ ಬಹಿರಂಗವಾಗಿದೆ. 1851ರಲ್ಲಿ ಸ್ಥಾಪಿಸಲಾದ ವಿಕ್ಟೋರಿಯನ್ ಯುಗದ HMP ವಾಂಡ್ಸ್‌ವರ್ತ್ ಜೈಲು  ಸಾಮರ್ಥ್ಯಕ್ಕಿಂತಲೂ ಅಧಿಕ ಪ್ರಮಾಣದ ಕೈದಿಗಳು ಮತ್ತು ಹದಗೆಡುತ್ತಿರುವ ಪರಿಸ್ಥಿತಿಗಳಂತಹ ತೀವ್ರ ಸವಾಲುಗಳನ್ನು ಎದುರಿಸುತ್ತಿದೆ. ಇದು ವ್ಯಾಪಕ ಹಿಂಸಾಚಾರ, ಸೊಳ್ಳೆಗಳ ಕಾಟ ಮತ್ತು ತೀವ್ರ ಸಿಬ್ಬಂದಿ…

Read More

ಪಾಕಿಸ್ತಾನದ ಜನತೆ ಆರ್ಥಿಕತೆಯಿಂದ ಕಂಗೆಟ್ಟಿದ್ದಾರೆ. ಇದರಿಂದ ದಿನನಿತ್ಯದ ದಿನಸಿ ಸಾಮಾನುಗಳನ್ನು ತರಲು ಸಾಕಷ್ಟು ಮಂದಿ ಹೆಣಗಾಡುತ್ತಿದ್ದಾರೆ. ಈ ಮಧ್ಯೆ ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ತೀವ್ರವಾಗಿ ಹೆಚ್ಚಿಸಲಾಗಿದ್ದು ಇದರಿಂದ ಜನ ಮತ್ತಷ್ಟು ಕಂಗಾಲಾಗಿದ್ದಾರೆ. ಬಕ್ರೀದ್ ಹಬ್ಬದ ಮುಂಚಿತವಾಗಿ ಇಂಧನ ದರಗಳನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಲಾಗಿತ್ತು. ಆದರೆ, ಪಾಕಿಸ್ತಾನದಲ್ಲಿ ಸೋಮವಾರ ಹೊಸ ಹಣಕಾಸು ವರ್ಷ ಪ್ರಾರಂಭವಾಗುತ್ತಿದ್ದಂತೆಯೇ ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಹೆಚ್ಚಿಸಲಾಗಿದೆ. ಹೊಸ ದರಗಳು ಮುಂದಿನ 15 ದಿನಗಳವರೆಗೆ ಜಾರಿಯಲ್ಲಿರುತ್ತವೆ. ಅಧಿಸೂಚನೆ ಪ್ರಕಾರ, 2024-25ರ ಬಜೆಟ್​ನ ಮೊದಲ ದಿನದಂದು ಪೆಟ್ರೋಲ್ ಮತ್ತು ಹೈಸ್ಪೀಡ್ ಡೀಸೆಲ್ (ಎಚ್ಎಸ್​ಡಿ) ಬೆಲೆಗಳನ್ನು ಕ್ರಮವಾಗಿ ಲೀಟರ್​ಗೆ 7.45 ಮತ್ತು 9.56 ರೂ.ಗೆ ಹೆಚ್ಚಿಸಲಾಗಿದೆ ಎಂದು ದಿ ಎಕ್ಸ್​ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ. ಕಳೆದ ತಿಂಗಳು, ಈದ್ ಉಲ್ ಅಧಾಗೆ ಮುಂಚಿತವಾಗಿ ಸರ್ಕಾರವು ಪೆಟ್ರೋಲ್ ಮತ್ತು ಎಚ್ಎಸ್​ಡಿ ಬೆಲೆಯನ್ನು ಕ್ರಮವಾಗಿ ಲೀಟರ್​ಗೆ 10.20 ರೂ. ಮತ್ತು 2.33 ಪಾಕಿಸ್ತಾನಿ ರೂ.ಗಳಷ್ಟು ಕಡಿತಗೊಳಿಸಿತ್ತು. ತೈಲ ಮತ್ತು…

Read More

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತುಂಬು ಗರ್ಭೀಣಿಯಾಗಿದ್ದು ಸದ್ಯದಲ್ಲೇ ಮಗುವಿನ ಆಗಮನವಾಗಲಿದೆ. ಸೆಪ್ಟೆಂಬರ್​ ತಿಂಗಳಿನಲ್ಲಿ ಮಗು ಹುಟ್ಟುತ್ತಿರುವುದಾಗಿ  ನಟಿ ಈಚೆಗೆ ಸೋಷಿಯಲ್‌ ಮೀಡಿಯಾದಲ್ಲಿ ಬಹಿರಂಗಪಡಿಸಿದ್ದರು. ಈ ಮೊದಲು ದೀಪಿಕಾ ಗರ್ಭಿಣಿ ಎಂಬುದನ್ನು ಸಾಕಷ್ಟು ಮಂದಿ ಅನುಮಾನದಿಂದ ನೋಡಿದ್ದರು. ಇದೀಗ IVF ಎಕ್ಸ್‌ಪರ್ಟ್ ಡಾ. ಗೌರಿ ಅಗರ್ವಾಲ್ ಎಂಬಾಕೆ ದೀಪಿಕಾ ಗರ್ಭಿಣಿಯಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಬಾಲಿವುಡ್‌ ನಲ್ಲಿ ಅನೇಕ ನಟಿಯರು ತುಂಬಾ ಯಂಗ್ ಆಗಿದ್ದರೆ ನಾರ್ಮಲ್‌ ಮಗು ಹೆರುತ್ತಾರೆ. ಆದರೆ ಕೆಲವು ನಟಿಯರು ವಯಸ್ಸಾಗಿದೆ ಎಂದರೆ ಅವರು ಐವಿಎಫ್ ಮೊರೆ ಹೋಗುತ್ತಾರೆ.  ದೀಪಿಕಾ ಪಡುಕೋಣೆ ಈಗ ಗರ್ಭಿಣಿ ಎಂಬುದು ವಿವಾದದಲ್ಲಿದೆ. ಬಾಲಿವುಡ್‌ ಅಂಗಳದಲ್ಲಿ ದೀಪಿಕಾ ಪ್ರಗ್ನೆಂಟ್‌ ಅಥವಾ ಸರೋಗಸಿ ಮೂಲಕ ಮಗು ಹೆಡೆಯುತ್ತಾರೆ ಎಂಬುದು  ಒಂದು ಚರ್ಚಿತ ವಿಷಯವಾಗಿದೆ ಎಂದಿದ್ದಾರೆ. ಅದಕ್ಕೆ ನಿರೂಪಕ ಅವರು ಬೇಬಿ ಬಂಪ್ ಹೊಂದಿರುವ ಫೋಟೋ ವಿಡಿಯೋಗಳನ್ನು ದಿನಾಲು ನೋಡುತ್ತಿದ್ದೇವೆ  ಎಂದಿದ್ದಕ್ಕೆ ಉತ್ತರಿಸಿದ ಡಾ. ಗೌರಿ ಅಗರ್ವಾಲ್ ಅವರನ್ನು ನೋಡುವಾಗ  ಆರ್ಟಿಫಿಶಲ್ ಬೇಬಿ ಬಂಪ್ ಆಗಿರುವ ಸಾಧ್ಯತೆ…

Read More

ಸ್ಯಾಂಡಲ್ ವುಡ್ ಸ್ಟಾರ್ ಜೋಡಿ ಭುವನ್ ಹಾಗೂ ಹರ್ಷಿಕಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ವರ್ಷ ಆಗಸ್ಟ್​ನಲ್ಲಿ ವಿವಾಹವಾಗಿದ್ದ ಜೋಡಿಗಳು ವರ್ಷ ತುಂಬುವುದರೊಳಗೆ ಸಿಹಿ ಸುದ್ದಿ ನೀಡಿದ್ದಾರೆ. ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೋಷಕರಾಗುತ್ತಿದ್ದು ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ. ಅಕ್ಟೋಬರ್​ನಲ್ಲಿ ಭುವನ್ ಹಾಗೂ ಹರ್ಷಿಕಾ ಮನೆಗೆ ಹೊಸ ಅಥಿತಿ ಆಗಮನವಾಗಲಿದೆ. ತಾಯಿಯಾಗುತ್ತಿರುವ ಸಂಭ್ರಮವನ್ನು ನಟಿ ಹರ್ಷಿಕಾ ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ. ಹರ್ಷಿಕಾ, ಭುವನ್ ಹಾಗೂ ಅವರ ಕುಟುಂಬದವರು ಕೊಡವ ಶೈಲಿಯ ಉಡುಗೆ ತೊಟ್ಟು ಫೋಟೊಶೂಟ್ ನಲ್ಲಿ ಮಿಂಚಿದ್ದಾರೆ. ಅನೇಕ ವರ್ಷಗಳಿಂದ ಸ್ನೇಹಿತರಾಗಿದ್ದ ಹರ್ಷಿಕಾ‌ ಮತ್ತು ಭುವನ್ ಪೊನ್ನಣ್ಣ ಬಳಿಕ ಮನೆಯವರ ಒಪ್ಪಿಗೆ ಮೇರೆಗೆ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಕೊಡವ ಸಂಪ್ರದಾಯದಂತೆ ವಿರಾಜಪೇಟೆಯ ಅಮ್ಮತ್ತಿಯಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀದ ಮೊದಲ ಮಗುವಿನ ಆಗಮನಕ್ಕಾಗಿ ದಂಪತಿ ಎದುರು ನೋಡುತ್ತಿದ್ದಾರೆ. ತಾವು ಪೋಷಕರಾಗುತ್ತಿರೋ ವಿಚಾರ ಭುವನ್ ಮತ್ತು ಹರ್ಷಿಕಾ ತಮ್ಮ ಸಾಮಾಜಿಕಾ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.…

Read More

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಘಟನೆ ನಡೆದು ಸಾಕಷ್ಟು ದಿನ ಕಳೆದಿದ್ದರು ನಟಿ ಸಮಲತಾ ಅಂಬರೀಶ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಕೊನೆಗೂ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನಟಿ ಪ್ರತಿಕ್ರಿಯಿಸಿದ್ದಾರೆ. ದರ್ಶನ್‌ರನ್ನು ತಮ್ಮ ದೊಡ್ಡ ಮಗ ಎಂದು ಸುಮಲತಾ ಅಂಬರೀಷ್‌ ಹೇಳುತ್ತಿರುತ್ತಾರೆ. ದರ್ಶನ್‌ ಕೂಡ ಸುಮಲತಾ ಅವರನ್ನು ಮದರ್‌ ಇಂಡಿಯಾ ಎಂದೇ ಕರೆಯುತ್ತಿದ್ದರು. ಅದರೆ, ಕೊಲೆ ಕೇಸ್‌ ಆಗಿ ಇಷ್ಟು ದಿನಗಳಾದರೂ ದರ್ಶನ್‌ ಪರವಾಗಿಯಾಗಲಿ, ವಿರುದ್ಧವಾಗಿ ಆಗಲಿ ಸುಮಲತಾ ಅಂಬರೀಷ್‌ ಹಾಗೂ ಅವರ ಪುತ್ರ ಅಭಿಷೇಕ್‌ ಅಂಬರೀಷ್‌ ಮಾತನಾಡಿರಲಿಲ್ಲ. ಅದರೆ ಇದೀಗ ತಮ್ಮ ಇನ್ಸ್‌ಟಾಗ್ರಾಮ್‌ ಖಾತೆಯಲ್ಲಿ ಕ್ರಿಪ್ಟಿಕ್‌ ಪೋಸ್ಟ್‌ ಹಂಚಿಕೊಂಡಿರುವ ಸುಮಲತಾ ಅಂಬರೀಷ್‌, ದರ್ಶನ್‌ ಪ್ರಕರಣದ ಬಗ್ಗೆ ಮಾರ್ಮಿಕವಾಗಿ ಉತ್ತರ ನೀಡಿದ್ದಾರೆ ಎನ್ನಲಾಗಿದೆ. ಇನ್ಸ್‌ಟಾಗ್ರಾಮ್‌ ಸ್ಟೋರೀಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸುಮಲತಾ, ಭಗವದ್ಗೀತೆಯಲ್ಲಿ ಕೃಷ್ಣ ಹೇಳಿದ ಸಾಲನ್ನು ಹಂಚಿಕೊಂಡಿದ್ದಾರೆ. ‘ ಎಲ್ಲವೂ ಸರಿ ಹೋಗುವ ಮೊದಲು ಬಹಳಷ್ಟು ತಪ್ಪಾಗುತ್ತದೆ. ಈ…

Read More

ಒಂದು ಕಾಲದಲ್ಲಿ ಬಾಲಿವುಡ್ ಚಿತ್ರರಂಗದಲ್ಲಿ ಸ್ಟಾರ್ ಆಗಿ ಮೆರೆಯುತ್ತಿದ್ದ ಅಕ್ಷಯ್ ಕುಮಾರ್ ಸದ್ಯ ಸೈಲೆಂಟ್ ಆಗಿದ್ದಾರೆ. ಅಕ್ಕಿ ನಟನೆಯ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಸೋಲುತ್ತಿವೆ. ಅಕ್ಷಯ್ ಕುಮಾರ್ ಸಿನಿಮಾಗೆ ಬಂಡವಾಳ ಹೂಡಿದ ನಿರ್ಮಾಪಕರು ಹಾಕಿದ ಹಣವು ಬರದೆ ಕೈ ಸುಟ್ಟುಕೊಳ್ಳುತ್ತಿದ್ದಾರೆ. ಈ ಮಧ್ಯೆ ಅಕ್ಷಯ್ ಕುಮಾರ್ ತಮ್ಮ ಸಿನಿಮಾಗೆ ಬಂಡವಾಳ ಹೂಡಿ ಹಣ ಕಳೆದುಕೊಂಡಿದ್ದ ನಿರ್ಮಾಪಕರ ಸಹಾಯಕ್ಕೆ ನಿಂತಿದ್ದಾರೆ. ಇತ್ತೀಚೆಗೆ ಅಕ್ಷಯ್ ಕುಮಾರ್ ನಟನೆಯ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾಗೆ ಬಾಲಿವುಡ್​ ನಿರ್ಮಾಪಕರಾದ ವಶು ಭಗ್ನಾನಿ ಹಾಗೂ ಜಾಕಿ ಭಗ್ನಾನಿ ಅವರು ಬಂಡವಾಳ ಹೂಡಿದ್ದರು. ಆದರೆ ಬಾಕ್ಸ್​ ಆಫೀಸ್​ನಲ್ಲಿ ಆ ಸಿನಿಮಾ ಮುಗ್ಗರಿಸಿತು. ಅದರ ಪರಿಣಾಮವಾಗಿ ನಿರ್ಮಾಪಕರಿಗೆ ಭಾರಿ ನಷ್ಟ ಆಯಿತು. ಈಗ ಅವರ ಸಹಾಯಕ್ಕೆ ಅಕ್ಷಯ್​ ಕುಮಾರ್​ ನಿಂತಿದ್ದಾರೆ. ‘ನನ್ನ ಸಂಭಾವನೆಯನ್ನು ತಡವಾಗಿ ಕೊಡಿ ಪರವಾಗಿಲ್ಲ’ ಎಂದು ಅಕ್ಷಯ್​ ಕುಮಾರ್​ ಹೇಳಿದ್ದಾರೆ. ಸುಮಾರು 300 ಕೋಟಿ ರೂಪಾಯಿ ಬಜೆಟ್​ನಲ್ಲಿ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ನಿರ್ಮಾಣ…

Read More