Author: Author AIN

ದಕ್ಷಿಣ ಸ್ವಿಟ್ಜರ್ಲೆಂಡ್ ನಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ನಾಲ್ಕಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು ಹಲವರು ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಪೊಲೀಸರು ಮತ್ತು ಸ್ವಿಸ್ ರಾಜ್ಯ ಮಾಧ್ಯಮಗಳನ್ನು ಉಲ್ಲೇಖಿಸಿ ಸಿಎನ್‌ಎನ್ ವರದಿ ಮಾಡಿದೆ. ಮ್ಯಾಗಿ ಕಣಿವೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೂವರು ಸಾವನ್ನಪ್ಪಿದ್ದಾರೆ, ಸಾಸ್-ಗ್ರಂಡ್ನ ಹೋಟೆಲ್ನಲ್ಲಿ ಇನ್ನೊಬ್ಬ ವ್ಯಕ್ತಿಯ ಶವ ಪತ್ತೆಯಾಗಿದೆ ಎಂದು ಸ್ವಿಟ್ಜರ್ಲೆಂಡ್ನ ವಾಲೈಸ್ ಕ್ಯಾಂಟನ್ ಪೊಲೀಸರು ತಿಳಿಸಿದ್ದಾರೆ, ಆರಂಭಿಕ ಸಂಶೋಧನೆಗಳು ವೇಗವಾಗಿ ಏರುತ್ತಿರುವ ನೀರಿನಿಂದ ಅವರು ಭಯಭೀತರಾಗಿದ್ದರು ಎಂದು ಸೂಚಿಸಿದೆ ಎಂದು ಸಿಎನ್‌ಎನ್ ವರದಿ ಮಾಡಿದೆ. ಇದಲ್ಲದೆ, ಶನಿವಾರ ಸಂಜೆಯಿಂದ ಬಿನ್ ಗ್ರಾಮದಲ್ಲಿ ಕಾಣೆಯಾದ 52 ವರ್ಷದ ವ್ಯಕ್ತಿಗಾಗಿ ಶೋಧ ನಡೆಯುತ್ತಿದೆ ಎಂದು ವಲೈಸ್ ಕ್ಯಾಂಟೋನಲ್ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿನ್ ನಲ್ಲಿ ಕಾಣೆಯಾದ ವ್ಯಕ್ತಿ ಮತ್ತು ಸಾಸ್-ಗ್ರಂಡ್ ನಲ್ಲಿ ಶವವಾಗಿ ಪತ್ತೆಯಾದ ವ್ಯಕ್ತಿಯ ಪ್ರಕರಣದ ಬಗ್ಗೆ ಪಬ್ಲಿಕ್ ಪ್ರಾಸಿಕ್ಯೂಟರ್ ಕಚೇರಿ ತನಿಖೆ ಆರಂಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ದಕ್ಷಿಣ ಭಾರತದ ನಟಿ ನಿವೇತಾ ಪೇತುರಾಜ್ ಇತ್ತೀಚಿನ ದಿನಗಳಲ್ಲಿ ಸಿನಿಮಾಗಿಂತ ಖಾಸಗಿ ವಿಚಾರಗಳಿಂದ ಹೆಚ್ಚೆಚ್ಚು ಸುದ್ದಿಯಾಗ್ತಿದ್ದಾರೆ. ಇದೀಗ ತನಗೆ ಬಾಯ್‌ಫ್ರೆಂಡ್ ಮಾಡಿದ ಮೋಸವನ್ನು ನಟಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ನಾವು ಏನಾದರೂ ನೆಗೆಟಿವ್ ಆಗಿ ಯೋಚಿಸಿದರೆ ಅದು ಸಂಭವಿಸುತ್ತದೆ. ನನ್ನ ಗೆಳೆಯ ನನಗೆ ಮೋಸ ಮಾಡುತ್ತಾನೆ ಎಂದು ಭಾವಿಸಿದೆ. ಅದೇ ಸಂಭವಿಸಿತು. ಆತ ನನಗೆ ಮೋಸ ಮಾಡಿ ಬೇರೆ ಹುಡುಗಿಯ ಜೊತೆ ಹೋಗಿದ್ದಾನೆ ಎಂದು ಬೇಸರದಿಂದ ನಟಿ ನಿವೇತಾ ಹೇಳಿದ್ದಾರೆ. ಬಹುಬಾಷಾ ನಟಿ ನಿವೇತಾ ಪೇತುರಾಜ್‌ ಮೂಲತಃ ಕಾಲಿವುಡ್‌ ಸಿನಿರಂಗದವರು, ಅದ್ರೆ ಈ ಚೆಲುವೆಗೆ ಅಲ್ಲಿ ಒಳ್ಳೆಯ ಅವಕಾಶಗಳು ಸಿಗುತ್ತಿಲ್ಲ. ಮಧುರೈನಲ್ಲಿ ಜನಿಸಿದ ನಟಿ ತಮಿಳಿನ ‘ಒರು ನಾಳ್ ಕೂತು’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಅದರ ನಂತರ, ಅವರು ಉದಯನಿಧಿ ಸ್ಟಾಲಿನ್ ಜೊತೆ ಎಮ್ಮನಸು ತಂಗಂ, ಜಯಂ ರವಿ ಜೊತೆ ದಿಕ್ ದಿಕ್ ದಿಕ್, ವಿಜಯ್ ಆಂಟನಿ ಜೊತೆ ತಿಮಿರು ಪುಟಿಚವನ್ ಮತ್ತು ವಿಜಯ್ ಸೇತುಪತಿ ಜೊತೆ ಸಂಗತ್…

Read More

ಸೆಲೆಬ್ರಿಟಿಗಳ ಬರ್ತ್​ಡೇ ಬಂತು ಎಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಸಂಭ್ರಮ. ಆದರೆ ಕಳೆದ ಕೆಲವು ವರ್ಷಗಳಿಂದ ಕೆಲ ಸ್ಟಾರ್ ನಟರುಗಳು ತಮ್ಮ ಬರ್ತಡೇಯನ್ನು ಸೆಲೆಬ್ರೇಟ್ ಮಾಡಿಕೊಳ್ಳುತ್ತಿಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಇದೀಗ ಗೋಲ್ಡನ್ ಸ್ಟಾರ್ ಗಣೇಶ್ ಕೂಡ ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದೆ ಇರಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮೂಲಕ ತಿಳಿಸಿದ್ದಾರೆ. ‘ನನ್ನ ಆತ್ಮೀಯ ಅಭಿಮಾನಿಗಳೇ, ಜುಲೈ 2ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯವಿಲ್ಲ. ಅದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತ್ತಿಲ್ಲ. ಹೀಗಾಗಿ ನನ್ನ ಪ್ರೀತಿಯ ಅಭಿಮಾನಿಗಳು ಮನೆಯ ಬಳಿ ಬಾರದೇ ತಾವು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆಶೀರ್ವದಿಸಿ. ಮುಂದಿನ ವರ್ಷ ಖಂಡಿತ ಒಟ್ಟಿಗೆ ಹುಟ್ಟುಹಬ್ಬ ಆಚರಿಸೋಣ. ಅನಾನುಕೂಲಕ್ಕೆ ಕ್ಷಮೆಯಿರಲಿ. ಎಂದಿನ ತಮ್ಮ ಅಭಿಮಾನದ ನಿರೀಕ್ಷೆಯೊಂದಿಗೆ, ನಿಮ್ಮವ ಗಣೇಶ’ ಎಂದು ಬರೆದುಕೊಂಡಿದ್ದಾರೆ. ಮೊದಲು ನಿರೂಪಕರಾಗಿ ಗುರುತಿಸಿಕೊಂಡಿದ್ದ ಗಣೇಶ್ ಆ ಬಳಿಕ ಮುಂಗಾರುಮಳೆ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡರು.…

Read More

ಟರ್ಕಿಯ ಇಜ್ಮಿರ್ನ್ ನಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ ಐವರು ಮೃತಪಟ್ಟಿದ್ದು 63 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಎಲ್ಲರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ರೆಸ್ಟೋರೆಂಟ್ ನಲ್ಲಿದ್ದ ಟ್ಯಾಂಕ್ ನಲ್ಲಿ ದೊಡ್ಡ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, 63 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಘಟನೆಯು ರೆಸ್ಟೋರೆಂಟ್ ಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸ್ಫೋಟವು ಎಷ್ಟು ತೀವ್ರವಾಗಿತ್ತೆಂದರೆ, ರಸ್ತೆಯೂ ಹಾನಿಗೊಳಗಾಗಿತ್ತು ಮತ್ತು ಸುತ್ತಲೂ ದೊಡ್ಡ ಸ್ಫೋಟದ ಶಬ್ದದಿಂದಾಗಿ ಜನರು ಭಯಭೀತರಾಗಿದ್ದರು. ಆದಾಗ್ಯೂ, ಹತ್ತಿರದ ಕಟ್ಟಡಗಳಿಗೆ ಸಣ್ಣ ಹಾನಿ ಮಾತ್ರ ಸಂಭವಿಸಿದೆ. 20 ರಕ್ಷಣಾ ಕಾರ್ಯಕರ್ತರನ್ನು ತಕ್ಷಣ ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಟರ್ಕಿಯ ಆಂತರಿಕ ಸಚಿವ ಅಲಿ ಯೆರ್ಲಿಕಾಯಾ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. ಇಜ್ಮಿರ್ ಗವರ್ನರ್ ಸುಲೇಮಾನ್ ಆಲ್ಬನ್ ಆಸ್ಪತ್ರೆಯಲ್ಲಿ…

Read More

ಡಾರ್ಲಿಂಗ್ ಪ್ರಭಾಸ್, ದೀಪಿಕಾ ಪಡುಕೋಣೆ, ಬಿಗ್ ಬಿ ಅಮಿತಾಭ್ ಬಚ್ಚನ್, ಕಮಲ್ ಹಾಸನ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಕಲ್ಕಿ 2898 ಎಡಿ’ ಚಿತ್ರ ಜೂನ್ 27ರಂದು ಬಿಡುಗಡೆಯಾಗಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಸಿನಿಮಾ ಬಗ್ಗೆ ಪ್ರೇಕ್ಷಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಇದೀಗ ಕಲ್ಕಿ ಚಿತ್ರದಲ್ಲಿ ವಿಲನ್ ಆಗಿ ನಟಿಸಿರುವ ಕಮಲ್ ಹಾಸನ್ 7 ನಿಮಿಷ ನಟಿಸಿದಕ್ಕೆ 20 ಕೋಟಿ ರೂ. ಸಂಭಾವನೆ ಪಡೆದುಕೊಂಡಿದ್ದಾರೆ ಎಂಬ ಸುದ್ದಿ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ಸಿನಿಮಾದ ಆರಂಭದಲ್ಲಿ ಹಣ್ಣು ಹಣ್ಣು ಮುದುಕನ ಪಾತ್ರದಲ್ಲಿ ಕಮಲ್ ಎಂಟ್ರಿ ಕೊಡ್ತಾರೆ. ಆದರೆ ಚಿತ್ರದ ಅಂತ್ಯದಲ್ಲಿ ಅವರ ನಿಜವಾದ ಲುಕ್ ರಿವೀಲ್ ಆಗುತ್ತದೆ. ಅದನ್ನು ನೋಡಿಯೇ ಫ್ಯಾನ್ಸ್ ದಂಗಾಗಿದ್ದಾರೆ. ಡೈರೆಕ್ಟರ್ ನಾಗ್ ಅಶ್ವಿನ್ ಕತೆ ಮಾಡಿದಾಗಲೇ ಯಾಸ್ಕಿನ್ ಪಾತ್ರವಿತ್ತಂತೆ ಆದರೆ ಯಾರು ಈ ಪಾತ್ರ ಸೂಕ್ತ ಎಂದು ಫೈನಲ್ ಆಗಿರಲಿಲ್ಲವಂತೆ. ಬಳಿಕ ಚಿತ್ರೀಕರಣ ಪ್ರಾರಂಭಿಸಿದ ವೇಳೆ, ಕೊಂಚ ಅಳುಕಿನಿಂದಲೇ ಕಮಲ್ ಹಾಸನ್‌ರನ್ನು ಯಾಸ್ಕಿನ್ ಪಾತ್ರಕ್ಕೆ ಕೇಳಿದ್ರಂತೆ ನಾಗ್ ಅಶ್ವಿನ್.…

Read More

ನಾನು ಚಿಕ್ಕ ಹುಡುಗನಾಗಿದ್ದಾಗ ನೋಡಿದಷ್ಟು ಹಣವನ್ನು ದರ್ಶನ್ ಈವತ್ತಿನವರೆಗೂ ನೋಡಿರಲು ಸಾಧ್ಯವೇ ಇಲ್ಲ. ಅಷ್ಟು ದೊಡ್ಡ ಮೊತ್ತದ ಹಣವಿರುವ ದೊಡ್ಡ ಕುಟುಂಬದಲ್ಲಿ ಹುಟ್ಟಿ ಬೆಳೆದಿದ್ದೇನೆ. ನಾವು ಅವರ ಹೆಸರೇಳಿಕೊಂಡು ಬದುಕುವುದು ಅಲ್ಲ, ನಮ್ಮಿಂದ ಅವರು ಅನ್ನ ತಿನ್ನುತ್ತಿದ್ದಾರೆ. ನಾನು ದುಡ್ಡು ಕೊಟ್ಟು ಸಿನಿಮಾ ಮಾಡಿದ್ದೇನೆ ಹೊರತು ಯಾವುದೇ ಪುಗಸಟ್ಟೆ ಸಿನಿಮಾ ಮಾಡಿಸಿಲ್ಲ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಹೇಳಿದ್ದಾರೆ. ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಲ್ಲಿ ಮಾತನಾಡಿದ ಅವರು, ದರ್ಶನ್ ಅವರ ಅಭಿಮಾನಿಗಳು ನೀವು ದರ್ಶನ್ ನಟನೆಯಿಂದ ಹಣ ಮಾಡಿಕೊಂಡಿದ್ದೀರಿ ಎಂದು ಹೇಳಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿದರು. ನಾನು ಚಿಕ್ಕವನಿದ್ದಾಗ ಅಂದರೆ ಆವಾಗ ನೋಡಿದ್ದೇನಲ್ಲ, ಅಷ್ಟು ದುಡ್ಡನ್ನು ದರ್ಶನ್ ಇವತ್ತಿನವರೆಗೂ ನೋಡಿಲ್ಲ. ದೊಡ್ಡ ಕುಟುಂಬದಲ್ಲಿ ಹುಟ್ಟಿ ಬೆಳೆದಿದ್ದೇನೆ. ನಾನು ಮನೆ ಕಟ್ಟಿರುವ ಈ ಜಾಗವಿದೆಯಲ್ಲಾ ಇದು 1.5 ಎಕರೆ ಭೂಮಿಯಾಗಿದೆ. ನಮ್ಮನೆ ಸುತ್ತಲಿರುವ ಜಾಗ ಮಾರಾಟ ಮಾಡಿದರೆ 2 ಲ್ಯಾಂಬೋರ್ಗಿನಿ ಕಾರು ಖರೀದಿ ಮಾಡುವಷ್ಟು ಹಣ ಬರುತ್ತದೆ. ಆದರೆ, ನನಗೆ ಅಗತ್ಯವಿಲ್ಲದ ಕಾರಣ…

Read More

ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ದರ್ಶನ್ ಎಂಡ್ ಗ್ಯಾಂಗ್ ಕಿಡ್ನ್ಯಾಪ್ ಮಾಡಿ ಭೀಕರವಾಗಿ ಹತ್ಯೆ ಮಾಡಿತ್ತು. ಸದ್ಯ ಘಟನೆ ಸಂಬಂಧ ನಟ ದರ್ಶನ್ ಜೈಲು ಸೇರಿದ್ದು ಇದರಿಂದ ಇಡೀ ಚಿತ್ರರಂಗ ಆಘಾತಕ್ಕೆ ಒಳಗಾಗಿದೆ. ಈ ಬಗ್ಗೆ ಸ್ಯಾಂಡಲ್ ವುಡ್ ನಟಿ ಅದ್ವಿತಿ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ಬೇಸರ ತಂದಿದೆ. ಯಾರು ಯಾರಿಗೂ ಕೆಟ್ಟ ಕಾಮೆಂಟ್ ಮಾಡಬೇಡಿ. ಕೆಟ್ಟ ಕಾಮೆಂಟ್ ಮಾಡೋರನ್ನ ಬ್ಲಾಕ್ ಮಾಡಿಬಿಡಿ ಅಷ್ಟೇ. ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದಿದ್ದಾರೆ. ದರ್ಶನ್ ಸರ್ ನಮ್ ಫ್ಯಾಶನ್ ಶೋ ಕಾರ್ಯಕ್ರಮಕ್ಕೆ ಬಂದಿದ್ರು. ಅವತ್ತು ಸಿಕ್ಕಾಗ ಚೆನ್ನಾಗಿ ಮಾತಾಡಿಸಿದ್ರು. ಮತ್ತೆ ಯಾವತ್ತೂ ಮುಖಾಮುಖಿ ಆಗಿಲ್ಲ. ಈ ಕೇಸ್ ನಲ್ಲಿ ದರ್ಶನ್ ಸರ್ ನಿರಾಪರಾಧಿ ಎಂದು ಆಚೆ ಬರಲಿ ಅಂತ ಕೇಳಿಕೊಳ್ಳುತ್ತೇನೆ ಎಂದರು.

Read More

ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಕತಾರ್ ಪ್ರಧಾನಿ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಬಿನ್ ಜಸ್ಸಿಮ್ ಅಲ್ ಥಾನಿ ಅವರನ್ನು ದೋಹಾದಲ್ಲಿ ಭೇಟಿ ಮಾಡಿದರು. ಈ ವೇಳೆ ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಿದರು ಎನ್ನಲಾಗಿದೆ. ಒಂದು ದಿನದ ಭೇಟಿಗಾಗಿ ದೋಹಾಗೆ ಆಗಮಿಸಿದ ಜೈಶಂಕರ್ ಅವರು ಶೇಖ್ ಮೊಹಮ್ಮದ್ ಅವರೊಂದಿಗೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಜೈಶಂಕರ್ ಅವರು ‘ಎಕ್ಸ್’ನಲ್ಲಿ ಪೋಸ್ಟ್‌ ಮಾಡಿದ್ದು ಕತಾರ್‌ನ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಥಾನಿ ಅವರನ್ನು ದೋಹಾದಲ್ಲಿ ಭೇಟಿಯಾಗಲು ಸಂತೋಷವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭ ಹಾರೈಕೆಗಳನ್ನು ಅಮೀರ್ ಅವರಿಗೆ ತಿಳಿಸಿದರು ಎಂದು ಬರೆದುಕೊಂಡಿದ್ದಾರೆ. “ನಾವು ರಾಜಕೀಯ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳ ಮೇಲೆ ಕೇಂದ್ರೀಕರಿಸುವ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿದ್ದೇವೆ” ಎಂದು ಅವರು ಹೇಳಿದರು. ಪ್ರಾದೇಶಿಕ ಮತ್ತು…

Read More

ಟಾಲಿವುಡ್ ಬ್ಯೂಟಿ ನಟಿ ಸಮಂತಾ ವಿಚ್ಛೇದನದ ಬಳಿಕ ಸಿನಿಮಾಗಳಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಆರೋಗ್ಯದ ಸಮಸ್ಯೆಯ ನಡುವೆಯೂ ಸಿನಿಮಾಗಳ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ನಟಿ ಕಳೆದ ಒಂದು ವರ್ಷದಿಂದ ಸಿನಿಮಾದಿಂದ ಬಿಡುವು ಪಡೆದು ಆರೋಗ್ಯದ ಕಡೆಗೆ ಗಮನ ಹರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿಯೂ ಸಕ್ರಿಯರಾಗಿರುವ ಸಮಂತಾ, ಹಿಂದೆ ತಾವು ಮಾಡಿರುವ ತಪ್ಪಿನ ಬಗ್ಗೆ ಹೇಳಿಕೊಂಡಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿದ್ದ ನಟಿ ಸಮಂತಾ ವ್ಯಾಯಾಮ, ಆಹಾರ ಕ್ರಮದ ಬದಲಾವಣೆಗಳಿಂದ ಮತ್ತೆ ಆರೋಗ್ಯವಂತರಾದರು. ಸಿನಿಮಾಗಳಿಂದ ಬಿಡುವು ಪಡೆದಿದ್ದ ಸಮಂತಾ ಈ ಸಮಯದಲ್ಲಿ ಪಾಡ್​ಕಾಸ್ಟ್ ಒಂದನ್ನು ಆರಂಭಿಸಿ ಆರೋಗ್ಯ ಮತ್ತು ಆಹಾರದ ಬಗ್ಗೆ ವಿವಿಧ ವಿಷಯಗಳನ್ನು ಹಂಚಿಕೊಳ್ಳಲು ಆರಂಭಿಸಿದರು. ವಿಶೇಷವಾಗಿ ಆಹಾರ ಕ್ರಮದ ಬದಲಾವಣೆ, ಗಟ್ ಆರೋಗ್ಯದ ಮಹತ್ವದ ಬಗ್ಗೆ ತಜ್ಞರೊಟ್ಟಿಗೆ ಚರ್ಚಿಸುತ್ತಿರುತ್ತಾರೆ. ಈ ಪಾಡ್​ಕಾಸ್ಟ್​ಗೆ ಟೇಕ್ 20 ಎಂದು ಹೆಸರಿಟ್ಟಿದ್ದಾರೆ. ಪಾಡ್​ಕಾಸ್ಟ್​ನಲ್ಲಿ ಆರೋಗ್ಯಕ್ಕೆ ಅವಶ್ಯಕವಾದ ಆಹಾರ ಪದ್ಧತಿಗಳ ಬಗ್ಗೆ ಮಾತನಾಡಿದ್ದಾರೆ. ಆದರೆ ಸಮಂತಾರ ಅಭಿಮಾನಿಯೊಬ್ಬ, ‘ನೀವು ಈಗ ಆರೋಗ್ಯಕರ ಆಹಾರ ಪದ್ಧತಿ ಬಗ್ಗೆ ಮಾತನಾಡುತ್ತೀರಿ ಆದರೆ ನೀವೇ ಆರೋಗ್ಯಕರವಲ್ಲದ ಆಹಾರ,…

Read More

ನೈಜೀರಿಯಾದ ಈಶಾನ್ಯ ರಾಜ್ಯ ಬಾರ್ನೊದಲ್ಲಿ ಸಂಭವಿಸಿದ ಆತ್ಮಾಹುತಿ ಸರಣಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 18 ಮಂದಿ ಮೃತಪಟ್ಟಿದ್ದು, 48 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ತುರ್ತು ಸೇವೆ ನಿರ್ವಹಣಾ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ. ಮದುವೆ ಸಮಾರಂಭ ನಡೆಯುತ್ತಿದ್ದ ವೇಳೆ ಮೊದಲ ಸ್ಪೋಟ ಸಂಭವಿಸಿದೆ. ಗ್ವೋಜಾ ಸರ್ಕಾರಿ ಆಸ್ಪತ್ರೆಯಲ್ಲಿ ಎರಡನೇ ಸ್ಟೋಟ ಮತ್ತು ಅಂತ್ಯಸಂಸ್ಕಾರದ ವೇಳೆ 3ನೇ ಸ್ಫೋಟ ಸಂಭವಿಸಿದೆ. ಬಾರ್ನೊ ರಾಜ್ಯದ ತುರ್ತು ಸೇವೆಗಳ ನಿರ್ವಹಣಾ ಸಂಸ್ಥೆಯ (ಎಸ್‌ಇಎಂಎ) ಡಿಜಿ ಬರ್ಕಿಂಡೋ ಮುಹಮ್ಮ ದ್ ಸೈದು ಅವರು ಗ್ವೋಜಾ ಪಟ್ಟಣದ ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರಲ್ಲಿ ಮಹಿಳೆಯರು, ಪುರುಷರು ಮತ್ತು ಮಕ್ಕಳು ಸೇರಿದ್ದಾರೆ ಎನ್ನಲಾಗಿದೆ. ಇದುವರೆಗೆ, ಮಕ್ಕಳು, ಪುರುಷರು, ಮಹಿಳೆಯರು ಮತ್ತು ಗರ್ಭಿಣಿಯರನ್ನು ಒಳಗೊಂಡಂತೆ 18 ಸಾವುಗಳು ವರದಿಯಾಗಿವೆ ಎಂದು ಏಜೆನ್ಸಿಯ ಮುಖ್ಯಸ್ಥ ಬರ್ಕಿಂಡೋ ಸೈದು ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ 19 ಜನರನ್ನು ಪ್ರಾದೇಶಿಕ ರಾಜಧಾನಿ ಮೈದುಗುರಿಗೆ ಕರೆದೊಯ್ಯಲಾಯಿತು, ಇತರ 23 ಜನರು ಸ್ಥಳಾಂತರಿಸುವಿಕೆಗೆ ಕಾಯುತ್ತಿದ್ದಾರೆ ಎಂದು…

Read More